ದಾಂಡೇಲಿ | ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನರ‌ ಸಾವು

Date:

ಉತ್ತರ ಕನ್ನಡದ ದಾಂಡೇಲಿ ಬಳಿ ಬರಿಯಂಪೈಲಿ ಗ್ರಾಮದ ಸನಿಹ ಅಕೋಡಾ ಮಜಿರೆ ಬಳಿ ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನ ಸಾವನ್ನಪ್ಪಿದ ದುರ್ಘಟನೆ ಇಂದು ನಡೆದಿದೆ. ಮೃತರಲ್ಲಿ ನಾಲ್ವರು ಮಕ್ಕಳು‌ ಸೇರಿದ್ದಾರೆ.  ಇವರೆಲ್ಲರೂ ಹುಬ್ಬಳ್ಳಿಯಿಂದ ಪ್ರವಾಸಕ್ಕೆಂದು ಆಗಮಿಸಿದ್ದರು.

ಕಾಳಿ ನದಿಯಲ್ಲಿ ಈಜಲು ಇಳಿದಾಗ ಆರು ವರ್ಷದ ಮೊಹಿನ್‌ ಅಹಮ್ಮದ್ ನೀರಿನ ಸೆಳವಿಗೆ ಸಿಕ್ಕಿದ್ದಾನೆ. ಆತನನ್ನು ರಕ್ಷಿಸಲು ಅಲ್ಪಿಯಾ ಅಹಮ್ಮದ್ ( 10) , ಇಫ್ರಾ ಅಹಮ್ಮದ್( 15), ಅಬೀದ್ ಅಹಮ್ಮದ್ (12) ನೀರಲ್ಲಿ ಮುಳುಗಿದರು. ಇವರ ರಕ್ಷಣೆ ಇಳಿದ ತಂದೆ ನಜೀರ್ ಅಹಮ್ಮದ್ (40) , ನಜೀರ್ ಸಹೋದರಿ ರೇಶ್ಮಾ ಉನ್ನೀಸಾ ( 38) ಸಹ ನದಿಯಲ್ಲಿ ಮುಳುಗಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇಡಿ ಎಂಬ ತನಿಖಾ ಸಂಸ್ಥೆಯ ಘನತೆಯನ್ನು ಮಣ್ಣುಪಾಲು ಮಾಡಿದ್ದೇ ಮೋದಿಯ ‘ಮಹಾನ್’ ಸಾಧನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವರ ಜೊತೆಗಿದ್ದ ಇಬ್ಬರು ಸುರಕ್ಷಿತವಾಗಿದ್ದಾರೆ. ಇವರು ನದಿಯ ದಡದಲ್ಲಿದ್ದರು ಎನ್ನಲಾಗಿದೆ. ನದಿಯಲ್ಲಿ ಮುಳುಗಿದ ಎಲ್ಲರನ್ನು ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ದಾಂಡೇಲಿ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು ನಿಂದ ಹೊರಟಿದ್ದರು ;

ನಜೀರ್ ಹಾಗೂ ಅವರ ಸಹೋದರಿ ರೇಶ್ಮಾ ಬೆಂಗಳೂರುನಿಂದ ಹುಬ್ಬಳ್ಳಿಯ ಸಂಬಂಧಿಕರ ಮನೆಗೆ ಭೇಟಿ ನೀಡಿ, ಅಲ್ಲಿಂದ ದಾಂಡೇಲಿ ಮಾರ್ಗವಾಗಿ ಕಾರವಾರಕ್ಕೆ ಬರುವವರಿದ್ದರು‌. ಮಾರ್ಗಮಧ್ಯೆ ಹುಬ್ಬಳ್ಳಿ ಸಂಬಂಧಿಕರ ಮನೆಗೆ ನಜೀರ್ ಅಹಮ್ಮದ್ ಹೋಗಿದ್ದರು. ಹುಬ್ಬಳ್ಳಿ ಯಿಂದ ಕಾರವಾರಕ್ಕೆ ಬರುವವರಿದ್ದರು. ಮಾರ್ಗಮಧ್ಯೆ ಬಿರಯಂಪಯಲಿ ಗ್ರಾಮ ಅಕೋಡಾ ಬಳಿ ಕಾಳಿ ನದಿ ನೋಡಲು ಇಳಿದಿದ್ದಾರೆ. ಇದು ಅತ್ಯಂತ ದುರ್ಗಮ ಪ್ರದೇಶ. ಇಲ್ಲಿ ನದಿಯಲ್ಲಿ ಈಜಲು ಯಾರೂ ಹೋಗದ ಸ್ಥಳವೆಂದು ಸ್ಥಳೀಯರು ಮಾತಾಡಿಕೊಳ್ಳುತ್ತಿದ್ದಾರೆ.

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...