ಕನ್ನಡ ಅಭ್ಯರ್ಥಿಗಳಿಗೆ ಅನ್ಯಾಯ: ಕೆಪಿಎಸ್‌ಸಿ ಫಲಿತಾಂಶ ತಡೆಯುವಂತೆ ಸಿಎಂಗೆ ಸಾಹಿತಿ ಬರಗೂರು ಪತ್ರ

Date:

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) 384 ಗೆಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳ ನೇಮಕಾತಿಗಾಗಿ ಇತ್ತೀಚೆಗೆ ನಡೆಸಿದ ಪೂರ್ವಭಾವಿ ಮರು ಪರೀಕ್ಷೆಯಲ್ಲಿ, ಭಾಷಾಂತರದ ಕಾರಣಕ್ಕೆ ಕನ್ನಡದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಆ ಅನ್ಯಾಯ ಸರಿಪಡಿಸುವವರೆಗೂ ಫಲಿತಾಂಶವನ್ನು ತಡೆ ಹಿಡಿಯಬೇಕು’ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರಗೂರು ಪತ್ರ ಬರೆದಿದ್ದು, ಕನ್ನಡದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಖಂಡಿಸಿದ್ದಾರೆ.

‘ಮೊದಲು ನಡೆದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಯ ಭಾಷಾಂತರದಲ್ಲಿ ತಪ್ಪುಗಳು ಆಗಿದ್ದವು. ಹೀಗಾಗಿ ಮರುಪರೀಕ್ಷೆ ನಡೆಸಲಾಯಿತು. ಅದರಲ್ಲೂ ಕನ್ನಡ ಭಾಷಾಂತರದ ಸಮಸ್ಯೆ ಇದ್ದೇ ಇದೆ. ಅದರಿಂದ ಉಂಟಾದ ಗೊಂದಲದ ಕಾರಣಕ್ಕೆ ಕನ್ನಡದಲ್ಲಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಗರಿಷ್ಠ ಪ್ರಮಾಣದಲ್ಲಿ ಅನುತ್ತೀರ್ಣರಾಗಿದ್ದಾರೆ’ ಎಂದು ಪತ್ರದಲ್ಲಿ ಬರಗೂರು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಪೂರ್ವಭಾವಿ ಮರುಪರೀಕ್ಷೆಯಲ್ಲಿ ಉತ್ತೀರ್ಣರಾದ ಕನ್ನಡದ ಅಭ್ಯರ್ಥಿಗಳ ಪ್ರಮಾಣ ಶೇ 15–20ರಷ್ಟು ಮಾತ್ರ. ಕನ್ನಡ ಅನುವಾದದಲ್ಲಿ ಹೀಗೆ ಪದೇ ಪದೇ ತಪ್ಪುಗಳು ಆಗುತ್ತಿದ್ದರೆ, ಕನ್ನಡ ಏಕೆ ಬೇಕು ಎಂಬ ಮನೋಭಾವ ಬೆಳೆಯುತ್ತದೆ. ಇದನ್ನು ತಪ್ಪಿಸಲು ಸರ್ಕಾರವು ಅಗತ್ಯ ಕ್ರಮ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಂಗಳೂರು ಮೆಟ್ರೋ ದರ ಏರಿಕೆ ವಿರುದ್ಧ ಸಹಿ ಸಂಗ್ರಹಕ್ಕೆ ತಡೆಯೊಡ್ಡಿದ ಪೊಲೀಸರು: ಬೆಂಬಲಕ್ಕೆ ನಿಂತ ಜನ

‘ಕನ್ನಡದಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ, ನಂತರ ಇಂಗ್ಲಿಷ್‌ಗೆ ಅನುವಾದಿಸುವುದು ಸರಿಯಾದ ಕ್ರಮ. ಆದರೆ ಇಲ್ಲಿ ಇಂಗ್ಲಿಷ್‌ನಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ, ಕನ್ನಡಕ್ಕೆ ಅನುವಾದ ಮಾಡಲಾಗಿದೆ. ಇದು ಕರ್ನಾಟಕ ಆಡಳಿತ ಭಾಷಾ ನೀತಿಯ ಸ್ಪಷ್ಟ ಉಲ್ಲಂಘನೆ ಎಂದು ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

‘ಕನ್ನಡದ ಬದಲು ಇಂಗ್ಲಿಷ್‌ಗೆ ಆದ್ಯತೆ ನೀಡಿ, ಆಡಳಿತ ಭಾಷಾ ನೀತಿಯನ್ನು ಉಲ್ಲಂಘಿಸಿದವರ ವಿರುದ್ಧ ಅಗತ್ಯ ಕ್ರಮ ತೆಗೆದುಕೊಳ್ಳುವ ಅವಶ್ಯಕತೆ ಇದೆ. ಕನ್ನಡದಲ್ಲಿ ಪರೀಕ್ಷೆ ಬರೆದವರು ಹೆಚ್ಚಿನ ಸಂಖ್ಯೆಯಲ್ಲಿ ಅನುತ್ತೀರ್ಣರಾಗುತ್ತಿರುವುದರ ಬಗ್ಗೆ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...