ಹೈಕೋರ್ಟ್‌ನಲ್ಲಿ ನ್ಯಾ. ನಾಗಪ್ರಸನ್ನ ಐದು ವರ್ಷ ಪೂರ್ಣ, 16 ಸಾವಿರಕ್ಕೂ ಹೆಚ್ಚು ಪ್ರಕರಣ ವಿಲೇವಾರಿ

Date:

ಕರ್ನಾಟಕ ಹೈಕೋರ್ಟ್​ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಬಾಕಿ ಪ್ರಕರಣಗಳ ವಿಲೇವಾರಿಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಮಂಗಳವಾರಕ್ಕೆ (ನವೆಂಬರ್ 26) ಐದು ವರ್ಷ ಪೂರ್ಣಗೊಂಡ ಬೆನ್ನಲ್ಲೇ ಅವರು ಈವರೆಗೂ 16 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಹಿಂದೆ ಒಂದೇ ದಿನ ಬರೋಬ್ಬರಿ 600 ಪ್ರಕರಣಗಳ‌ ವಿಚಾರಣೆ ನಡೆಸಿ ಮಹತ್ವದ ಮೈಲುಗಲ್ಲು ಸಾಧಿಸಿದ್ದರು. ಆ ಮೂಲಕ ಈ ಹಿಂದಿನ ತಮ್ಮದೇ ದಾಖಲೆಯನ್ನು ಮುರಿದಿದ್ದರು.

2023 ರ ಜೂ.12 ರಂದು ಒಂದೇ ದಿನ 522 ಪ್ರಕರಣಗಳ ವಿಚಾರಣೆ ನಡೆಸಿದ್ದರು. 2023 ರ ಡಿ.20 ರಂದು ಒಂದೇ ದಿನ 50 ತೀರ್ಪುಗಳನ್ನು ಪ್ರಕಟಿಸಿದ್ದರು. ಕೆಲ ತಿಂಗಳ ಹಿಂದೆ ಒಂದೇ ದಿನ 480 ಪ್ರಕರಣಗಳ ಪಟ್ಟಿ ಮಾಡಿಸಿ ಅಷ್ಟೂ ಪ್ರಕರಣಗಳ ವಿಚಾರಣೆ ನಡೆಸಿದ್ದರು. ಬಾಕಿ ಪ್ರಕರಣಗಳ ವಿಲೇವಾರಿಯಲ್ಲಿ ಮಹತ್ವದ ಪಾತ್ರ ವಹಿಸಿರುವ ನ್ಯಾಯಮೂರ್ತಿಗಳು ಪ್ರಕರಣವನ್ನು ಶೀಘ್ರವಾಗಿ ಗ್ರಹಿಸಿ ತಕ್ಷಣ ಆದೇಶ ಪ್ರಕಟಿಸುವುದರಲ್ಲಿ ಸಿದ್ದಹಸ್ತರೆಂದು ಹೈಕೋರ್ಟ್ ವಕೀಲರ ವಲಯದಲ್ಲಿ ಖ್ಯಾತಿ ಗಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉಪಸಮರದ ಗೆಲುವು– ಈಗಲಾದರೂ ಎಚ್ಚೆತ್ತುಕೊಳ್ಳುತ್ತಾ ಕಾಂಗ್ರೆಸ್‌ ಸರ್ಕಾರ?

ನಾಗಪ್ರಸನ್ನ ಅವರು 1971ರ ಮಾರ್ಚ್‌ 23ರಂದು ಜನಿಸಿದ್ದು, 2019ರ ನವೆಂಬರ್ 26ರಂದು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡು 2021ರ ಸೆಪ್ಟಂಬರ್ 8ರಂದು ಕಾಯಂಗೊಂಡಿದ್ದಾರೆ.

ಹೈಕೋರ್ಟ್‌ನಲ್ಲಿ ಇತರೆ ನ್ಯಾಯಮೂರ್ತಿಗಳ ವಿಲೇವಾರಿ ಪ್ರಮಾಣ ವರ್ಷವೊಂದಕ್ಕೆ ಸರಾಸರಿ 750 ಅರ್ಜಿಗಳಷ್ಟಿದೆ ಎಂಬ ಅಂದಾಜಿಸಲಾಗಿದೆ. ಹಲವು ಮಹತ್ವದ ತೀರ್ಪುಗಳನ್ನು ನೀಡಿರುವ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ಪೀಠಗಳಲ್ಲಿ ವಿಚಾರಣೆ ನಡೆಸಿ ಈತನಕ ಒಟ್ಟು 16,500 ಪ್ರಕರಣಗಳ ವಿಲೇವಾರಿ ಮಾಡಿದ್ದಾರೆ. ಇವುಗಳಲ್ಲಿ ವಿಭಾಗೀಯ ಪೀಠದಲ್ಲಿ ಭಾಗಿಯಾಗಿ ವಿಲೇವಾರಿ ಮಾಡಿದ ಪ್ರಕರಣಗಳನ್ನು ಹೊರತುಪಡಿಸಲಾಗಿದೆ ಎಂದು ಹೈಕೋರ್ಟ್‌ ಮೂಲಗಳು ತಿಳಿಸಿರುವುದಾಗಿ ಬಾರ್‌ & ಬೆಂಚ್‌ ವರದಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...