5 ವರ್ಷ ನಾನೇ ಮುಖ್ಯಮಂತ್ರಿ, ನಮ್ಮ ಸರ್ಕಾರ ಕಲ್ಲು ಬಂಡೆ ತರ ಇರುತ್ತದೆ: ಸಿಎಂ ಸಿದ್ದರಾಮಯ್ಯ

Date:

ಐದು ವರ್ಷ ನಾನೇ ಮುಖ್ಯಮಂತ್ರಿ, ನಮ್ಮ ಸರ್ಕಾರ ಕಲ್ಲು ಬಂಡೆ ತರ ಇರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಬಿರುಸಾಗಿ ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹೇಳಿಕೆ ನೀಡಿರುವುದು ಕುತೂಹಲ ಸೃಷ್ಟಿಸಿದೆ.

ನಂದಿಬೆಟ್ಟದಲ್ಲಿ ಬುಧವಾರ ನಡೆಯುತ್ತಿರುವ ಸಚಿವ ಸಂಪುಟ ಸಭೆಗೂ ಮುನ್ನ ನಂದಿ ಗ್ರಾಮದಲ್ಲಿರುವ ಭೋಗನಂದೀಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿರುತ್ತೇನೆ. ನಿಮಗೆ ಅನುಮಾನವೇ? ನಮ್ಮ ಸರ್ಕಾರ ಬಂಡೆ ತರ ಭದ್ರವಾಗಿದೆ ನಿಮಗ್ಯಾಕೆ” ಎಂದು ಮಾಧ್ಯಮದವರನ್ನು ಸಿಎಂ ಪ್ರಶ್ನಿಸಿದರು.

‘ರಾಜ್ಯದಲ್ಲಿ ನಾಯಕತ್ವ ಬದಲಾಗಲಿದೆ. ಈ ಸರ್ಕಾರ ಪತನವಾಗಲಿದೆ’ ಎಂಬ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, “ಆರ್‌ ಅಶೋಕ್‌ ಬಾಯಿಗೆ ಬಂದಂಗೆ ಮಾತನಾಡುತ್ತಾರೆ. ಅವರೇನು ನಮ್ಮ ಹೈಕಮಂಡಾ? ಬಿಜೆಪಿ-ಜೆಡಿಎಸ್‌ನವರು ಸುಳ್ಳು ಹೇಳುವುದರಲ್ಲಿ ಪರಿಣಿತರು. ಸತ್ಯ ಹೇಳುವುದು ಅವರಿಗೆ ಗೊತ್ತೇ ಇಲ್ಲ” ಎಂದು ವಾಗ್ದಾಳಿ ನಡೆಸಿದರು.

ಹಿಂದೆ ಬಿಜೆಪಿ-ಕುಮಾರಸ್ವಾಮಿ ಜತೆ ಸಮ್ಮಿಶ್ರ ಸರ್ಕಾರ ರಚನೆ ಮಾಡಿ ಏನು ಮಾಡಿದ್ದಾರೆ ಎಲ್ಲವೂ ಗೊತ್ತಿದೆ. ಸುಳ್ಳು ಹೇಳಿಕೊಂಡು ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನವನ್ನು ಇವರಿಬ್ಬರು ನಡೆಸಿದ್ದಾರೆ. ಇದನ್ನು ಬಿಟ್ಟರೆ ಇವರು ಇನ್ನೇನೂ ಮಾಡಿಲ್ಲ” ಎಂದು ಕಿಡಿಕಾರಿದರು.

“ಬಿಜೆಪಿಯವರು ಜೆಡಿಎಸ್‌ನವರು ಅಧಿಕಾರದ ಹಗಲುಗನಸು ಕಾಣುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಇವರು ಏನೂ ಮಾಡಲಿಲ್ಲ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳುವ ಹಾಗೆ ಏನು ಮಾಡಿದ್ದಾರೆ ಎಂಬುದರ ಸಾಕ್ಷಿಗುಡ್ಡೆ ಹಾಕಲಿ” ಎಂದರು.

ಜಾತಿಗಣತಿ: ಆನ್ ಲೈನ್ ಮೂಲಕ ಜಾತಿ ನಮೂದಿಸಬಹುದು

“ಜಾತಿ ಸಮೀಕ್ಷೆಯಲ್ಲಿ ತೊಂದರೆಗಳಾಗಿದ್ದರೆ ಆನ್ ಲೈನ್ ಮಾಡಲು ತೊಂದರೆಯಿಲ್ಲ ಎಂದು ತಿಳಿಸಿದ ಮುಖ್ಯಮಂತ್ರಿಗಳು ಯಾವುದಾದರೂ ಒಂದು ದಾರಿಯಲ್ಲಿ ಜಾತಿ ಹೇಳಿಕೊಳ್ಳಬೇಕು. ಸಮೀಕ್ಷೆ ಮಾಡುವವರು ಮನೆಗೆ ಬಂದಾಗ ಅಥವಾ ಶಿಬಿರದಲ್ಲಿ ಅಥವಾ ಯಾವುದಾದರೂ ಒಂದು ವಿಧಾನದಲ್ಲಿ ಪರಿಶಿಷ್ಟರ ಜಾತಿ/ವರ್ಗ ಹೇಳಿಕೊಳ್ಳಬೇಕು. ಸಮೀಕ್ಷೆ ಮಾಡುವವರು ಮನೆ ಮನೆಗೆ ತೆರಳುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ಕೆಲವರು ಸಾಮಾಜಿಕ ಕಳಂಕ ಇದ್ದರೆ ಆನ್ ಲೈನ್ ನಲ್ಲಿ ಜಾತಿಯ ಹೆಸರನ್ನು ದಾಖಲಿಸಬಹುದು” ಎಂದರು.

ಸಚಿವ ಸ್ಥಾನ :ವರಿಷ್ಠರಿಂದ ಅಂತಿಮ ತೀರ್ಮಾನ

“ಪ್ರಜಾಪ್ರಭುತ್ವದಲಿ ಎಲ್ಲರಿಗೂ ಸಚಿವರಾಗುವ ಅಧಿಕಾರವಿದೆ. ಸಚಿವ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು. 142 ಜನ ನಮ್ಮ ಪಕ್ಷದವರಿದ್ದಾರೆ. 34 ಜನರನ್ನು ಮಾತ್ರ ಸಚಿವರನ್ನಾಗಿಸಬಹುದು. ಎಲ್ಲರನ್ನು ಮಾಡಲಾಗುವುದಿಲ್ಲ. ಶೇ.15% ಜನರನ್ನು ಮಾತ್ರ ಮಾಡಬಹುದು” ಎಂದರು.

ರಾಜ್ಯದ ಎಲ್ಲ ಕಂದಾಯ ವಿಭಾಗಗಳಲ್ಲಿ ಸಚಿವ ಸಂಪುಟ ಸಭೆ

“ರಾಜ್ಯದ ಎಲ್ಲ ಕಂದಾಯ ವಿಭಾಗಗಳಲ್ಲಿ ಸಚಿವ ಸಂಪುಟ ಸಭೆ ನಡೆಸಬೇಕೆಂದು ತೀರ್ಮಾನಿಸಿ ಗುಲ್ಬರ್ಗಾ, ಮೈಸೂರು, ಬೆಂಗಳೂರು ವಿಭಾಗಗಳಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಇನ್ನು ಕೆಲವೇ ದಿನಗಳಲ್ಲಿ ಬೆಳಗಾವಿ ಹಾಗೂ ವಿಜಯಪುರದಲ್ಲಿ ಕೂಡ ನಡೆಸಲಾಗುವುದು. ಚಿಕ್ಕಬಳ್ಳಾಪುರದಲ್ಲಿ ಬೆಂಗಳೂರು ಕಂದಾಯ ವಿಭಾಗದ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ. ಬಜೆಟ್ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ ಸಣ್ಣಪುಟ್ಟ ಕೆಲಸಗಳಿದ್ದರೆ ಮಾಡಿ ಕೊಡಲಾಗುವುದು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...