ಭ್ರಷ್ಟರ ಪಾಲಿಗೆ ನಾನು ‘ಡಾಬರಮನ್ ನಾಯಿಯೇ’: ಬಿಜೆಪಿ ಶಾಸಕ ಬಿಪಿ ಹರೀಶ್

Date:

ಸಚಿವ ಎಸ್‌ಎಸ್ ಮಲ್ಲಿಕಾರ್ಜುನ​​ ಅವರಿಗೆ ಹುಷಾರ್​​ ಆಗಿ ಇರಲು ಹೇಳಿ. ಅವರೇ ಹೇಳಿದ ಹಾಗೇ ನಾನು ಭ್ರಷ್ಟರ ಪಾಲಿಗೆ ಡಾಬರಮನ್ ನಾಯಿಯೇ ಎಂದು ಬಿಜೆಪಿ ಶಾಸಕ ಬಿಪಿ ಹರೀಶ್ ತಿರುಗೇಟು ನೀಡಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, “ಡಾಬರಮನ್ ನಾಯಿ ಬಾಯಿ ಹಾಕಿದರೆ ಎಲ್ಲಿ ಹಾಕುತ್ತದೆ ಅವರಿಗೆ ಗೊತ್ತಿದೆ. ನಾನು ಅಷ್ಟು ಸುಲಭಕ್ಕೆ ಬಿಡುವ ಮನುಷ್ಯ ಅಲ್ಲ. ಅಧಿಕಾರಿಗಳನ್ನು ಬಳಸಿಕೊಂಡು ಸಚಿವ ಮಲ್ಲಿಕಾರ್ಜುನ್​​ ಎಫ್​​ಐಆರ್​ ಮಾಡಿಸಿದ್ದಾರೆ. ನಾನು ನೀಡಿದ ಹೇಳಿಕೆಗೆ ಈಗಲೂ ಬದ್ಧ” ಎಂದಿದ್ದಾರೆ.

“ಎಸ್​ಪಿಗೆ ನಾನು ಪೊಮೆರೇನಿಯನ್ ನಾಯಿ ಎಂದು ಹೇಳಿಲ್ಲ. ಪೊಮೆರೇನಿಯನ್ ನಾಯಿ ಮರಿಗಳಂತೆ ಅಧಿಕಾರಿಗಳು ಉಸ್ತುವಾರಿ ಸಚಿವರ ಹಿಂದೆ ಸುತ್ತುತ್ತಿದ್ದಾರೆ ಎಂದು ಹೇಳಿದ್ದೇನೆ. ಎಸ್​ಪಿ ಉಮಾ ಪ್ರಶಾಂಶ್​ಗೆ ಬೇಸರ ಆಗಿದ್ದರೆ ನಾನೇನು ಮಾಡಲು ಆಗುವುದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್‌ಪಿಗೆ ಅವಹೇಳ ಪ್ರಕರಣ ವಿಚಾರವಾಗಿ ತಮ್ಮ ವಿರುದ್ಧ ದಾಖಲಾದ ಕ್ರಿಮಿನಲ್ ಅರ್ಜಿ ರದ್ದು ಪಡಿಸಬೇಕೆಂದು ಕೋರಿ ಶಾಸಕ ಬಿಪಿ ಹರೀಶ್​​ ಹೈಕೋರ್ಟ ಮೊರೆ ಹೋಗಿದ್ದರು. ವಿಚಾರಣೆ ನಡೆಸಿ ಶಾಸಕ ಬಿಪಿ ಹರೀಶ್ ವಿರುದ್ದ ಅವಸರದ ಕ್ರಮ ಬೇಡ ಎಂದು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲು ನ್ಯಾಯಮೂರ್ತಿ ಎಂ.ಐ. ಅರುಣ್ ಆದೇಶಿಸಿದ್ದಾರೆ.

ಬಿ.ಪಿ.ಹರೀಶ್​ಗೆ ಶಿಕಾರಿಪುರ ಡಿವೈಎಸ್​ಪಿಯಿಂದ ನೋಟಿಸ್

ಇನ್ನು ಎಸ್​​ಪಿ ಉಮಾ ಪ್ರಶಾಂತ್ ವಿರುದ್ಧ ಕೀಳುಮಟ್ಟದ ಹೇಳಿಕೆ ವಿಚಾರವಾಗಿ ಶಾಸಕ ಬಿ.ಪಿ.ಹರೀಶ್​ಗೆ ಶಿಕಾರಿಪುರ ಡಿವೈಎಸ್​ಪಿಯಿಂದ ನೋಟಿಸ್​ ನೀಡಲಾಗಿದ್ದು, ಸೆ.17ರಂದು ಬೆಳಗ್ಗೆ 10 ಗಂಟೆಗೆ ಶಿಕಾರಿಪುರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...