ಕರ್ನಾಟಕ ಅರಣ್ಯ ಇಲಾಖೆಯ ಪಡೆಗಳ ಮುಖ್ಯಸ್ಥರಾಗಿ ಐಎಫ್‌ಎಸ್ ಅಧಿಕಾರಿ ಮೀನಾಕ್ಷಿ ನೇಗಿ ನೇಮಕ

Date:

ಕರ್ನಾಟಕ ಅರಣ್ಯ ಇಲಾಖೆಯ ಪಡೆಗಳ ಮುಖ್ಯಸ್ಥರಾಗಿ ( ಎಚ್‌ಒಎಫ್‌ಎಫ್) ಹಿರಿಯ ಐಎಫ್‌ಎಸ್ ಅಧಿಕಾರಿ ಮೀನಾಕ್ಷಿ ನೇಗಿ ನೇಮಕಗೊಂಡಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಕರ್ನಾಟಕದ ಅರಣ್ಯ ಇಲಾಖೆಯಲ್ಲಿ ಹಲವಾರು ಮಹಿಳೆಯರು ಸೇವೆ ಸಲ್ಲಿಸಿದ್ದಾರೆ. ಐಎಫ್‌ಎಸ್‌ ಮಹಿಳಾ ಅಧಿಕಾರಿಗಳು ಕೂಡ ಕೆಲಸ ಮಾಡಿದ್ದಾರೆ. ಆದರೆ ಈವರೆಗೂ ಇಲಾಖೆಯ ಅತ್ಯುನ್ನತ ಹುದ್ದೆಯನ್ನು ಮಹಿಳೆಯೊಬ್ಬರು ಅಲಂಕರಿಸಿರಲಿಲ್ಲ.

ಇದೇ ಮೊದಲ ಬಾರಿಗೆ ಕರ್ನಾಟಕದ ಅರಣ್ಯ ಪಡೆಗಳ ಮುಖ್ಯಸ್ಥರಾಗಿ ಐಎಫ್‌ಎಸ್ ಹಿರಿಯ ಮಹಿಳಾ ಅಧಿಕಾರಿ ಮೀನಾಕ್ಷಿ ನೇಗಿ ಚುಕ್ಕಾಣಿ ಹಿಡಿಯುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೀನಾಕ್ಷಿ ನೇಗಿ ಯಾರು?

ಮೀನಾಕ್ಷಿ ನೇಗಿ ಅವರು ಮೂಲತಃ ಉತ್ತರಖಂಡ ರಾಜ್ಯದವರು. ಐಎಫ್‌ಎಸ್ ಅಧಿಕಾರಿಯಾಗಿ ಕರ್ನಾಟಕಕ್ಕೆ ನಿಯೋಜನೆಗೊಂಡವರು. 1989ರ ಬ್ಯಾಚ್‌ ಕರ್ನಾಟಕ ಕೇಡರ್‌ ಅಧಿಕಾರಿಯಾಗಿ ಮೂರೂವರೆ ದಶಕದಿಂದ ಸೇವೆ ಸಲ್ಲಿಸುತ್ತಿದ್ದಾರೆ.

ಮೀನಾಕ್ಷಿ ನೇಗಿ ಅವರು ಅವರು ಅರಣ್ಯ ಪಡೆಗಳ ಮುಖ್ಯಸ್ಥರಾಗುವ ಮೊದಲು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯ ಕಾರ್ಯದರ್ಶಿಯಾಗಿದ್ದರು. ಕರ್ನಾಟಕ ಅರಣ್ಯ ಪಡೆಗಳ ಮುಖ್ಯಸ್ಥರನ್ನಾಗಿ ನೇಮಕ ಮಾಡುವ ಕುರಿತು ಉನ್ನತ ಮಟ್ಟದ ಸಮಿತಿ ಸಭೆ ಸೇರಿ ತೀರ್ಮಾನ ಕೈಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸೇವೆಯಿಂದ ಬಿಡುಗಡೆ ಮಾಡಲಾಗಿದೆ. ಈಗ ಅವರು ಕರ್ನಾಟಕ ಸೇವೆಗೆ ಮರಳಿದ್ದಾರೆ.

Meenakshi Negi 1

ಭಾರತದ ಆಡಳಿತ ವಲಯದಲ್ಲಿ ಅತ್ಯುತ್ತಮ ಹಾಗೂ ದಕ್ಷ ಅಧಿಕಾರಿ ಎಂದೇ ಅವರು ಹೆಸರು ಮಾಡಿದವರು. ಕರ್ನಾಟಕದ ಬಳ್ಳಾರಿ, ಮಂಡ್ಯ, ಚಿಕ್ಕಮಗಳೂರಿನಲ್ಲಿ ಡಿಸಿಎಫ್ ಆಗಿ ಸೇವೆ ಸಲ್ಲಿಸಿದವರು. ಬಳ್ಳಾರಿಯಲ್ಲಿ ಡಿಸಿಎಫ್ ಆಗಿ ಆವರು ಮಾಡಿದ ಕೆಲಸವನ್ನು ಈಗಲೂ ಆ ಭಾಗದವರು ನೆನಪಿಸಿಕೊಳ್ಳುತ್ತಾರೆ. ನಾಲ್ಕು ವರ್ಷ ಮಂಡ್ಯದಲ್ಲೂ ಡಿಸಿಎಫ್ ಆಗಿ ಗಮನ ಸೆಳೆಯುವ ಕೆಲಸ ಮಾಡಿದವರು ಮೀನಾಕ್ಷಿ ನೇಗಿ, ಟಿಂಬರ್ ಮಾರಾಟಕ್ಕೆ ಆನ್‌ಲೈನ್ ಸ್ವರೂಪ ನೀಡಿದವರು. ಆನಂತರ ಕೇಂದ್ರ ಸೇವೆಗೆ ತೆರಳಿ ಅಲ್ಲಿ ಆಯುಷ್ ಇಲಾಖೆ ಜಂಟಿ ಕಾರ್ಯದರ್ಶಿಯಾಗಿದ್ದವರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ವಿಳಂಬ, ನಜೀರ್ ಸಾಬ್‌ರಿಗೆ ಬಗೆದ ದ್ರೋಹವಲ್ಲವೇ?

ಕರ್ನಾಟಕದ ಆಯುಷ್ ಇಲಾಖೆ ಆಯುಕ್ತರಾಗಿ ಸೇವೆ ಸಲ್ಲಿಸಿ ಇಲಾಖೆಯಲ್ಲಿ ಪಾರದರ್ಶಕ ಆಡಳಿತಕ್ಕೆ ಒತ್ತು ನೀಡಿದವರು. ಎರಡನೇ ಬಾರಿ ಕೇಂದ್ರ ಸೇವೆಗೆ ಮರಳಿದ ಮೀನಾಕ್ಷಿ ಅವರು ಎರಡು ವರ್ಷದಿಂದ ಮಹಿಳಾ ಆಯೋಗದ ಸದಸ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಮಹಿಳೆಯರ ಹಕ್ಕುಗಳು, ಅವರ ಆರೋಗ್ಯ ಸಂಬಂಧಿಸಿ ಆಯೋಗ ಕೈಗೊಂಡ ಸುಧಾರಣೆ ಕ್ರಮದ ಹಿಂದೆ ಇದ್ದವರು ಮೀನಾಕ್ಷಿ. ಇದಕ್ಕಾಗಿ ಚೇಂಜ್ ಮೇಕರ್ ಪ್ರಶಸ್ತಿಯೂ ಅವರಿಗೆ ಲಭಿಸಿದೆ. ತಿಂಗಳ ಹಿಂದೆಯಷ್ಟೇ ಮೀನಾಕ್ಷಿ ನೇಗಿ ಅವರನ್ನು ಭಾರತ ಸರ್ಕಾರದಲ್ಲಿ ಕಾರ್ಯದರ್ಶಿ/ಕಾರ್ಯದರ್ಶಿ ಸಮಾನ ಹುದ್ದೆಗಳನ್ನು ಅಲಂಕರಿಸಲು ಆಯ್ಕೆ ಮಾಡಲಾಗಿತ್ತು.

ಐಎಫ್‌ಎಸ್‌ ದಂಪತಿ

ಮೀನಾಕ್ಷಿ ನೇಗಿ ಅವರ ಪತಿ ವಿಜಯ ಶರ್ಮ ಕೂಡ ಕರ್ನಾಟಕ ಕೇಡರ್ ಐಎಫ್‌ಎಸ್‌ ಅಧಿಕಾರಿಯಾಗಿದ್ದರು. ಅತ್ಯುತ್ತಮ ಅಧಿಕಾರಿಯಾಗಿ ಹೆಸರು ಮಾಡಿದವರು. ಕರ್ನಾಟಕ ಸರ್ಕಾರಿ ಸ್ವಾಮ್ಯದ ಜಂಗಲ್ ರೆಸಾರ್ಟ್ ಎಂಡಿಯಾಗಿ ಅದಕ್ಕೆ ಹೊಸ ರೂಪ ನೀಡಿದವರು. ಅವರು ಜನವರಿಯಲ್ಲಿ ನಿವೃತ್ತರಾಗಿದ್ದಾರೆ.

ಮಹಿಳೆಗೆ ಮೊದಲ ಅವಕಾಶ

ಕರ್ನಾಟಕದಲ್ಲಿ ಮಧುಶರ್ಮಾ, ರೀತು ಕಕ್ಕರ್ ಅವರು ಹಿಂದೆ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ( ಪಿಸಿಸಿಎಫ್) ಆಗಿ ಸೇವೆ ಸಲ್ಲಿಸಿದ್ದಾರೆ. ಅರಣ್ಯ ಪಡೆಗಳ ಮುಖ್ಯಸ್ಥರಾಗುವ ಅವಕಾಶ ಸಿಗಲಿಲ್ಲ. ಈಗ ಇಲಾಖೆಯಲ್ಲಿ ಹಿರಿತನ ಹೊಂದಿರುವ ಮೀನಾಕ್ಷಿ ನೇಗಿ ಅವರಿಗೆ ಈ ಅವಕಾಶ ಒದಗಿ ಬಂದಿದೆ.

ಕರ್ನಾಟಕ ಅರಣ್ಯ ಇಲಾಖೆ ಸೇವೆಯಲ್ಲಿ ಸದ್ಯ 25ಕ್ಕೂ ಐಎಫ್‌ಎಸ್ ದರ್ಜೆಯ ಅಧಿಕಾರಿಗಳು ಇದ್ದಾರೆ. ಅದರಲ್ಲಿ ಪಿಸಿಸಿಎಫ್ ಹುದ್ದೆಯಲ್ಲಿಯೇ ಮೂವರು ಇರುವುದು ವಿಶೇಷ. ಕರ್ನಾಟಕದಲ್ಲಿ ಒಟ್ಟು ಎಂಟು ಪಿಸಿಸಿಎಫ್ ಹುದ್ದೆಗಳಿವೆ. ಸದ್ಯ ಮೀನಾಕ್ಷಿ ನೇಗಿ ಅವರೊಟ್ಟಿಗೆ ಸೀಮಾಗರ್ಗ್, ರಾಧಾದೇವಿ ಕೂಡ ಇದ್ದಾರೆ. ಮೀನಾಕ್ಷಿ ನೇಗಿ ಅವರ ನಂತರ ರಾಧಾದೇವಿ, ಸದ್ಯ ಎಪಿಸಿಸಿಎಫ್ ಆಗಿರುವ ಸ್ಮಿತಾ ಬಿಜೂರು ಕೂಡ ಅರಣ್ಯ ಪಡೆಗಳ ಮುಖ್ಯಸ್ಥರ ಹುದ್ದೆ ಅಲಂಕರಿಸುವರು.

ಹಲವು ರಾಜ್ಯಗಳಲ್ಲಿ ಮಹಿಳಾ ಸಾರಥ್ಯ

ಭಾರತದ ಹಲವು ರಾಜ್ಯಗಳಲ್ಲಿ ಅರಣ್ಯ ಪಡೆಗಳ ಮುಖ್ಯಸ್ಥರಾಗಿ ಮಹಿಳೆಯರು ಈ ಹಿಂದೆ ಸೇವೆ ಸಲ್ಲಿಸಿದ್ದಾರೆ. ರಾಜಸ್ಥಾನದಲ್ಲಿ ಸವಿತಾ ಆನಂದ್‌, ಡಾ.ಶೃತಿ ಶರ್ಮ, ತೆಲಂಗಾಣದಲ್ಲಿ ಶೋಭಾ, ಹಿಮಾಚಲ ಪ್ರದೇಶದಲ್ಲಿ ಡಾ.ಸವಿತಾ, ಉತ್ತರಾಖಂಡದಲ್ಲಿ ರಂಜನಾ ಕಾಲ, ವೀಣಾ ಸೇಖಾರಿ, ಹರಿಯಾಣದಲ್ಲಿ ಡಾ.ಅಮರಿಂದರ್ ಕೌರ್ ಅವರು ಈ ಹುದ್ದೆಯಲ್ಲಿ ಸೇವೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...