ತಾಲೂಕು, ಜಿಲ್ಲಾ ಮಟ್ಟದಲ್ಲೂ ಸೇವಾದಳದವರಿಗೆ ಅಧಿಕಾರ ನೀಡುವ ಯೋಚನೆ: ಡಿ ಕೆ ಶಿವಕುಮಾರ್

Date:

ಸೇವಾದಳ ಕಾಂಗ್ರೆಸ್ ಪಕ್ಷದ ಆಧಾರಸ್ತಂಭ. ಪಕ್ಷದಲ್ಲಿ ನೀವು ಎಲ್ಲರಿಗಿಂತ ಕೊನೆ ಎಂಬ ಭಾವನೆ ಬೇಡ. ತಾಲೂಕು, ಜಿಲ್ಲಾ ಮಟ್ಟದಲ್ಲಿ ಸೇವಾದಳದವರಿಗೂ ಅಧಿಕಾರ ನೀಡುವ ಆಲೋಚನೆ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ಭಾನುವಾರ ನಡೆದ ಭಾರತೀಯ ಸೇವಾದಳದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

“ಸಮಾಜ ಸೇವೆ ಮಾಡುವವರನ್ನು ಹೆಚ್ಚು ಗುರುತಿಸುತ್ತದೆ. ಹೀಗಾಗಿ ನಮ್ಮ ಸಮಾಜದಲ್ಲಿ ರಾಮನ ತಂದೆ ದಶರಥ ಮಹಾರಾಜನಿಂಗಿಂತ, ರಾಮನ ಭಂಟ ಹನುಮಂತನ ದೇವಾಲಯಗಳು ಹೆಚ್ಚಾಗಿವೆ. ಅದೇ ರೀತಿ ನೀವು ಕಾಂಗ್ರೆಸ್ ಪಕ್ಷಕ್ಕೆ ಆಧಾರಸ್ತಂಭ. ಇದನ್ನು ಸೇವಾದಳದ ಎಲ್ಲಾ ಕಾರ್ಯಕರ್ತರು ತಲೆಯಲ್ಲಿಟ್ಟುಕೊಳ್ಳಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದ ಭದ್ರತೆ ಉದ್ದೇಶದಿಂದ ಸ್ಥಾಪನೆಯಾದ ವಿಭಾಗ ಸೇವಾದಳ. ನೆಹರೂ ಅವರ ಅವಧಿಯಲ್ಲಿ ಪ್ರಾರಂಭವಾಗಿ ಈಗ ಮಲ್ಲಿಕಾರ್ಜುನ ಖರ್ಗೆ ಅವರ ಅವಧಿವರೆಗೆ ನಡೆದುಕೊಂಡು ಬಂದಿದೆ. ಸೇವಾದಳ ಕಾಂಗ್ರೆಸ್ ಪಕ್ಷದ ಕಡೆಯ ಅಂಗ, ನಮ್ಮನ್ನು ಗುರುತಿಸುವುದಿಲ್ಲ ಎಂಬ ಆಲೋಚನೆಯನ್ನು ನಿಮ್ಮ ತಲೆಯಿಂದ ಕಿತ್ತೊಗೆಯಬೇಕು. ನಿಮ್ಮಲ್ಲಿ ನಾಯಕತ್ವದ ಗುಣ ಇದೆ ಎಂದು ನೆಹರೂ ಹಾಗೂ ಇಂದಿರಾ ಗಾಂಧಿ ಅವರೇ ಸೇವಾದಳದ ಅಧ್ಯಕ್ಷ ಸ್ಥಾನ ವಹಿಸಿದ್ದರು” ಎಂದರು.

“ಸೇವಾದಳದವರು ಹಾಕುವ ಗಾಂಧಿ ಟೋಪಿಯನ್ನು ಎಲ್ಲಾ ನಾಯಕರು ಹಾಕುತ್ತಾರೆ. ಬೆಳಗಾವಿ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಎಲ್ಲಾ ನಾಯಕರೂ ಇದನ್ನು ಧರಿಸಿದ್ದರು. ಬೇರೆ ನಾಯಕರ ಜತೆಗೆ ನೀವು ಸರಿಸಮಾನರು. ಬಿ.ಕೆ. ಹರಿಪ್ರಸಾದ್ ಅವರು ರಾಷ್ಟ್ರೀಯ ಸೇವಾದಳದ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಸಂಸತ್ ಸದಸ್ಯರಾಗಿದ್ದಾರೆ. ಇನ್ನು ಅನೇಕರು ಸೇವಾದಳದಲ್ಲಿ ಕೆಲಸ ಮಾಡಿದ್ದಾರೆ. ಅವರು ಶಾಸಕರು, ಮಂತ್ರಿಗಳಾಗಿ ದೊಡ್ಡ ನಾಯಕರಾಗಿ ಬೆಳೆದಿದ್ದಾರೆ” ಎಂದು ತಿಳಿಸಿದರು.

“ನಾವು ಹುಟ್ಟಿದ ಮೇಲೆ ಸಮಾಜಕ್ಕೆ ಏನಾದರೂ ಸೇವೆ ಮಾಡಬೇಕು. ನನ್ನಿಂದ ಏನೂ ಸಾಧ್ಯವಿಲ್ಲ ಎಂಬ ಆಲೋಚನೆ ಮಾಡಬಾರದು. ನೀವು ಶಾಸಕರು, ಮಂತ್ರಿ, ಮುಖ್ಯಮಂತ್ರಿ ಆಗಬಹುದು. ನೀವು ನಿಮ್ಮ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ಒಳ್ಳೆಯ ಕಾಲ ಬರುತ್ತಿದೆ. ಬ್ಲಾಕ್ ಅಧ್ಯಕ್ಷರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಅವರು ಹಾಗೂ ರಾಹುಲ್ ಗಾಂಧಿ ಅವರು ಜಿಲ್ಲಾ ಕಾಂಗ್ರೆಸ್ ಗೆ ಹೊಸ ಸ್ವರೂಪ ನೀಡಲು ಪ್ರಯತ್ನಿಸುತ್ತಿದ್ದಾರೆ” ಎಂದರು.

“ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಆಯ್ಕೆ ಸಮಿತಿಯು ಸೇವಾದಳ ಸೇರಿದಂತೆ ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್ ಅಭಿಪ್ರಾಯ ಸ್ವೀಕರಿಸುವ ಕೆಲಸ ಮಾಡಲಿದೆ. ನಿಮ್ಮ ಸೇವೆಯನ್ನು ನಾವು ಗಮನದಲ್ಲಿಟ್ಟುಕೊಂಡಿದ್ದೇವೆ. ಸೇವಾದಲದಲ್ಲಿ ಹೊಸಬರಿಗೆ ಅವಕಾಶ ಕಲ್ಪಿಸಬೇಕು. ಭಾರತ ಜೋಡೋ ಸಂದರ್ಭದಲ್ಲಿ ನಾವು ಅನೇಕ ಜಾಗಗಳನ್ನು ಗುರುತಿಸಿದ್ದು, ಶಾಶ್ವತ ಕಾಂಗ್ರೆಸ್ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು. ಮಂಗಳೂರಿನಲ್ಲೂ ಜಾಗ ನೋಡಿದ್ದೇವೆ. ಇದರ ಜವಾಬ್ದಾರಿಯನ್ನು ಸೇವಾದಳದವರಿಗೂ ವಹಿಸಲಾಗುವುದು” ಎಂದರು.

“ನಾವು ಈಗ ಬುದ್ಧಿ ಕಲಿತು ನಮ್ಮ ಆಧಾರಸ್ತಂಭಗಳನ್ನು ಹೇಗೆ ಬೆಳಸಬೇಕು ಎಂದು ಆಲೋಚಿಸುತ್ತಿದ್ದೇವೆ. ಮುಂದಿನದಿನಗಳಲ್ಲಿ ಪ್ರತಿ ವಿಚಾರದಲ್ಲೂ ಜಿಲ್ಲಾ ಕಾಂಗ್ರೆಸ್ ಅಭಿಪ್ರಾಯ ಸಂಗ್ರಹಹಿಸಲು, ಅವರನ್ನು ಚುನಾವಣಾ ಪ್ರಕ್ರಿಯೆಯಲ್ಲಿ ಬಳಸಿಕೊಳ್ಳಲು ಮುಂದಾಗಿದ್ದಾರೆ. ಅವರೇ ರಾಜ್ಯಕ್ಕೆ ಬಂದು ಜಿಲ್ಲಾಧ್ಯಕ್ಷರ ಜತೆ ನೇರವಾಗಿ ಚರ್ಚೆ ಮಾಡಲಿದ್ದಾರೆ” ಎಂದು ಹೇಳಿದರು.

“ಸೇವಾದಳದವರು ಒಂದು ತಂಡ ರಚನೆ ಮಾಡಿ ಪ್ರತಿ ಜಿಲ್ಲೆಗೆ ಹೋಗಿ ಅಲ್ಲಿ ಸೇವಾದಳ ಹೊರತಾದ ಕಾಂಗ್ರೆಸ್ ಕಾರ್ಯಕರ್ತರಿಗೆ ಪಕ್ಷದ ಧ್ವಜಾರೋಹಣ, ರಾಷ್ಟ್ರಗೀತೆ, ವಂದೇ ಮಾತರಂ ಗೀತೆ ಗಾಯನ ಸೇರಿದಂತೆ ಇತರೆ ಅಂಶಗಳ ತರಬೇತಿ ನೀಡಬೇಕು ಎಂದು ಸೇವಾದಳದ ಅಧ್ಯಕ್ಷರಾದ ರಾಮಚಂದ್ರಪ್ಪ ಅವರಿಗೆ ಸೂಚಿಸುತ್ತೇನೆ. ಈ ರೀತಿ ಮಾಡಿದಾಗ ಬೇರೆ ಕಾರ್ಯಕರ್ತರು ಸೇವಾದಳದ ಜತೆ ಬೆರೆಯುತ್ತಾರೆ” ಎಂದು ಸಲಹೆ ನೀಡಿದರು.

“ನೀವು ಮಾನಸಿಕವಾಗಿ ಗಟ್ಟಿಯಾಗಿರಬೇಕು. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸೇವಾದಳದವರಿಗೆ ಎಷ್ಟು ಸಾಧ್ಯವೋ ಅಷ್ಟು ಅಧಿಕಾರ ನೀಡಲಾಗುವುದು. ಕೆಲವು ನಾಯಕರು ನಿಮ್ಮನ್ನು ಅಗೌರವವಾಗಿ ನಡೆಸಿಕೊಳ್ಳುವುದನ್ನು ನೋಡಿದ್ದೇವೆ. ಸೂಕ್ತ ಕಾಲದಲ್ಲಿ ಅವರಿಗೆ ಸೂಕ್ತ ಸಂದೇಶ ರವಾನಿಸಲಾಗುವುದು. ಸೇವಾದಳದಲ್ಲೂ ಬೂತ್ ಮಟ್ಟದಲ್ಲಿ ಪ್ರತಿನಿಧಿಗಳನ್ನು ಹೊಂದಿರಬೇಕು.

ನಮ್ಮ ಸರ್ಕಾರ ಪ್ರತಿ ಬಡ ಕುಟುಂಬದ ಆರ್ಥಿಕ ಅಭಿವೃದ್ಧಿಗೆ ಗ್ಯಾರಂಟಿ ಯೋಜನೆಗಳ ಮೂಲಕ ವರ್ಷಕ್ಕೆ 52 ಸಾವಿರ ಕೋಟಿ ಒದಗಿಸಲಾಗಿದೆ. ಯಾರು ಏನೇ ಕೂಗಾಡಲಿ ರಾಜ್ಯದಲ್ಲಿ ಮತ್ತೆ ನಿಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...