ಒಳ ಮೀಸಲಾತಿ | ಜಾತಿರಹಿತ ಬೌದ್ಧರಿಗೆ ಸಮೀಕ್ಷೆಯಲ್ಲಿ ಪ್ರತ್ಯೇಕ ಧರ್ಮದ ಕಾಲಂ ರಚಿಸಿ: ಮಹಾಸಭಾ ಆಗ್ರಹ

Date:

ರಾಜ್ಯದಲ್ಲಿ ಮೇ 5 ರಿಂದ 17 ರವರೆಗೆ ಒಳ ಮೀಸಲಾತಿ ವರ್ಗೀಕರಣ ಮಾಡುತ್ತಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿ ಸಮೀಕ್ಷೆ ದತ್ತಾಂಶದಲ್ಲಿ ಬೌದ್ಧ ಧರ್ಮದ ಕಾಲಂ ಸೃಷ್ಟಿಸಿಲ್ಲ ಹಾಗೂ ಜಾತಿರಹಿತ ಬೌದ್ಧರೆಂದು ಸೇರಿಸಲು ಯಾವುದೇ ದತ್ತಾಂಶ ಇಲ್ಲ. ಕೂಡಲೇ ಈ ಸಮಸ್ಯೆ ಬಗೆಹರಿಸಬೇಕು ಎಂದು ಭಾರತೀಯ ಬೌದ್ಧ ಮಹಾಸಭಾ ಯುವ ಘಟಕದ ರಾಜ್ಯಾಧ್ಯಕ್ಷ ದರ್ಶನ ಸೋಮಶೇಖರ್ ಒತ್ತಾಯಿಸಿದ್ದಾರೆ.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಅಂಬೇಡ್ಕರ್ ಬುದ್ಧರ ಅನುಯಾಯಿಗಳಾಗಿದ್ದು, ನಾವೆಲ್ಲರೂ ಬೌದ್ಧ ಧರ್ಮವನ್ನು ಪರಿಪಾಲನೆ ಮಾಡುತ್ತಿದ್ದೇವೆ. ಜಾತಿರಹಿತವಾದ ಬೌದ್ಧ ಧರ್ಮವನ್ನು ಅನುಸರಿಸುತ್ತಿದ್ದೇವೆ. ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗಳು, ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರಿಗೆ ಈಗಾಗಲೇ ಮನವಿ ಮಾಡಿದ್ದರೂ ಸಹ ಬೌದ್ಧ ಧರ್ಮದ ಕಾಲಂ ಹಾಗೂ ಜಾತಿರಹಿತ ಬೌಧರೆಂದು ಸೇರಿಸಲು ದತ್ತಾಂಶದಲ್ಲಿ ಹೊಸ ವಿಭಾಗ ರಚಿಸಿಲ್ಲ” ಎಂದರು.

“ಈಗಾಗಲೇ ಒಳಮೀಸಲಾತಿಯ ಜನಗಣತಿಯ ಸಮೀಕ್ಷೆಯಲ್ಲಿ ಜಾತಿ ಹೆಸರನ್ನು ಬರಸದೇ ಇರುವವರನ್ನು ಬೌದ್ದರೆಂದು ಪರಿಗಣಿಸಬೇಕು ಹಾಗೂ ಬೌದ್ಧರಾದವರಿಗೆ ದತ್ತಾಂಶದಲ್ಲಿ ಸರಳೀಕರಣದ ದಾಖಲೆಗಳನ್ನು ಪಡೆಯುವಂತೆ ಕ್ರಮಕೈಗೊಳ್ಳಬೇಕು. ಬೌದ್ಧರಾದವರಿಗೆ ದತ್ತಾಂಶದಲ್ಲಿ ಸರಳೀಕರಣದ ದಾಖಲೆಗಳನ್ನು ಪಡೆಯಲು ಕ್ರಮ ತೆಗೆದುಕೊಳ್ಳಬೇಕು. ಇನ್ನು ಮುಂದೆ ನಮೂದಿಸಲ್ಪಟ್ಟ ಜಾತಿರಹಿತ ಬೌದ್ಧ ಧರ್ಮೀಯರಿಗೆ ಜನಸಂಖ್ಯೆ ಗಾತ್ರಕ್ಕೆ ಅನುಗುಣವಾಗಿ ಅವರ ಸಾಂವಿಧಾನಿಕ ಹಕ್ಕನ್ನು ನೀಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಳಮೀಸಲಾತಿ ಸಮೀಕ್ಷೆಯಲ್ಲಿ ದ್ರಾವಿಡ, ಆದಿ ದ್ರಾವಿಡ ಸೇರಿದಂತೆ ಒಳ ಪಂಗಡಗಳಿಗೆ ಪ್ರತ್ಯೇಕ ಕಾಲಂ ಇದೆ. ರಾಜ್ಯದಾದ್ಯಂತ ಅಂಬೇಡ್ಕರ್ ಮತ್ತು ಬೌದ್ಧರ ಅನುಯಾಯಿಗಳನ್ನು ಸಂಘಟಿಸುವ ಜವಾಬ್ದಾರಿಯನ್ನು ಭಾರತೀಯ ಬೌದ್ಧ ಮಹಾಸಭಾ ಯುವ ಘಟಕ ಹೊಂದಿದೆ. ಡಾ.ಬಿ.ಆರ್. ಅಂಬೇಡ್ಕರ್‌ ಅವರ ಆಶಯಗಳನ್ನು ಪೂರೈಸಲು ನಮ್ಮ ಸಂಘಟನೆಗೆ ಪೂರಕವಾಗಿ ಒಳ ಮೀಸಲಾತಿಯಲ್ಲಿ ವ್ಯವಸ್ಥೆ ಕಲ್ಪಿಸಿಕೊಡಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...