ಒಳಮೀಸಲಾತಿ: ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

Date:

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇ.17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಇಂದು ಸಂಜೆ (ಡಿಸೆಂಬರ್ 6) ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣದಲ್ಲಿ ಸಿದ್ದರಾಮಯ್ಯನವರು ಸಭೆ ನಡೆಸಿದ್ದು, ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಆಹಾರ ಸಚಿವರಾದ ಕೆ.ಎಚ್. ಮುನಿಯಪ್ಪ ಭಾಗಿಯಾಗಿದ್ದರೆಂದು ಮೂಲಗಳು ಹೇಳಿವೆ.

‘ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸೀಟುಗಳು ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆ, 2022’ರ ಅಡಿಯಲ್ಲಿ ಒಳ ಮೀಸಲಾತಿ ಹೆಚ್ಚಳವನ್ನು ಜಾರಿಗೊಳಿಸದಂತೆ ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ತಡೆ ನೀಡಿತ್ತು. ಕಾಯ್ದೆಯ ನಿಬಂಧನೆಗಳನ್ನು ಪ್ರಶ್ನಿಸಿ ಮಹೇಂದ್ರ ಕುಮಾರ್ ಮಿತ್ರ ಎಂಬವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸೇರಿದಂತೆ ಹಲವಾರು ಅರ್ಜಿಗಳನ್ನು ಆಲಿಸಿದ ನಂತರ, “ಅರ್ಜಿಗಳು ಇತ್ಯರ್ಥವಾಗುವವರೆಗೆ ನೇಮಕಾತಿ ಅಥವಾ ಹೆಚ್ಚಿದ ಮೀಸಲಾತಿ ಆಧಾರದ ಮೇಲೆ ನೇಮಕಾತಿಗಳಿಗೆ ಯಾವುದೇ ಅಧಿಸೂಚನೆಗಳನ್ನು ಹೊರಡಿಸಬಾರದು. ಈಗಾಗಲೇ ಪ್ರಾರಂಭವಾಗಿರುವ ನೇಮಕಾತಿಗಳನ್ನು ಮುಂದುವರಿಸಬಹುದು, ಆದರೆ ಈ ನೇಮಕಾತಿಗಳು ಸದ್ಯ ಸಲ್ಲಿಸಲಾಗಿರುವ ಅರ್ಜಿಗಳ ಅಂತಿಮ ತೀರ್ಪಿಗೆ ಒಳಪಟ್ಟಿರಬೇಕು” ಎಂದು ಕೋರ್ಟ್ ಹೇಳಿತ್ತು. ಶೇ.15ರ ಬದಲಿಗೆ ಶೇ.17ರ ಪ್ರಮಾಣದಲ್ಲಿ ಮೀಸಲಾತಿಯನ್ನು ಸರ್ಕಾರ ಹಂಚಿಕೆ ಮಾಡಿದ್ದು, ಅದನ್ನು ಸಮರ್ಥಿಸಲು ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಶೇ.17ರ ಮೀಸಲಾತಿಯನ್ನು ಸಮರ್ಥನೆ ಮಾಡಲು ಆಯೋಗದ ಅಂಕಿ-ಅಂಶಗಳಿವೆ. ಈಗಾಗಲೇ ಛತ್ತೀಸ್‌ಗಡದಲ್ಲಿ ಶೇ.58ರಷ್ಟು ಮೀಸಲಾತಿಯನ್ನು ಜಾರಿಗೆ ತರಲಾಗಿದೆ ಎಂದು ಸಭೆಯಲ್ಲಿ ಚರ್ಚಿಸಿರುವುದಾಗಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದರ ಜೊತೆಗೆ “ಒಳಮೀಸಲಾತಿಗೆ ಸಂಬಂಧಿಸಿದಂತೆ ಕಾಯ್ದೆಯನ್ನು ತರಬೇಕು ಮತ್ತು ಸೂಕ್ತ ನಿಯಮಾವಳಿಗಳನ್ನೂ ರೂಪಿಸಬೇಕು. ಬಡ್ತಿ ಮೀಸಲಾತಿಯಲ್ಲೂ ಒಳಮೀಸಲಾತಿ ಜಾರಿಗೆ ತರಲು ಈಗಾಗಲೇ ಇರುವ ಕಾಯ್ದೆಗೆ ತಿದ್ದುಪಡಿ ಮಾಡಲು ಸರ್ಕಾರ ನಿರ್ಧರಿಸಿದೆ” ಎಂದು ಮೂಲಗಳು ‘ಈದಿನ’ಕ್ಕೆ ಮಾಹಿತಿ ನೀಡಿವೆ.

ಸಿದ್ದರಾಮಯನ ಹುಂಡಿಯಲ್ಲಿ ಪಾದಯಾತ್ರೆ ಶುರು ಮಾಡದಂತೆ ಹೋರಾಟಗಾರರಿಗೆ ತೊಂದರೆ ಕೊಟ್ಟ ಬಗ್ಗೆಯೂ ಮುಖ್ಯಮಂತ್ರಿಗಳ ಗಮನಕ್ಕೆ ಹೋರಾಟಗಾರರು ತಂದಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿಯವರು ತುರ್ತು ಸಭೆ ಕರೆಯಲು ಹೋರಾಟದ ಒತ್ತಡವೂ ಕಾರಣ ಎಂದು ಮೂಲಗಳು ಹೇಳಿವೆ. ಅಡ್ವೊಕೇಟ್ ಜನರಲ್ ಸಭೆಯಲ್ಲಿ ಇದ್ದರೆಂದು ತಿಳಿದುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...