ನಾನು ಹಿಂದುಳಿದ ಜಾತಿಗೆ ಸೇರಿದವ ಎಂದು ಗೊತ್ತೇ ಇರಲಿಲ್ಲ: ಸಂಸದ ಯದುವೀರ್

Date:

ಚುನಾವಣೆಗೆ ಮೊದಲು ನನಗೆ ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ. ಮೈಸೂರು ರಾಜ ವಂಶಸ್ಥರು ಹಿಂದುಳಿದ ವರ್ಗಕ್ಕೆ ಸೇರಿದವರು ಎಂಬುದು ನನಗೆ ತಿಳಿದಿರಲಿಲ್ಲ. ಆದರೆ ಚುನಾವಣೆಯ ಸಂದರ್ಭದಲ್ಲಿ ನಾನು ಹಿಂದುಳಿದ ವರ್ಗಗಳ ಅಭ್ಯರ್ಥಿ ಎಂಬ ವಿಚಾರದಿಂದ ನನ್ನ ಜಾತಿ ಗೊತ್ತಾಯಿತು ಎಂದು ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಭಾನುವಾರ (ಸೆ.29) ಉಡುಪಿಯ ಕುಂಜಿಬೆಟ್ಟು ಶಾರದ ಕಲ್ಯಾಣ ಮಂಟಪದಲ್ಲಿ ಕರಾವಳಿಯ ಸಾಹಿತಿಗಳು – ಕಲಾವಿದರು – ಲೇಖಕರು – ಕವಿಗಳು – ಚುಟುಕು ಬರಹಗಾರರ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ರಾಜವಂಶಸ್ಥರು ಹಿಂದುಳಿದ ವರ್ಗದವರು ಎಂದು ಹೇಳಿದರೆ ಎಲ್ಲರೂ ನಗುತ್ತಾರೆ. ಅದಕ್ಕಾಗಿ ನನಗೆ ಜಾತಿ ಲೆಕ್ಕದಲ್ಲಿ ಅಲ್ಲ, ಎಲ್ಲ ಸಮುದಾಯವನ್ನು ಪ್ರತಿನಿಧಿಸುವ ಸೌಭಾಗ್ಯ ಸಿಕ್ಕಿರುವುದು ಸಂತೋಷ ತಂದಿದೆ. ನಮ್ಮ ದೇಶದಲ್ಲಿ ಒಂದು ರೀತಿಯಲ್ಲಿ ಜಾತಿ ವ್ಯವಸ್ಥೆ ಇರುವುದು ಒಳ್ಳೆಯದಾಗಿದೆ. ಈ ಮೂಲಕ ಭಾರತೀಯ ವೈವಿಧ್ಯತೆಯನ್ನು ಸಂರಕ್ಷಣೆ ಮಾಡಬಹುದಾಗಿದೆ. ಆದರೆ ಇನ್ನೊಂದು ಅರ್ಥದಲ್ಲಿ ಜಾತಿ ಶಾಪವು ಕೂಡ ಆಗಿದೆ. ಇದನ್ನು ಬೇರೆಬೇರೆ ಕಾರಣಗಳಿಂದ ದುರುಪಯೋಗಪಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಜಾತಿಯನ್ನು ಸರಿಯಾದ ದಾರಿಯಲ್ಲಿ ತೆಗೆದುಕೊಂಡು
ಹೋಗಬೇಕಾಗಿರುವುದು ಬಹಳ ಮುಖ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಆಸ್ಕರ್ 2025 | ಭಾರತವನ್ನು ಪ್ರತಿನಿಧಿಸಲಿದೆ ‘ಲಾಪತಾ ಲೇಡೀಸ್’

ಭಾರತೀಯ ತತ್ವದಡಿ ಒಗ್ಗೂಡಬೇಕು ನಾವೆಲ್ಲರೂ ಕನ್ನಡ ಭಾಷೆಯ ಮೂಲಕ ಒಗ್ಗಟ್ಟಾಗಿದ್ದೇವೆ. ಇದಕ್ಕೂ ಮುಖ್ಯವಾಗಿ ಭಾರತೀಯರಾಗಿ ಒಗ್ಗಟ್ಟಾಗಿರುವುದು ಬೇಕಾಗಿದೆ. ಪ್ರತಿಯೊಬ್ಬ ಭಾರತೀಯ ಕನ್ನಡಿಗ ಅಲ್ಲ, ಆದರೆ ಪ್ರತಿಯೊಬ್ಬ ಕನ್ನಡಿಗ ಕೂಡ ಭಾರತೀಯ ಎಂಬ ತತ್ವದಡಿಯಲ್ಲಿ ನಾವು ಮುಂದುವರೆಯಬೇಕಿರುವುದು ಇಂದಿನ ಅಗತ್ಯವಾಗಿದೆ. ಕಲಾವಿದರು ರಾಷ್ಟ್ರೀಯತೆ, ಭಾರತದ ನೇತೃತ್ವ ವಹಿಸಿಕೊಂಡು ಕೆಲಸ ಮಾಡಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ನಮ್ಮ ಕಲೆ, ಪರಂಪರೆ, ಭಾಷೆ ವಿಚಾರದಲ್ಲಿ ಕನ್ನಡದ ಸಾಹಿತ್ಯದ ಪಾತ್ರ ಅತ್ಯಂತ ಅಮೂಲ್ಯವಾಗಿದೆ. ಈ ಪ್ರಾಮುಖ್ಯತೆಯನ್ನು ಗಮನಿಸಿಯೇ ಅಂದು ಮೈಸೂರು ಸಂಸ್ಥಾನದವರಿಂದ ಬೆಂಗಳೂರಿನಲ್ಲಿ ಕರ್ನಾಟಕ ಸಾಹಿತ್ಯ ಪರಿಷತ್ತನ್ನು ರಚಿಸಲಾಯಿತು. ಎಲ್ಲ ಕಾಲಘಟ್ಟದಲ್ಲಿಯೂ ಕಲೆ ಮತ್ತು ಕಲಾವಿದರು ಸಂಸ್ಕೃತಿ, ಭಾಷೆ ಅಸ್ತಿತ್ವ ಉಳಿಯಲು ಮಹತ್ವದ ಕೊಡುಗೆಯಾಗುತ್ತಿದ್ದಾರೆ ಎಂದು ಹೇಳಿದರು

ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಕಿರಣ್ ಕೊಡ್ಗಿ, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಮುಖಂಡರಾದ ಉದಯ ಕುಮಾರ್ ಶೆಟ್ಟಿ, ಈಶ್ವರ ನಾಯಕ್, ದಿನೇಶ್ ಅಮೀನ್, ಶಿಲ್ಪಾ ಸುವರ್ಣ, ವಿಠಲ ಪೂಜಾರಿ, ಈಶ್ವರ್ ನಾಯ್ಕ್, ಪೃಥ್ವಿ ರಾಜ್ ಶೆಟ್ಟಿ, ಸಂಧ್ಯಾ ರಮೇಶ್, ಕಮಲಾಕ್ಷ ಹೆಬ್ಬಾರ್, ಚಂದ್ರ ಪಂಚವಟಿ, ಕುಮಾರ್ ದಾಸ, ರೂಢಫ್ ಡಿ’ಸೋಜಾ, ಎ.ಎನ್. ಮಹಾಂತೇಶ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...