ಕೃಷಿ ವಿವಿಗಳಲ್ಲಿ ಎಷ್ಟು ತಳಿ ಅಭಿವೃದ್ಧಿ ಆಗಿದೆ ಎಂಬುದು ಮುಖ್ಯ: ಸಿಎಂ ಸಿದ್ದರಾಮಯ್ಯ

Date:

  • ಕೃಷಿ ವಿವಿಗಳಿಂದ ಎಷ್ಟು ಪದವೀಧರರು ಹೊರಗೆ ಬಂದರು ಎಂಬುದು ಮುಖ್ಯವಲ್ಲ
  • ವಾತಾವರಣಕ್ಕೆ ತಕ್ಕಂತೆ ರೈತ ಪರವಾದ ಸಂಶೋದನೆಗಳು ನಡೆಯಬೇಕು: ಸಿಎಂ

ಕೃಷಿ ವಿಶ್ವವಿದ್ಯಾಲಯಗಳಿಂದ ಎಷ್ಟು ಪದವೀಧರರು ಹೊರಗೆ ಬಂದರು ಎನ್ನುವುದು ಮುಖ್ಯವಲ್ಲ. ಎಷ್ಟು ತಳಿಗಳನ್ನು ಅಭಿವೃದ್ಧಿ ಪಡಿಸಿದ್ದೀರಿ ಎನ್ನುವುದು ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಹಿರಿಯೂರು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬಬ್ಬೂರು ಫಾರಂನ ಶತಮಾನೋತ್ಸವ ಮತ್ತು ಸಿರಿಧಾನ್ಯ ಮೇಳ ಹಾಗೂ ತೋಟಗಾರಿಕೆ ಬೆಳೆಗಳ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

“ಸಂಶೋಧನೆಗಳಿಗೆ ಸಕಲ ನೆರವು ನೀಡಲು ಸರ್ಕಾರ ಸಿದ್ದವಾಗಿದೆ ಮತ್ತು ಬದ್ದವಾಗಿದೆ. ಎಷ್ಟು ತಳಿ, ಎಷ್ಟು ರೋಗಕ್ಕೆ ಔಷಧ ಕಂಡುಹಿಡಿದಿದ್ದೀರಿ, ಎಷ್ಟು ರೋಗನಿರೋಧಕ ಔಷಧಗಳನ್ನು ಕಂಡು ಹಿಡಿದಿದ್ದೀರಿ ಎನ್ನುವುದು ನಿಮ್ಮ ಆದ್ಯತೆಯಾಗಲಿ” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಳೆದ ಬೆಳೆಗೆ ಬೆಳೆ ಇಲ್ಲ. ಅತಿವೃಷ್ಟಿ, ಅನಾವೃಷ್ಠಿ, ಬರಗಾಲ ರೈತರನ್ನು ಕಾಡುತ್ತಿದೆ. ಹೀಗಾಗಿ ಬದಲಾದ ವಾತಾವರಣಕ್ಕೆ ತಕ್ಕಂತೆ ರೈತ ಪರವಾದ ಸಂಶೋದನೆಗಳು ನಡೆಯಬೇಕು. ಚಿತ್ರದುರ್ಗ ಜಿಲ್ಲೆಯ ಎಲ್ಲ ತಾಲ್ಲೂಕುಗಳು ಬರಗಾಲಕ್ಕೆ ತುತ್ತಾಗಿವೆ” ಎಂದರು.

“80 ಲಕ್ಷ ಹೆಕ್ಟೇರ್ ನಲ್ಲಿ ಬಿತ್ತನೆ ಆಗಿದ್ದರೆ 42 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದೆ. ಹೀಗಾಗಿ ರಾಜ್ಯ ಮತ್ತು ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. 4860 ಕೋಟಿ ಪರಿಹಾರ ಕೋರಿ ಕೇಂದ್ರಕ್ಕೆ ನಾವು ಮನವಿ ಮಾಡಿದ್ದರೂ ನಮಗೆ ಆಗಿರುವ ನಷ್ಟದ ಪ್ರಮಾಣ 30 ಸಾವಿರ ಕೋಟಿಗೂ ಅಧಿಕ. ಇದನ್ನೆಲ್ಲಾ ಕೇಂದ್ರ ಬರ ಅಧ್ಯಯನ ತಂಡ ಪರಿಶೀಲನೆ ನಡೆಸುತ್ತಿದೆ” ಎಂದರು.

“ಚಿತ್ರದುರ್ಗ ಮೊದಲೇ ಬರ ಪೀಡಿತ ಜಿಲ್ಲೆ. ಈಗ ಇನ್ನಷ್ಟು ಬರಗಾಲಕ್ಕೆ ತುತ್ತಾಗಿದೆ. ಕೇಂದ್ರ ಸರ್ಕಾರ ಎಷ್ಟಾದರೂ ಪರಿಹಾರ ನೀಡಲಿ. ನಮ್ಮ ಸರ್ಕಾರ ಮಾತ್ರ ಜನರಿಗೆ, ರೈತರಿಗೆ, ರಾಸುಗಳಿಗೆ, ಗೋವುಗಳಿಗೆ ಏನೂ ತೊಂದರೆ ಆಗದಂತೆ ನೋಡಿಕೊಳ್ಳಲು ಬದ್ದವಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅಧ್ಯಕ್ಷತೆ ವಹಿಸಿದ್ದರು. ಸ್ಮರಣ ಸಂಚಿಕೆಯನ್ನು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಬಿಡುಗಡೆಗೊಳಿಸಿದರು. ಶಾಸಕರಾದ ಟಿ. ರಘುಮೂರ್ತಿ, ಡಾ.ಎ. ಚಂದ್ರಪ್ಪ,  ಕೆ.ಸಿ. ವೀರೇಂದ್ರ ಪಪ್ಪಿ, ಎನ್.ವೈ. ಗೋಪಾಲಕೃಷ್ಣ, ಬಿ.ಜೆ. ಗೋವಿಂದಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ. ನಾರಾಯಣಸ್ವಾಮಿ, ಚಿದಾನಂದ ಎಂ.ಗೌಡ, ಮಾಜಿ ಲೋಕಸಭಾ ಸದಸ್ಯ ಎಂ.ಚಂದ್ರಪ್ಪ, ಮಾಜಿ ಸಚಿವ ಎಚ್. ಆಂಜನೇಯ, ಕೃಷಿ ತಜ್ಞ ಏಕಾಂತಯ್ಯ, ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...