ಒಳಮೀಸಲಾತಿ | ಕೊನೆಗೂ ಕೂಡಿಬಂತು ಭಾಗ್ಯ, ಅಲೆಮಾರಿಗಳಿಗೆ ಕಂಟಕ!

Date:

ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿ ವಿಚಾರವಾಗಿ ರಾಜ್ಯ ಸರ್ಕಾರ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಂಡಿದೆ.

ನ್ಯಾ.ನಾಗಮೋಹನ್‌ದಾಸ್‌ ಆಯೋಗದ ವರದಿಯಲ್ಲಿನ ಮೀಸಲಾತಿ ವರ್ಗೀಕರಣದ ಕುರಿತು ಅಪಸ್ವರ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಬಗ್ಗೆ ಕುತೂಹಲ ಉಂಟಾಗಿತ್ತು. ಇದೀಗ ಸರ್ಕಾರ ಒಂದು ತೀರ್ಮಾನಕ್ಕೆ ಬಂದಿದೆ.

ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ. ಎಡಗೈ ಮತ್ತು ಬಲಗೈ ಸಮುದಾಯಗಳಿಗೆ ತಲಾ 6% ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ. ಪರಿಶಿಷ್ಟ ಜಾತಿ ಸಮುದಾಯವನ್ನು ಎಡಗೈ, ಬಲ ಮತ್ತು ಇತರೆ ಎಂಬ ಮೂರು ಗುಂಪುಗಳಾಗಿ ಮರುವರ್ಗೀಕರಣ ಮಾಡಲಾಗಿದ್ದು, ಕ್ರಮವಾಗಿ 6%, 6% ಮತ್ತು 5% ಒಳಮೀಸಲಾತಿ ನೀಡಲು ವಿಶೇಷ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿವೃತ್ತ ನ್ಯಾ.ನಾಗಮೋಹನ್‌ದಾಸ್‌ ಅವರ ಆಯೋಗವು ತನ್ನ ವರದಿಯಲ್ಲಿ 101 ಪರಿಶಿಷ್ಟ ಜಾತಿಗಳನ್ನು ಐದು ಗುಂಪುಗಳಾಗಿ ವರ್ಗೀಕರಣ ಮಾಡಿ ಶೇ.17ರಷ್ಟು ಮೀಸಲಾತಿ ಹಂಚಿಕೆ ಮಾಡಿದೆ. ಆದರೆ ಸರ್ಕಾರ ಮೂರು ಗುಂಪುಗಳನ್ನಾಗಿ ಮಾಡಿದೆ. ಎಡಗೈ, ಬಲಗೈ ಹಾಗೂ ಸ್ಪೃಶ್ಯ ದಲಿತರೊಂದಿಗೆ ಅಲೆಮಾರಿಗಳ ಸೇರ್ಪಡೆಯಾಗಿದೆ ಎನ್ನಲಾಗುತ್ತಿದೆ.

ಗುಂಪುಗಳ ರಚನೆ ವೇಳೆ ಆದಿ ಕರ್ನಾಟಕ, ಆದಿ ಆಂಧ್ರ ಹಾಗೂ ಆದಿ ದ್ರಾವಿಡ ಜಾತಿಗಳನ್ನು ಪ್ರತ್ಯೇಕ ಗುಂಪಾಗಿ ಪರಿಗಣಿಸಿ ಶೇ.1ರಷ್ಟು ಮೀಸಲಾತಿ ನೀಡಿರುವುದಕ್ಕೆ ಬಲಗೈ ಸಮುದಾಯಗಳಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ನಿವಾಸದಲ್ಲಿ ಸಭೆ ನಡೆಸಿ ಮೀಸಲಾತಿ ವರ್ಗೀಕರಣ ಕುರಿತು ಪುನರ್‌ ಪರಿಶೀಲನೆ ಮಾಡಿ ವರದಿ ನೀಡುವಂತೆ ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಹಾಗೂ ಪರಿಷತ್‌ ಸದಸ್ಯ ಸುಧಾಮ್‌ದಾಸ್‌ ಅವರಿಗೆ ಜವಾಬ್ದಾರಿ ವಹಿಸಲಾಗಿದೆ. ಅವರು ನೀಡಿದ ವರದಿ ಆಧಾರದ ಮೇಲೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಗಳು ಆಗಿವೆ ಎನ್ನುವ ಮಾಹಿತಿ ಇದೆ.

ಸೂಚಿಸಿರುವ ವರ್ಗೀಕರಣ

ಶೇ.17ರಷ್ಟು ಮೀಸಲಾತಿಯನ್ನು ಐದು ವರ್ಗಗಳಾಗಿ ವಿಂಗಡಿಸಿದ್ದು, ಮತ್ತು ಅತಿ ಸೂಕ್ಷ್ಮ ಜಾತಿಗಳನ್ನು ‘ಎ’ ವರ್ಗವಾಗಿ ವಿಂಗಡಿಸಿ ಶೇ.1, ಮಾದಿಗ ಮತ್ತು ಅದೇ ರೀತಿಯ ಅಸ್ಪೃಷ್ಯತೆ ಅನುಭವಿಸುತ್ತಿರುವ ಅತ್ಯಂತ ಹಿಂದುಳಿರುವ ಜಾತಿಗಳನ್ನು ‘ಬಿ’ ಎಂದು ವರ್ಗೀಕರಣ ಮಾಡಿ ಶೇ.6, ಹೊಲೆಯ ಮತ್ತು ಅದೇ ರೀತಿ ಅಸ್ಪೃಶ್ಯತೆ ಜೊತೆಗೆ ಹಿಂದುಳಿರುವ ಜಾತಿಗಳನ್ನು ‘ಸಿ’ ಎಂದು ಪರಿಗಣಿಸಿ ಶೇ.5, ಅಸ್ಪೃಶ್ಯರಲ್ಲದ ಭೋವಿ, ಲಂಬಾಣಿ, ಕೊರಚ, ಕೊರಮ ಈ ನಾಲ್ಕು ಜಾತಿಗಳನ್ನು ‘ಡಿ’ ಎಂದು ಪರಿಗಣಿಸಿ ಶೇ.4, ಮಾದಿಗ, ಛಲವಾದಿ ಎಂದು ಗುರುತಿಸಿಕೊಳ್ಳದ ಆದಿಕರ್ನಾಟಕ, ಆದಿ ಆಂಧ್ರ, ಆದಿದ್ರಾವಿಡ ಎಂದೇ ಗುರುತಿಸಿಕೊಂಡಿರುವ ಗುಂಪನ್ನು ‘ಇ’ ಎಂದು ಶೇ.1ರಷ್ಟು ಮೀಸಲಾತಿ ನೀಡಿ ವರ್ಗೀಕರಿಸಲಾಗಿತ್ತು. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಎಡ, ಬಲ ಹಾಗೂ ಇತರೆ ಎಂದು ಮೂರು ವಿಂಗಡನೆ ಮಾಡಿ ಮರುವರ್ಗೀಕರಿಸಿ ಒಳಮೀಸಲಾತಿ ಮರುಹಂಚಿಕೆಗೆ ತೀರ್ಮಾನಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...