ಒಳಮೀಸಲಾತಿ | ಸಮೀಕ್ಷೆಗೆ ಸರ್ವರ್ ದೋಷ ಅಡ್ಡಿ; ಗಣತಿದಾರರು ಹೈರಾಣು

Date:

ಒಳಮೀಸಲಾತಿ ಜಾರಿಗಾಗಿ ಹತ್ತು ದಿನಗಳ ಹಿಂದೆ ಆರಂಭವಾದ ಬಹು ನಿರೀಕ್ಷಿತ ‘ಪರಿಶಿಷ್ಟ ಜಾತಿ’ ಸಮೀಕ್ಷೆಗೆ ತಾಂತ್ರಿಕ ದೋಷಗಳು ಅಡ್ಡಿಯುಂಟುಮಾಡುತ್ತಿವೆ. ಸರ್ವರ್ ಸಮಸ್ಯೆ ಮತ್ತು ಅಗತ್ಯ ಮಾನವಶಕ್ತಿಯ ಕೊರತೆಯನ್ನು ಸಮೀಕ್ಷೆ ಪ್ರಕ್ರಿಯೆಯು ಎದುರಿಸುತ್ತಿದೆ. ಇದು ನಾಗರಿಕರು ಕೋಪಗೊಳ್ಳುವಂತೆ ಮಾಡಿದೆ. ಗಣತಿದಾರರನ್ನು ಚಿಂತೆಗೀಡು ಮಾಡಿದೆ.

ಪರಿಶಿಷ್ಟ ಜಾತಿಗಳ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಈ ಸಮೀಕ್ಷೆಯು ನಿರ್ಣಾಯಕವಾಗಿದೆ. ಆದರೆ, ಸಮೀಕ್ಷೆ ಈಗ ಸರ್ವರ್ ಕ್ರ್ಯಾಶ್‌ಗಳು ಮತ್ತು ಸಾಫ್ಟ್‌ವೇರ್ ನಿಧಾನಗತಿಯಂತಹ ತಾಂತ್ರಿಕ ಸಮಸ್ಯೆಯನ್ನು ಎದುರಿಸುತ್ತಿದೆ. ಇದರಿಂದಾಗಿ ಡೇಟಾ ಸಂಗ್ರಹಣೆಯಲ್ಲಿ ಭಾರೀ ವಿಳಂಬವಾಗಲಿದೆ ಎಂದು ಹೇಳಲಾಗಿದೆ.

ರಾಜ್ಯದ ನಾನಾ ಭಾಗಗಳಲ್ಲಿ ಸಮೀಕ್ಷೆಗೆ ಒಳಪಡುತ್ತಿರುವ ಜನರು ಸರ್ವರ್ ನಿಧಾನವಾಗಿ ಕೆಲಸ ಮಾಡುತ್ತಿರುವ ಬಗ್ಗೆ ಹತಾಶೆ ವ್ಯಕ್ತಪಡಿಸಿದ್ದಾರೆ. ಸಮೀಕ್ಷೆಗೆ ಹೆಚ್ಚು ಸಮಯ ವ್ಯಯವಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಣತಿದಾರರು ಅಸಹಾಯಕರಾಗಿದ್ದಾರೆ. ದೋಷವುಳ್ಳ ಅಪ್ಲಿಕೇಶನ್‌ಗಳು ಮತ್ತು ಓವರ್‌ಲೋಡ್ ಸರ್ವರ್‌ಗಳಿಂದಾಗಿ ಸಮೀಕ್ಷೆಗೆ ಒಳಪಡಿಸುವ ನಿವಾಸಿಗಳನ್ನು ಕೋಪಗೊಳ್ಳುವಂತೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.

“ಸರ್ಕಾರವು ಇಷ್ಟು ಮುಖ್ಯವಾದ ಸಮೀಕ್ಷೆಯನ್ನು ಈ ರೀತಿ ನಡೆಸಿದರೆ, ಸಮೀಕ್ಷೆಯ ಫಲಿತಾಂಶವನ್ನು ನಾವು ಹೇಗೆ ನಂಬಲು ಸಾಧ್ಯ” ಎಂದು ಸಮೀಕ್ಷೆಗೆ ಒಳಪಟ್ಟ ನಿವಾಸಿಯೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

“ಸಮೀಕ್ಷೆಯ ಅಪ್ಲಿಕೇಷನ್‌ನಲ್ಲಿ ತಾಂತ್ರಿಕ ಸಮಸ್ಯೆಯಿತ್ತು. ಈ ಬಗ್ಗೆ ಸರ್ವೇಯರ್‌ಗಳಿಂದ ಅನೇಕ ಕರೆಗಳು ಬಂದಿವೆ. ಆ ಸಮಸ್ಯೆಯನ್ನು ಈಗ ಪರಿಹರಿಸಲಾಗಿದೆ” ಎಂದು ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಶುಕ್ರವಾರ ಮತ್ತು ಶನಿವಾರ ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದವು. ಆಗ ಗಣತಿದಾರರಿಂದ ನಮಗೆ ಅನೇಕ ದೂರುಗಳು ಬಂದಿದ್ದವು. ಈ ಸಮಸ್ಯೆ ಬಗೆಹರಿದಿದೆ. ದೂರುಗಳ ಸಂಖ್ಯೆ ಕಡಿಮೆಯಾಗಿದೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ” ಎಂದು ಅಧಿಕಾರಿಗಳು ಹೇಳಿಕೊಂಡಿದ್ದಾರೆ. ಆದರೂ, ಸಮೀಕ್ಷೆಯ ನಿಖರತೆ ಮತ್ತು ವಿಶ್ವಾಸಾರ್ಹತೆಯ ಬಗ್ಗೆ ಅನೇಕರು ಇನ್ನೂ ಸಂಶಯ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...