ಎಲ್ಲೆಂದರಲ್ಲಿ ಕಸ ಎಸೆದರೆ ಅದು ಮರಳಿ ನಿಮ್ಮ ಮನೆಗೆ ಬರಲಿದೆ: ಡಿ ಕೆ ಶಿವಕುಮಾರ್‌ ಎಚ್ಚರಿಕೆ

Date:

ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದ ಬಳಿಯ ಭುವನೇಶ್ವರಿ ಪ್ರತಿಮೆ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿ, “ನಗರದಾದ್ಯಂತ ಎಲ್ಲೆಂದರಲ್ಲಿ ಕಸದ ರಾಶಿ ಇರುವ ಸಮಸ್ಯೆ ಕುರಿತು ಟೀಕೆ ವ್ಯಕ್ತವಾಗುತ್ತಿದೆ. ಈಗಾಗಲೇ‌‌ ಸಾಕಷ್ಟು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದರಿಂದ ಎಲ್ಲೆಂದರಲ್ಲಿ ಕಸ ಎಸೆಯುವವರನ್ನು ಗುರುತಿಸಿ ಅವರ ಮನೆ ಮುಂದೆಯೇ ಅದೇ ಕಸ ಸುರಿದು ಬುದ್ದಿವಾದ ಹೇಳುವ ಕೆಲಸ ಮಾಡಲಾಗುತ್ತಿದೆ. ಕಸ ಎಸೆಯುವವರಿಗೆ ದಂಡ ವಿಧಿಸುವ ಕೆಲಸವೂ ನಡೆಯುತ್ತಿದೆ. ಈಗಾಗಲೇ ಲಕ್ಷಾಂತರ ರೂಪಾಯಿ ದಂಡ ಸಂಗ್ರಹಿಸಲಾಗಿದೆ” ಎಂದರು.

ಮುಂಬೈನಲ್ಲೂ ಮೂಲೆ,‌ ಮೂಲೆಯಲ್ಲಿ ಕಸದ ರಾಶಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶುಕ್ರವಾರದಂದು ಮುಂಬೈಗೆ ತೆರಳಿದ್ದೆ. ಅಲ್ಲಿಯೂ ಸಹ ಮೂಲೆ,‌ ಮೂಲೆಯಲ್ಲಿ ಕಸ ರಾಶಿ ಬಿದ್ದಿತ್ತು. ಬೇರೆ, ಬೇರೆ ಕಡೆಯಲ್ಲಿಯೂ ಬಿದ್ದಿರಬಹುದು. ಜನರು ತಮಗೆ ಇರುವ ಅವಕಾಶವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ನಿಲ್ಲಿಸಬೇಕು. ಜನರು ಸ್ವಚ್ಚ ಬೆಂಗಳೂರಿಗೆ ಹೆಚ್ಚು ಸಹಕಾರ ನೀಡಬೇಕು” ಎಂದು ಹೇಳಿದರು.

“ಮುಂಬೈ ನಗರದಲ್ಲಿ ಪ್ರಮುಖ ರಸ್ತೆಗಳ ಕಾಮಗಾರಿ ಹಾಗೂ ನಿರ್ವಹಣೆ ನಡೆಸಿದವರಿಗೆ ಆ ರಸ್ತೆ ಬದಿಗಳ ಕಸ ವಿಲೇವಾರಿ ಮಾಡುವ ಜವಾಬ್ದಾರಿಯನ್ನು ನೀಡಲಾಗಿದೆ ಎನ್ನುವ ಮಾಹಿತಿಯಿದೆ. ಬೆಂಗಳೂರಿನಲ್ಲೂ ಈ ಮಾದರಿ ಜಾರಿ ಮಾಡುವ ಕುರಿತು ಚರ್ಚೆ ಮತ್ತು ಆಲೋಚನೆ ನಡೆಸಲಾಗುತ್ತಿದೆ” ಎಂದರು.

“ಡಬ್ಬಗಳನ್ನು ಇಟ್ಟುಕೊಂಡು ಮನೆಯ ಕಸವನ್ನು ಅದರಲ್ಲಿ ಸಂಗ್ರಹಿಸಿ. ಅವುಗಳನ್ನು ಕಡ್ಡಾಯವಾಗಿ ಕಸ ಸಂಗ್ರಹ ವಾಹನಗಳಿಗೆ ನೀಡಿ ಎಂದು ಮನವಿ ಮಾಡುತ್ತೇನೆ. ನಮ್ಮ ಅಧಿಕಾರಿಗಳು ಶುಕ್ರವಾರ ತಡರಾತ್ರಿವರೆಗೂ ನನಗೆ ಕಸ ವಿಲೇವಾರಿ ಸೇರಿದಂತೆ ಇದರ ಬಗ್ಗೆ ಮಾಹಿತಿ ನೀಡುತ್ತಿದ್ದರು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಡಿಕೆಶಿ – ತೇಜಸ್ವಿ ಸೂರ್ಯ ಕಚ್ಚಾಟದಲ್ಲಿ ಬೆಂಗಳೂರಿಗಿಲ್ಲ ಲಾಭ!

ಕಸ ಸಂಗ್ರಹಣೆಗೆ ಸರಿಯಾದ ವ್ಯವಸ್ಥೆಯಿಲ್ಲ ಎನ್ನುವ ನಾಗರಿಕರ ಆರೋಪದ ಬಗ್ಗೆ ಕೇಳಿದಾಗ, “ಇದೆಲ್ಲವೂ ಸುಳ್ಳು. ಪ್ರತಿದಿನವೂ ಮನೆಗಳಲ್ಲಿ ಕಸ ಸಂಗ್ರಹ ನಡೆಯುತ್ತಿದೆ. ಸಮಸ್ಯೆ ಎದುರಾಗಿದ್ದರೆ ಸೂಚಿತ ದೂರವಾಣಿ ಸಂಖ್ಯೆಗೆ ದೂರು ನೀಡಲಿ. ಇಡೀ ದೇಶದಲ್ಲಿಯೇ ಅತ್ಯುತ್ತಮ ವ್ಯವಸ್ಥೆ ರೂಪಿಸಿದ್ದೇವೆ. ಎಲ್ಲಾದರೂ ಕಸ, ರಸ್ತೆಗುಂಡಿ ಕಂಡರೆ ನಮಗೆ ಪೋಟೊ ಹಾಗೂ ಜಾಗ ಕಳಿಸಿ ಎನ್ನುವ ಅವಕಾಶ ನೀಡಿದ್ದೇವೆ. ಮಾಧ್ಯಮಗಳು ಪ್ರತಿದಿನ ಒಂದೊಂದು ರಸ್ತೆಗುಂಡಿ ಹಾಕುತ್ತಲೇ ಇರುತ್ತಾರೆ. ಎಷ್ಟೇ ಕೆಲಸ ಮಾಡಿದರೂ ರಸ್ತೆಗುಂಡಿ ಇದ್ದೇ ಇರುತ್ತದೆ. ವಾಹನಗಳು ಜರ್ಕ್ ಹೊಡೆದರೆ ರಸ್ತೆಗುಂಡಿ ಉಂಟಾಗುತ್ತದೆ. ಆದ ಕಾರಣಕ್ಕೆ ನಾವು ಈ ಸಮಸ್ಯೆ ನಿವಾರಣೆಗೆ ಏನೇನೊ ಪ್ರಯತ್ನ ಮಾಡುತ್ತಿದ್ದೇವೆ” ಎಂದರು.

ಹತ್ತು ವರ್ಷ ಬಾಳಿಕೆ ಬರುವ ಡಾಂಬರ್ ರಸ್ತೆ ತಂತ್ರಜ್ಞಾನದ ಬಗ್ಗೆ ಆಲೋಚನೆ

“ಕನಿಷ್ಠ ಹತ್ತು ವರ್ಷ ಬಾಳಿಕೆ ಬರುವ ಡಾಂಬರ್ ರಸ್ತೆ ತಂತ್ರಜ್ಞಾನ ಬಳಸಿ ರಸ್ತೆ ನಿರ್ಮಾಣವು ಹೈದರಾಬಾದ್ ಸೇರಿದಂತೆ ಇತರೆಡೆ ಮಾಡಲಾಗುತ್ತಿದೆಯಂತೆ. ಇದರ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಕಾಮಗಾರಿ ನಡೆಸುವ ಯಂತ್ರಗಳು ಸಾಕಷ್ಟು ದುಬಾರಿಯಾದ‌ ಕಾರಣಕ್ಕೆ ಕನಿಷ್ಠ ಹತ್ತು ಕಿಲೋಮೀಟರ್ ಕಾಮಗಾರಿಗೆ ಅವಕಾಶ ನೀಡಬೇಕು ಎಂದು ಈ ತಂತ್ರಜ್ಞಾನ ಹೊಂದಿರುವವರು ತಿಳಿಸಿದ್ದಾರೆ. ಇದರ ಬಗ್ಗೆ ಚಿಂತನೆ ಮಾಡಲಾಗುತ್ತಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...