ವಕ್ಫ್‌ ಆಸ್ತಿ | ರೈತರಿಗೆ ನೋಟಿಸ್ ಕೊಟ್ಟಿದ್ದರೆ ತಕ್ಷಣ ವಾಪಸ್‌: ಸಚಿವ ಜಮೀರ್

Date:

ವಕ್ಫ್ ಮಂಡಳಿಯಿಂದ ರೈತರಿಗೆ ನೋಟಿಸ್ ನೀಡಿದ್ದರೆ ಅದನ್ನು ತಕ್ಷಣ ಹಿಂದಕ್ಕೆ ಪಡೆಯಲಾಗುವುದು, ರೈತರ ಜಮೀನನ್ನು ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ವಕ್ಫ್ ಮತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ವಿಜಯನಗರದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ವಿಜಯಪುರದಲ್ಲಿ 1,200 ಎಕರೆ ಜಮೀನು ವಕ್ಫ್‌ ಪಾಲಾಗುತ್ತದೆ ಎಂದು ಗುಲ್ಲೆಬ್ಬಿಸಿದರು, ಅಲ್ಲಿ ವಕ್ಫ್’ಗೆ ಸೇರಿದ 11 ಎಕರೆ ಜಮೀನಷ್ಟೇ ಇದೆ ಎಂದರು. 

ರೈತರ ಜಮೀನನ್ನು ವಕ್ಫ್ ಆಸ್ತಿ ಎಂದು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ. ಸಚಿವರು ಹೇಳಿದರು ಎಂದು ಅಧಿಕಾರಿಗಳು ಸಹ ಅದನ್ನು ಮಾಡಲು ಸಾಧ್ಯವಿಲ್ಲ’ ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೇಲೆಕೇರಿ ಬಹುಕೋಟಿ ಹಗರಣದತ್ತ ಮಾಧ್ಯಮಗಳ ಮೌನವೇಕೆ?

‘ವಕ್ಫ್ ಬಳಿ 1.12 ಲಕ್ಷ ಎಕರೆ ಜಮೀನಿದೆ. ಅದೆಲ್ಲವೂ ದಾನಿಗಳು ಕೊಟ್ಟಂತಹ ಜಮೀನು ಹೊರತು ಸರ್ಕಾರ ಕೊಟ್ಟಿದ್ದಲ್ಲ. ರೈತರಿಗೆ ಯಾವ ಕಾರಣಕ್ಕೂ ತೊಂದರೆ ಕೊಡುವ ಉದ್ದೇಶ ಸರ್ಕಾರಕ್ಕಿಲ್ಲ. ರೈತರ ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದ್ದರೆ ಚಿಂತೆಯೇ ಬೇಡ, ಆ ಜಮೀನನ್ನು ಸ್ವಾಧೀನಕ್ಕೆ ಪಡೆಯುವುದಿಲ್ಲ. ನೋಟಿಸ್ ನೀಡಿದ್ದರೆ ಅದನ್ನು ಹಿಂದಕ್ಕೆ ಪಡೆಯಲಾಗುವುದು’ ಎಂದು ಸಚಿವರು ಪುನುರುಚ್ಚರಿಸಿದರು.

‘ವಕ್ಫ್ ಆಸ್ತಿ ಸಂಬಂಧ ನೋಟಿಸ್ ಕೊಡುವುದು ಈಗ ನಡೆದಿರುವ ಬೆಳವಣಿಗೆ ಅಲ್ಲ, ಬಿಜೆಪಿ ಅಧಿಕಾರ ಅವಧಿಯಲ್ಲಿ ಸಾವಿರಾರು ನೋಟಿಸ್‌ಗಳನ್ನು ನೀಡಲಾಗಿತ್ತು. ಅದನ್ನು ಮರೆಮಾಚಿ, ಈಗ ರಾಜಕೀಯ ಕಾರಣಕ್ಕಾಗಿ ವಿಷಯ ಎತ್ತಿದ್ದಾರೆ’ ಎಂದು ಜಮೀರ್ ಆರೋಪಿಸಿದರು.

ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣಾ ತುಕಾರಾಂ ಅವರು 30 ಸಾವಿರದಿಂದ 40 ಸಾವಿರ ಮತಗಳ
ಅಂತರದಲ್ಲಿ ಗೆಲುವು ಸಾಧಿಸುವುದು ನಿಶ್ಚಿತ. ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರ ವಿವಿಧ ಕಾಮಗಾರಿಗಳಿಗೆ ₹1,618 ಕೋಟಿ ಅನುದಾನ ಮಂಜೂರು ಮಾಡಿದೆ. ತುಕಾರಾಂ ಅವರ ಕೆಲಸವೇ ಅವರನ್ನು ಕೈ ಹಿಡಿಯಲಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...