ಇನ್ವೆಸ್ಟ್‌ ಕರ್ನಾಟಕ 2025 | ಇಂದಿನಿಂದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ

Date:

ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್‌, ನವೋದ್ಯಮ, ಏರೊಸ್ಪೇಸ್‌ ಆ್ಯಂಡ್‌ ಡಿಫೆನ್ಸ್‌ ಮತ್ತಿತರ ಕ್ಷೇತ್ರಗಳಲ್ಲಿ ವಿಶ್ವದಾದ್ಯಂತ ಪ್ರಖ್ಯಾತಿಯ ಛಾಪು ಮೂಡಿಸಿರುವ ಕರ್ನಾಟಕವು, ʼಪ್ರಗತಿಯ ಮರುಕಲ್ಪನೆʼ (Reimagining Growth) ಧ್ಯೇಯದ ಇನ್ವೆಸ್ಟ್‌ ಕರ್ನಾಟಕ 2025ರ ಮೂಲಕ ವಿಶ್ವದಾದ್ಯಂತದ ಹೂಡಿಕೆದಾರರನ್ನು ರಾಜ್ಯದತ್ತ ಸೆಳೆಯಲು ಸಜ್ಜಾಗಿದೆ.

ಮಂಗಳವಾರದಿಂದ ಶುಕ್ರವಾರದವರೆಗೆ (ಫೆ. 11ರಿಂದ 14) ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲಿರುವ ಉದ್ದಿಮೆ ದಿಗ್ಗಜರು, ಹೂಡಿಕೆದಾರರು, ನವೋದ್ಯಮಗಳ ಕನಸುಗಾರರು, ನೀತಿ ನಿರೂಪಣೆಯ ಚಿಂತಕರಿಗೆ ಸಾಮಾವೇಶ ವೇದಿಕೆ ಕಲ್ಪಿಸಲಿದೆ.

“ಮಂಗಳವಾರ ಮಧ್ಯಾಹ್ನ 4 ಗಂಟೆಗೆ ಬೆಂಗಳೂರು ಅರಮನೆ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರು ಸಮಾವೇಶ ಉದ್ಘಾಟಿಸಲಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಎಚ್.ಡಿ.ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ ಸೇರಿದಂತೆ ಇತರ ಗಣ್ಯರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ” ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉದ್ದಿಮೆ, ನೀತಿ ನಿರೂಪಣೆ ಹಾಗೂ ನಾವೀನ್ಯತೆ ಕ್ಷೇತ್ರದ ದಿಗ್ಗಜರ ಸಮಾಗಮಕ್ಕೆ, ಚಿಂತನ ಮಂಥನಕ್ಕೆ ಇದು ವೇದಿಕೆ ಒದಗಿಸಲಿದೆ. ಬುಧವಾರದಿಂದ ಶುಕ್ರವಾರದವರೆಗೆ ನಡೆಯಲಿರುವ ವಿವಿಧ ವಿಚಾರಗೋಷ್ಠಿಗಳಲ್ಲಿ ವಿವಿಧ ಕ್ಷೇತ್ರಗಳ ದಿಗ್ಗಜರು ಉದ್ದಿಮೆ ಲೋಕದ ಭವಿಷ್ಯದ ಬಗೆಗಿನ ತಮ್ಮ ಒಳನೋಟಗಳನ್ನು ಹಂಚಿಕೊಳ್ಳಲಿದ್ದಾರೆ. ಪ್ರಮುಖ ಹೂಡಿಕೆ ಒಪ್ಪಂದಗಳಿಗೆ ಸಹಿ ಹಾಕಲಾಗುವುದು” ಎಂದು ಅವರು‌ ವಿವರಿಸಿದ್ದಾರೆ.

“ಸಮಾವೇಶದಲ್ಲಿ ಇದೇ ಮೊದಲ ಬಾರಿಗೆ ಇನ್ವೆಸ್ಟ್‌ ಕರ್ನಾಟಕ ಪ್ರಶಸ್ತಿ, ಎಸ್‌ಎಂಇ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ʼಎಸ್‌ಎಂಇ ಕನೆಕ್ಟ್‌- 25ʼ, ವೆಂಚುರೈಸ್‌ನ ಎರಡನೆ ಆವೃತ್ತಿ ಇತರ ವಿಶೇಷತೆಗಳಾಗಿವೆ. 60ಕ್ಕೂ ಹೆಚ್ಚು ಕಂಪನಿಗಳು ಮತ್ತು ನವೋದ್ಯಮಗಳು ತಯಾರಿಕೆ, ಸಂಚಾರ ಮತ್ತು ಶುದ್ಧ ಇಂಧನ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಗೆ ಕಾರಣವಾಗುವ ತಂತ್ರಜ್ಞಾನಗಳನ್ನು ಪ್ರದರ್ಶಿಸಲಿವೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಕ್ವಿನ್‌ ಸಿಟಿ-ನಲ್ಲಿ ಸಹಭಾಗಿತ್ವ ವಿಸ್ತರಿಸಲು ಆದ್ಯತೆ ನೀಡಲಾಗುವುದು” ಎಂದು ಹೇಳಿದ್ದಾರೆ.

“ರಾಜ್ಯಕ್ಕೆ ಭಾರಿ ಪ್ರಮಾಣದಲ್ಲಿ ಬಂಡವಾಳ ಹರಿದು ಬರಲು ಅಗತ್ಯವಾದ ಭೂಮಿಕೆಯನ್ನು ರಾಜ್ಯ ಸರ್ಕಾರವು ಹದಗೊಳಿಸಿದೆ. ಇತ್ತೀಚಿನ ವರ್ಷಗಳಲ್ಲಿ ಹತ್ತಾರು ಪ್ರಥಮಗಳನ್ನು ತನ್ನ ಮುಡಿಗೆ ಏರಿಸಿಕೊಂಡಿರುವ ಕರ್ನಾಟಕವು, ಈ ಸಮಾವೇಶದ ನೆರವಿನಿಂದ ತನ್ನ ಕೈಗಾರಿಕಾ ಪ್ರಗತಿಯ ವೇಗ ಹೆಚ್ಚಿಸಲು ದೃಢ ನಿರ್ಧಾರ ಮಾಡಿದೆ” ಎಂದು ಸಚಿವ ಪಾಟೀಲ್ ವಿವರಿಸಿದ್ದಾರೆ.

ವಿವಿಧ ವಿಚಾರಗೋಷ್ಠಿಗಳು, ಸಂವಾದ, ಸಮೂಹ ಚರ್ಚೆಗಳೂ ನಡೆಯಲಿವೆ

ಫೆ. 12

  1. ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಮತ್ತು ಸರ್ಕಾರ: ಅನಿಶ್ಚಿತ ಜಗತ್ತಿನಲ್ಲಿ ಡಿಜಿಟಲ್ ಕ್ಷಮತೆ ನಿರ್ಮಾಣ
  2. ಕ್ಷಮತೆಯ ಮಾರ್ಗೋಪಾಯಗಳು: ಜಾಗತಿಕ ಸವಾಲುಗಳ ಮಧ್ಯೆ ಭಾರತದ ಆರ್ಥಿಕ ಬೆಳವಣಿಗೆ
  3. ಭವಿಷ್ಯಕ್ಕೆ ನಾವೀನ್ಯತೆ
  4. ಮುಂದಾಳತ್ವ: ಭಾರತದ ಭವಿಷ್ಯ ರೂಪಿಸುತ್ತಿರುವ ಯುವ ನಾವೀನ್ಯಕಾರರು- ಸಂವಾದಗಳಲ್ಲಿ ಪರಿಣತರು ತಮ್ಮ ಚಿಂತನೆಗಳನ್ನು ಮಂಡಿಸಲಿದ್ದಾರೆ.

ಫೆ. 13

  1. ಕೃತಕ ಬುದ್ಧಿಮತ್ತೆ ಸೀಮಾರೇಖೆ: ದೈತ್ಯ ಜಿಗಿತದಿಂದ ನೈಜ-ಪ್ರಪಂಚದ ಪ್ರಭಾವಗಳವರೆಗೆ- ಸಂವಾದ2. ವೈವಿಧ್ಯಮಯ ಪಥಗಳಿಂದ ಸಾಮಾನ್ಯ ಗುರಿಯವರೆಗೆ- ಸಮೂಹ ಚರ್ಚೆ

ಫೆ. 14
ಪ್ರಕ್ಷುಬ್ಧತೆಯಲ್ಲಿ ಅಭಿವೃದ್ಧಿ ಸಾಧಿಸುವುದು: ಶಾಶ್ವತ ಕ್ಷಮತೆ ನಿರ್ಮಿಸುವುದರ ಸವಾಲುಗಳು ಕುರಿತು ಆಡಳಿತ ಪರಿಣತರು ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...