ನಾನು ದೈವ ಭಕ್ತನಲ್ಲ, ಸಂವಿಧಾನದ ಭಕ್ತ: ಸಚಿವ ಪ್ರಿಯಾಂಕ್‌ ಖರ್ಗೆ

Date:

“ನಾನು ಯಾವ ದೈವದ ಭಕ್ತನೂ ಅಲ್ಲ, ನಾನು ಸಂವಿಧಾನದ ಭಕ್ತ. ನಾನು ಬುದ್ಧ, ಬಸವ, ಅಂಬೇಡ್ಕರ್, ನಾರಾಯಣ ಗುರು ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಪ್ರತಿಪಾದಿಸಿದ ಸಮಾನತೆ, ಸ್ವಾಭಿಮಾನ ತತ್ವಗಳ ಭಕ್ತ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ದಯೆಯೇ ಧರ್ಮ, ಮಾನವತೆಯೇ ಪರಮದೈವ ಎಂದು ನಂಬಿದವನು ನಾನು, ಸಂವಿಧಾನದಲ್ಲಿ ಆಸ್ತಿಕನಿಗೂ ನಾಸ್ತಿಕನಿಗೂ ಸಮಾನ ಅವಕಾಶವಿದೆ, ಸಮಾನ ಹಕ್ಕುಗಳಿವೆ.. ಇದನ್ನು ಬಿಜೆಪಿಯವರು ಅರಿತುಕೊಳ್ಳಬೇಕು” ಎಂದಿದ್ದಾರೆ.

“ಬಹುಶಃ ನಾನು ಪರಂಪರೆಯ ದೇವಾಲಯಗಳನ್ನು ಸಂದರ್ಶಿಸಿದಷ್ಟು ಬಿಜೆಪಿಯವರು ಹೋಗಿರಲಿಕ್ಕಿಲ್ಲ! ನಾನು ಕಾಶಿ, ಮಥುರಾ, ಬುದ್ಧಗಯಾ, ಅಜ್ಮಿರ್ ದರ್ಗಾ, ಚರ್ಚ್ ಸೇರಿದಂತೆ ಹಲವು ಧಾರ್ಮಿಕ ಕ್ಷೇತ್ರಗಳನ್ನು ಸಂದರ್ಶಿದ್ದೇನೆ, ಭಕ್ತನಾಗಿ ಅಲ್ಲ, ಅಧ್ಯಯನಕಾರನಾಗಿ. ವಿವಿಧ ಕಲೆ, ಸಂಸ್ಕೃತಿ, ಆಚಾರ, ವಿಚಾರ, ಇತಿಹಾಸಗಳನ್ನು ಅಧ್ಯಯನ ಮಾಡುವುದು ನನ್ನ ಆಸಕ್ತಿ. ಮುಂದೆಯೂ ನನ್ನ ಈ ಅಧ್ಯಯನದ ಪ್ರವಾಸಗಳನ್ನು ಮಾಡುತ್ತಿರುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

“ಭಕ್ತಿ, ನಂಬಿಕೆಗಳನ್ನು ಬಲವಂತವಾಗಿ ಹೇರುವುದಕ್ಕೂ ಸಾಧ್ಯವಿಲ್ಲ, ಬಲವಂತವಾಗಿ ಕಿತ್ತು ಹಾಕಲೂ ಸಾಧ್ಯವಿಲ್ಲ ಎಂಬ ಸತ್ಯವನ್ನು ಟೀಕಿಸುವವರು ಅರ್ಥ ಮಾಡಿಕೊಂಡರೆ ಒಳಿತು. ನನ್ನ ಭಕ್ತಿ ಏನಿದ್ದರೂ ಸತ್ಯ, ಸಮಾನತೆಯೆಡೆಗೆ ಮಾತ್ರ. ಯಾರನ್ನೋ ಮೆಚ್ಚಿಸಲು ಡಾಂಬಿಕ ದೈವಭಕ್ತನಂತೆ ತೋರಿಸಿಕೊಳ್ಳುವುದು ನನ್ನ ಜಾಯಮಾನವಲ್ಲ. ಹಾಗೆಯೇ, ರಾಜಕಾರಿಣಿಯೊಬ್ಬನ ಮೌಲ್ಯಮಾಪನವನ್ನು ಆತನ ಕೆಲಸಗಳಿಂದ ಮಾಡಬೇಕೇ ಹೊರತು ಆತನ ಭಕ್ತಿಯಿಂದಲ್ಲ ಎಂಬ ವಾಸ್ತವವನ್ನು ಟೀಕಾಕಾರರು ಅರಿತುಕೊಳ್ಳಬೇಕು” ಎಂದು ಹೇಳಿದರು.

“ಕಣ್ಣಿನಲ್ಲಿ ಕಾಮ, ಮನದಲ್ಲಿ ಕ್ರೋಧ ಪ್ರಾಣದಲ್ಲಿ ಲೋಭ, ಬುದ್ಧಿಯಲ್ಲಿ ಮದ ವಿವೇಕದಲ್ಲಿ ಮತ್ಸರ ಅರುಹಿನಲ್ಲಿ ಮಾಯವುಳ್ಳನ್ನಕ್ಕರ ಎಂತು ಭಕ್ತನೆಂಬೆ?” ಎಂಬ ವಚನ ಉಲ್ಲೇಖಿಸಿ ಟೀಕಿಸುವರಿಗೆ ಅರ್ಪಿಸುತ್ತೇನೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...