ಕಾಂಗ್ರೆಸ್‌ನವರಿಗೆ ಬದ್ಧತೆ ಇದ್ದರೆ, ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡಲಿ: ಬೊಮ್ಮಾಯಿ ಆಗ್ರಹ

Date:

ಕಾಂಗ್ರೆಸ್‌ನವರು 2013 ರಿಂದ ನ್ಯಾ. ಸದಾಶಿವ ಆಯೊಗದ ವರದಿಯನ್ನು ಜಾರಿ ಮಾಡುತ್ತೇವೆ ಎಂದು ಹೇಳುತ್ತ ಬಂದಿದ್ದಾರೆ. ಇವರಿಗೆ ಬದ್ಧತೆ ಇದ್ದರೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಬೆಂಗಳೂರಿನ ಉತ್ತರಾದಿ ಮಠದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಡಾ. ಜಯಶ್ರೀ ಅರವಿಂದ ಅವರು ಸಂಗೀತ ಸಂಯೋಜನೆ ಮಾಡಿರುವ ಶ್ರೀರಾಮನ ಕುರಿತ ಗೀತೆಗಳ ಧ್ವನಿ ಸುರಳಿಯನ್ನು ಬಿಡುಗಡೆ ಮಾಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

“ಸದಾಶಿವ ಆಯೋಗದ ವರದಿ ಜಾರಿ ಮಾಡುವ ವಿಚಾರದಲ್ಲಿ ಕಾಂಗ್ರೆಸ್ ಮೊದಲಿನಿಂದಲೂ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಸಂವಿಧಾನ ತಿದ್ದುಪಡಿ ಮಾಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವುದಾಗಿ ಹೇಳುತ್ತಾರೆ. ಇನ್ನೊಂದೆಡೆ ಸದಾಶಿವ ಆಯೋಗದ ವರದಿಯನ್ನು ತಾವೇ ಜಾರಿ ಮಾಡುವುದಾಗಿ ಹೇಳುತ್ತಾರೆ. ಇವರಿಗೆ ಬದ್ಧತೆ ಇದ್ದರೆ, ಸದಾಶಿವ ಆಯೋಗದ ವರದಿ ಜಾರಿ ಮಾಡಿ, ಒಳಮೀಸಲಾತಿ ಆಧಾರದಲ್ಲಿ ನೇಮಕಾತಿ ಹಾಗೂ ಭಡ್ತಿ ನೀಡಲಿ” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕರ್ನಾಟಕ ವಿಶ್ವದಲ್ಲಿಯೇ 4ನೇ ಅತಿದೊಡ್ಡ ತಂತ್ರಜ್ಞಾನ ಕ್ಲಸ್ಟರ್‌: ಸಿಎಂ ಸಿದ್ದರಾಮಯ್ಯ

ಕೇಂದ್ರದಿಂದ ಅನುದಾನದ ಬರುತ್ತಿಲ್ಲ ಎಂದು ಆರೋಪಿಸಿರುವ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಕೇಂದ್ರದಿಂದ ಅನುದಾನ ಕುರಿತು ರಾಜ್ಯದ ವಿಚಾರಗಳಿಗೆ ಕಾಂಗ್ರೆಸ್ ತಿರುಚುವ ಕೆಲಸ ಮಾಡುತ್ತಿದೆ. ಅವರು ಬಹಿರಂಗ ಚರ್ಚೆಗೆ ಪ್ರಧಾನಿಗೆ ಆಹ್ವಾನ ಕೊಟ್ಟಿರುವುದಕ್ಕೆ ನಾವು ಉತ್ತರ ಕೊಟ್ಟಿದ್ದೇವೆ.
ಮೋದಿಯವರು ಬಹಳ ದೊಡ್ಡ ಕೆಲಸ ಮಾಡಿದ್ದಾರೆ. 14 ನೇ ಹಣಕಾಸಿಗಿಂತ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ರಾಜ್ಯಕ್ಕೆ 1 ಲಕ್ಷ ಕೋಟಿ ರೂ. ಹೆಚ್ಚಿಗೆ ಬಂದಿದೆ. ಕೇವಲ ಆಯುಷ್ಮಾನ್ ಭಾರತ ಯೋಜನೆ ಅಡಿಯಲ್ಲಿ 62 ಲಕ್ಷ ಜನರಿಗೆ ಪ್ರಯೋಜನವಾಗಿದೆ” ಎಂದರು.

“ಕಾಂಗ್ರೆಸ್ ಅವಧಿಯಲ್ಲಿ ಆ ಯೋಜನೆಯನ್ನು ಅಳವಡಿಸಿಕೊಳ್ಳಲು ಹಿಂದೇಟು ಹಾಕಿದ್ದರು. ನಂತರ ಯೋಜನೆ ಒಳ್ಳೆಯದಿದೆ ಅಂತ ಒಪ್ಪಿಕೊಂಡರು. ಇವರು ಮೊದಲು ಕೇಂದ್ರದ ಯೋಜನೆಗಳಿಗೆ ರಾಜ್ಯದ ಪಾಲು ಬಿಡುಗಡೆ ಮಾಡಬೇಕು. ಕೆಲವು ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿವೆ. ಹೀಗಾಗಿ ಇವರು ರಾಜ್ಯಕ್ಕೆ ಕಡಿಮೆ ಅನುದಾನ ಬರುತ್ತಿದೆ ಎಂದು ದಾರಿ ತಪ್ಪಿಸುತ್ತಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...