ಚುನಾವಣಾ ನಿರಂಕುಶ ಪ್ರಭುತ್ವದತ್ತ ಭಾರತ ಜಾರುತ್ತಿದೆ: ಮಾಧವ ದೇಶಪಾಂಡೆ

Date:

ನಮ್ಮದು ಬೂದು ಬಣ್ಣದ ಚುನಾಯಿತ ಪ್ರಜಾಪ್ರಭುತ್ವದ ಮಾದರಿಯಾಗಿತ್ತು. ಅದೀಗ ಚುನಾಯಿತ ಸರ್ವಾಧಿಕಾರಕ್ಕೆ, ಅಂದರೆ ಗ್ರೇ ಎಲೆಕ್ಟೋರಲ್ ಆಟೋಕ್ರಸಿಗೆ ಹೊರಳಿದೆ. ಕಳೆದ 4 ತಿಂಗಳಿಂದ ಭಾರತ ಎಲೆಕ್ಟೋರಲ್ ಆಟೋಕ್ರಸಿಯಲ್ಲಿದೆ ಎಂಬುದು ಖಚಿತವಾಗಿದೆ. ಇಂತಹ ವರ್ಗೀಕರಣದ ವ್ಯಾಪ್ತಿಯೊಳಗೆ ರಷ್ಯಾ ದೇಶವಿರುವುದನ್ನು ಗಮನಿಸಬಹುದು ಎಂದು ಒಬಾಮಾ ಆಡಳಿತ ಸಲಹೆಗಾರ ಹಾಗೂ ತಾಂತ್ರಿಕ ಸುರಕ್ಷಣಾ ತಜ್ಞ ಮಾಧವ ದೇಶಪಾಂಡೆ ಆತಂಕ ವ್ಯಕ್ತಪಡಿಸಿದರು.

ಬೆಂಗಳೂರಿನ ಗಾಂಧಿ ಭವನದಲ್ಲಿ ಸೋಮವಾರ ʼಎದ್ದೇಳು ಕರ್ನಾಟಕʼ ಆಯೋಜಿಸಿದ್ದ, ಚುನಾವಣಾ ಆಯೋಗ ದೇಶವ್ಯಾಪಿ ಮಾಡಲು ಹೊರಟಿರುವ SIR ಪ್ರಕ್ರಿಯೆಯನ್ನು ವಿರೋಧಿಸಿ ನಡೆಯುತ್ತಿರುವ ಮಂಥನಾ ಸಮಾವೇಶದಲ್ಲಿ ಅವರು ಮಾತನಾಡಿದರು.

“ಪ್ರಜಾಪ್ರಭುತ್ವದ ನಾಲ್ಕು ಪ್ರಮುಖ ಸ್ತಂಭಗಳು ಕುಸಿಯುತ್ತಿರುವುದು ರಾಜಕೀಯ ಸಮಸ್ಯೆ ಮಾತ್ರವಲ್ಲದೆ, ನಾಗರಿಕ ಹಕ್ಕುಗಳನ್ನು ಕಳ್ಳತನ ಮಾಡುವ ಪ್ರಕ್ರಿಯೆಯಾಗಿಯೂ ರೂಪುಗೊಂಡಿದೆ. ಪ್ರಜಾಪ್ರಭುತ್ವದ ಮೂಲ ಉದ್ದೇಶಗಳು ಹೇಗೆ ನಾಶವಾಗುತ್ತಿವೆ, ನಮ್ಮದೇ ನಾಗರಿಕತ್ವ ನಮ್ಮವರ ಕೈಯಲ್ಲಿಯೇ ಹೇಗೆ ಕಸಿಯಲ್ಪಡುತ್ತಿದೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಸಂಪೂರ್ಣ ಡಿಜಿಟಲ್ ಆಗಿರುವ ಚುನಾವಣಾ ವ್ಯವಸ್ಥೆಗೆ ಯಾವುದೇ ಎಲೆಕ್ಟ್ರಾನಿಕ್ ಲಾಕಿಂಕ್‌ ಸಿಸ್ಟಮ್ ಇಲ್ಲದಿರುವುದು, ಡೇಟಾ ತಿದ್ದುಪಡಿಯ ಅಪಾಯವನ್ನು ಸ್ಪಷ್ಟವಾಗಿ ಹೇಳುತ್ತದೆ. Evm ಯಂತ್ರಗಳ ವಿನಿಮಯವೂ ಇಲ್ಲಿ ಸಾಧ್ಯ. ಹೀಗಿರುವಾಗ ಯಾವುದರ ಆಧಾರದ ಮೇಲೆ ಇಡೀ ಚುನಾವಣಾ ವ್ಯವಸ್ಥೆಯನ್ನು ಡಿಜಿಟಲೀಕರಣ ಮಾಡಲಾಗಿದೆ ಎನ್ನುವುದನ್ನು ಗಂಭೀರವಾಗಿ ಚಿಂತಿಸಬೇಕಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ‌ ಸಾಮಾಜಿಕ ಚಿಂತಕ ಹಾಗೂ ರಾಜಕೀಯ ವಿಶ್ಲೇಷಕ ಶಿವಸುಂದರ್, ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರೈಟ್ಸ್‌ನ ಮುಖ್ಯಸ್ಥ ಹರೀಶ್‌ ನರಸಪ್ಪ, ಜಾಮಾಅತೆ ಇಸ್ಲಾಮಿ ಹಿಂದ್‌ನ ರಾಜ್ಯ ಕಾರ್ಯದರ್ಶಿ ಮೊಹಮ್ಮದ್‌ ಕುನ್ನಿ, ಎದ್ದೇಳು ಕರ್ನಾಟಕದ ಮುಖ್ಯಸ್ಥೆ ತಾರಾ ರಾವ್‌, ನಮ್ಮ ಓಟು, ನಮ್ಮ ಹಕ್ಕು ಅಭಿಯಾನದ ಮಾನವಿ, ಸಾಮಾಜಿಕ ಹೋರಾಟಗಾರ ನೂರ್‌ ಶ್ರೀಧರ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...