ವರ್ಗಾವಣೆ ದಂಧೆ | ಸಾಕ್ಷಿ ಇದ್ದರೆ ಅಧಿವೇಶನದಲ್ಲಿ ಚರ್ಚೆ ಮಾಡಲಿ: ಗೃಹ ಸಚಿವ ಪರಮೇಶ್ವರ್ ಸವಾಲು

Date:

  • ‘ಪೊಲೀಸ್ ಇನ್ ಸ್ಪೆಕ್ಟರ್ ವರ್ಗಾವಣೆ ಸ್ವಾಭಾವಿಕ’
  • ‘ಯತೀಂದ್ರ ನನ್ನ ಬಳಿ ಯಾವ ಹೆಸರನ್ನು ಹೇಳಿಲ್ಲ’

ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಆರೋಪಿಸುವ ಪ್ರತಿಪಕ್ಷಗಳು ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಇದರ ಬಗ್ಗೆ ಚರ್ಚೆ ಮಾಡಲಿ. ಹಣ ತೆಗೆದುಕೊಂಡಿರುವ ಬಗ್ಗೆ ದಾಖಲೆ ಇದ್ದರೆ ಪ್ರಸ್ತಾಪ ಮಾಡಲಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸವಾಲು ಹಾಕಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಡಿ.4 ರಿಂದ ಬೆಳಗಾವಿಯಲ್ಲಿ ‌ಅಧಿವೇಶನ ನಡೆಯಲಿದೆ ಅಲ್ಲಿ ಎಲ್ಲಾ ವಿಷಯ ಪ್ರಸ್ತಾಪ‌ ಮಾಡಬಹುದು. ನಾವು ಸಮರ್ಥವಾಗಿ ಉತ್ತರ ನೀಡುತ್ತೇವೆ, ಅವರಿಗೆ ಸಮಾಧಾನ ಆಗುವ ರೀತಿಯಲ್ಲೇ ಉತ್ತರ ನೀಡುತ್ತೇವೆ, ನಾವೇನು ಉದ್ವೇಗಕ್ಕೆ ಒಳಗಾಗುವುದಿಲ್ಲ” ಎಂದರು.

“ಪೊಲೀಸ್ ಇನ್ ಸ್ಪೆಕ್ಟರ್ ವರ್ಗಾವಣೆ ಸ್ವಾಭಾವಿಕ. ಅದಕ್ಕಾಗಿ ಇಲಾಖೆಯಲ್ಲಿ ಮಂಡಳಿ ರಚನೆ ಮಾಡಲಾಗಿದೆ. ಅನೇಕ ಕಾರಣದಿಂದ ವರ್ಗಾವಣೆಗಳಾಗುತ್ತವೆ. ಪೊಲೀಸ್ ಇಲಾಖೆ ಬೇರೆ ಇಲಾಖೆಯಂತಲ್ಲ, ಠಾಣೆಗಳಲ್ಲಿ ಅಧಿಕಾರಿಗಳ ಹುದ್ದೆಗಳನ್ನು ಹೆಚ್ಚು ಸಮಯ ಖಾಲಿ ಇಡಲಾಗಲ್ಲ. ಠಾಣೆಯಲ್ಲಿ ಇನ್ ಸ್ಪೆಕ್ಟರ್ ಇಲ್ಲ ಅಂದರೆ ಮುಂದಿನ ವರ್ಷ ವರ್ಗಾವಣೆ ಸಮಯ ಬರುವವರೆಗೂ ಕಾಯಲು ಆಗಲ್ಲ, ಅದಕ್ಕಾಗಿ ಮಂಡಳಿಯ ಮೂಲಕ ಕಾಲ ಕಾಲಕ್ಕೆ ವರ್ಗಾವಣೆ ಮಾಡುತ್ತಲೇ ಇರುತ್ತೇವೆ. ಕೆಲವೊಮ್ಮೆ ಕಾರ್ಯಾಧ್ಯಕ್ಷತೆ ಕೊರತೆಯಾದಾಗಲೂ ಬದಲಾವಣೆ ಮಾಡುತ್ತೇವೆ” ಎಂದು ‌ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಬಲ ಜಾತಿಗಳ ಜೋಡೆತ್ತುಗಳು, ಬಿಜೆಪಿಗರಿಗೇ ಬೇಡವಾಗಿದ್ದೇಕೆ?

“ಮೈಸೂರಿನ ವಿ.ವಿ.ಪುರಂ ಠಾಣೆಗೆ ವಿವೇಕಾನಂದ ಎಂಬ ಅಧಿಕಾರಿ ವರ್ಗಾವಣೆಯಾಗಿರುವುದು, ಯತೀಂದ್ರ ಅವರ ವಿಡಿಯೋದಲ್ಲಿ ವಿವೇಕಾನಂದ ಹೆಸರು ಹೇಳಿರುವುದು ಕಾಕತಾಳೀಯ ಇರಬಹುದು. ಅಧಿಕಾರಿಗಳ ವರ್ಗಾವಣೆ ವಿಷಯದಲ್ಲಿ ನನ್ನ ಮೇಲೆ ಯಾರು ಒತ್ತಡ ಹೇರಿಲ್ಲ. ಯತೀಂದ್ರ ನನ್ನ ಬಳಿ ಯಾವ ಹೆಸರನ್ನು ಹೇಳಿಲ್ಲ, ಪೊಲೀಸ್ ಅಧಿಕಾರಿಗಳ ವರ್ಗಾವಣೆಗೂ ಯತೀಂದ್ರ ಅವರ ವಿಡಿಯೋದಲ್ಲಿನ ಸಂಭಾಷಣೆಗೂ ಸಂಬಂಧ ಇಲ್ಲ” ಎಂದು ಸ್ಪಷ್ಟಪಡಿಸಿದರು.

“ಬಿಜೆಪಿಯಿಂದ ವಿರೋಧ ಪಕ್ಷ ನಾಯಕನಾಗಿ ಆಯ್ಕೆಯಾದ ಆರ್.ಅಶೋಕ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರ ಪಕ್ಷ ದೊಡ್ಡ ಜವಾಬ್ದಾರಿ ನೀಡಿದೆ. ಸರ್ಕಾರಕ್ಕೆ ಸಲಹೆ ಕೊಟ್ಟು, ಎಚ್ಚರಿಸುವ ಕೆಲಸ ಮಾಡಲಿ, ವಿರೋಧ ಪಕ್ಷದ ನಾಯಕರಾದ ಮೇಲೆ ಟೀಕೆ ಮಾಡುವುದು, ಸರ್ಕಾರದ ತಪ್ಪು ಹೇಳುವುದು ಸ್ವಾಭಾವಿಕ. ಸತ್ಯಾಸತ್ಯತೆ ಅರಿತು ಮಾತನಾಡಲಿ” ಎಂದು ಸಲಹೆ‌ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...