ಲೋಕಸಭೆಗೆ ಜನರು ನಿಂತುಕೊಳ್ಳಿ ಎಂದರೆ ಯತೀಂದ್ರ ನಿಂತುಕೊಳ್ಳುತ್ತಾರೆ: ಸಿದ್ದರಾಮಯ್ಯ

Date:

“ಮೈಸೂರು ಲೋಕಸಭೆ ಚುನಾವಣೆಯಲ್ಲಿ ಪುತ್ರನನ್ನು ಗೆಲ್ಲಿಸಲು ಸಿದ್ದರಾಮಯ್ಯ ಅವರು ಪ್ರತಾಪ್ ಸಿಂಹ ವಿರುದ್ಧ ಷಡ್ಯಂತ ರೂಪಿಸಿದ್ದಾರೆ” ಎಂದು ಆರೋಪಿಸಿರುವ ರಾಜ್ಯಸಭಾ ಬಿಜೆಪಿ ಸದಸ್ಯ ಲೆಹರ್ ಸಿಂಗ್ ಸಿರೋಯಾ ಅವರಿಗೆ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ನಾನು ನನ್ನ ಮಗ ಯತೀಂದ್ರ ಅವರನ್ನು ಲೋಕಸಭೆ ಚುನಾವಣೆಗೆ ನಿಲ್ಲಿಸಲು ಹೋಗಲ್ಲ. ಆದರೆ, ಜನರು ನಿಂತುಕೊಳ್ಳಿ ಎಂದರೆ ಅವರೇ ನಿಂತುಕೊಳ್ಳುತ್ತಾರೆ. ಲೆಹರ್ ಸಿಂಗ್ ಸಿರೋಯಾ ಅವರು ಮೊದಲು ಸಂಸತ್‌ ನಲ್ಲಿ ಆದ ಭದ್ರತಾ ಲೋಪದ ಬಗ್ಗೆ ತಲೆಕೆಡಿಸಿಕೊಳ್ಳಲಿ” ಎಂದು ತಿರುಗೇಟು ನೀಡಿದರು.

“ಮಹಿಳೆಯನ್ನು ಬೆತ್ತಲೆಗೊಳಿಸಿರುವ ಪ್ರಕರಣದ ಬಗ್ಗೆ ಕಾನೂನು ರೀತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕು ಅದನ್ನೆಲ್ಲ ತೆಗೆದುಕೊಂಡಿದ್ದೇವೆ. ನಮ್ಮ ಗೃಹ ಸಚಿವರು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಹೋಗಿ ಭೇಟಿ ನೀಡಿದ್ದಾರೆ. ಪರಿಹಾರವೂ ಕೊಟ್ಟಿದ್ದೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜೆ ಪಿ ನಡ್ಡಾ ಮತ್ತು ಬಿಜೆಪಿಯವರು ಮಹಿಳಾ ವಿವಸ್ತ್ರ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳಲು ಹೊರಟಿದ್ದಾರೆ. ಅವರ ಕಾಲದಲ್ಲಿ ಎನ್‌ಸಿಬಿ (ನ್ಯಾಷನಲ್‌ ಕ್ರೈಮ್‌ ಬ್ಯೂರೊ ತೆಗೆದುನೋಡಿ ಎಷ್ಟು ಮಹಿಳೆಯರ ಮೇಲೆ ದೌರ್ಜನ್ಯ ಆಗಿದೆ ಎಂಬುದು ಗೊತ್ತಾಗುತ್ತದೆ” ಎಂದು ಹರಿಹಾಯ್ದರು.

ಉತ್ತರ ಪ್ರದೇಶಶ ಬಿಜೆಪಿ ಶಾಸಕನಿಗೆ ಜೈಲು ಆಗಿದೆ. ಬಿಜೆಪಿ ಎಂಎಲ್‌ಎ 9 ವರ್ಷದ ಹುಡುಗಿ ಮೇಲೆ ಅತ್ಯಾಚಾರ ಮಾಡಿದ್ದ. ಇದಕ್ಕೆ ನಡ್ಡಾ ಏನು ಹೇಳುತ್ತಾರೆ? ಪ್ರಲ್ಹಾದ್‌ ಜೋಶಿ ಏನು ಹೇಳುತ್ತಾರೆ? ಮಹಿಳೆಯ ವಿವಸ್ತ್ರ ಪ್ರಕರಣವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ” ಎಂದರು.

“ಜಾತಿ ಗಣತಿ ವರದಿಯೇ ಬಂದಿಲ್ಲ. ಎಲ್ಲರೂ ಊಹೆ ಮೇಲೆ ಮಾತನಾಡುತ್ತಿದ್ದಾರೆ. ಮುಂದೆ ನೋಡೋಣ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...