ಹೆಚ್ಚುವರಿಯಾಗಿ 21 ಬರಪೀಡಿತ ತಾಲ್ಲೂಕು ಘೋಷಿಸಿದ ಸರ್ಕಾರ

Date:

  • 17 ತಾಲ್ಲೂಕು ತೀವ್ರ ಬರಪೀಡಿತ, 4 ಸಾಧಾರಣಾ ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ
  • ಮೊದಲ ಸುತ್ತಿನಲ್ಲಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದೆ 

ರಾಜ್ಯ ಸರ್ಕಾರವು ಎರಡನೇ ಸುತ್ತಿನಲ್ಲಿ ಹೆಚ್ಚುವರಿಯಾಗಿ 17 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ಮತ್ತು ನಾಲ್ಕು ಸಾಧಾರಣಾ ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದೆ.

ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ – 2020ರ ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ವಯ ಜಿಲ್ಲಾಧಿಕಾರಿಗಳಿಂದ ಬೆಳೆಹಾನಿ ಸಮೀಕ್ಷೆಯ ವರದಿಯನುಸಾರ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ 195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಮೊದಲ ಸುತ್ತಿನಲ್ಲಿ ಸರ್ಕಾರ ಘೋಷಿಸಿದೆ.

ಈ ಹಿಂದೆ ಘೋಷಿಸಿದ್ದ ಸಾಧಾರಣ ಬರಪೀಡಿತ 34 ತಾಲ್ಲೂಕುಗಳಲ್ಲಿ ಮತ್ತೊಮ್ಮೆ 22 ತಾಲ್ಲೂಕುಗಳ ಬೆಳೆ ಸಮೀಕ್ಷೆ ದೃಢೀಕರಣ ವರದಿಯನ್ವಯ 11 ತೀವ್ರ ಬರ ಪೀಡಿತ ತಾಲ್ಲೂಕು ಹಾಗೂ 11 ಸಾಧಾರಣ ಬರ ಪೀಡಿತ ತಾಲ್ಲೂಕು ಎಂದು ಸರ್ಕಾರ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ ಹೆಚ್ಚುವರಿಯಾಗಿ 21 ಬರ ಪೀಡಿತ ತಾಲ್ಲೂಕುಗಳ ಪೈಕಿ 17 ತೀವ್ರ ಬರಪೀಡಿತ ತಾಲ್ಲೂಕು ಹಾಗೂ 04 ಸಾಧಾರಣಾ ಬರಪೀಡಿತ ತಾಲ್ಲೂಕುಗಳೆಂದು ಎಂದು ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.

ತೀವ್ರ ಬರಪೀಡಿತ ತಾಲ್ಲೂಕುಗಳು

ಬೆಳಗಾವಿ ಜಿಲ್ಲೆಯಲ್ಲಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕು, ಚಾಮರಾಜನಗರ ಜಿಲ್ಲೆಯಲ್ಲಿ ಚಾಮರಾಜನಗರ ತಾಲ್ಲೂಕು, ಧಾರವಾಡ ಜಿಲ್ಲೆಯಲ್ಲಿ ಅಳ್ನಾವರ, ಅಣ್ಣಿಗೇರಿ ಹಾಗೂ ಕಲಘಟಗಿ ತಾಲ್ಲೂಕುಗಳು, ಗದಗ ಜಿಲ್ಲೆಯಲ್ಲಿ ಮುಂಡರಗಿ ತಾಲ್ಲೂಕು, ಹಾಸನ ಜಿಲ್ಲೆಯಲ್ಲಿ ಆಲೂರು, ಅರಸೀಕೆರೆ ಹಾಗೂ ಹಾಸನ ತಾಲ್ಲೂಕು, ಹಾವೇರಿ ಜಿಲ್ಲೆಯಲ್ಲಿ ಬ್ಯಾಡಗಿ, ಹಾನಗಲ್‌‌ ಹಾಗೂ ಶಿಗ್ಗಾವ್, ಕೊಡಗು ಜಿಲ್ಲೆಯಲ್ಲಿ ಪೊನ್ನಂಪೇಟೆ, ಮೈಸೂರು ಜಿಲ್ಲೆಯಲ್ಲಿ ಕೆ ಆರ್‌ ನಗರ ತಾಲ್ಲೂಕು, ಉಡುಪಿ ಜಿಲ್ಲೆಯ ಹೆಬ್ರಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲ್ಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ.

ಸಾಧಾರಣ ಬರಪೀಡಿತ ತಾಲ್ಲೂಕುಗಳು

ಚಾಮರಾಜನಗರ ಜಿಲ್ಲೆಯ ಯಳಂದೂರು, ಚಿಕ್ಕಮಗಳೂರಿನ ಮೂಡಿಗೆರೆ ಮತ್ತು ತರೀಕೆರೆ ಹಾಗೂ ಉತ್ತರ ಕನ್ನಡದ ಸಿದ್ದಾಪುರ ತಾಲ್ಲೂಕುಗಳನ್ನು ಸಾಧಾರಣ ತಾಲ್ಲೂಕುಗಳೆಂದು ಸರ್ಕಾರ ಘೋಷಿಸಿದೆ.

Baragala

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...