ಹೂಡಿಕೆದಾರರ ಸಮಾವೇಶ | ಸಾಮಾಜಿಕ ಜವಾಬ್ದಾರಿ ನೆನಪಿಸಿದ ಕರವೇ

Date:

ಇವತ್ತಿನಿಂದ ವಿಶ್ವ ಹೂಡಿಕೆದಾರರ ಸಮಾವೇಶ, ಇನ್ವೆಸ್ಟ್ ಕರ್ನಾಟಕ ಆರಂಭಗೊಳ್ಳುತ್ತಿದೆ. 10 ಲಕ್ಷ ಕೋಟಿ ಹೂಡಿಕೆಯ ನಿರೀಕ್ಷೆಯನ್ನು ರಾಜ್ಯ ಸರ್ಕಾರ ಇಟ್ಟುಕೊಂಡಿದೆ. ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಉತ್ತೇಜನ ನೀಡುವುದು ಸರಿಯಾದ ಕ್ರಮ. ಇದನ್ನು ಸ್ವಾಗತಿಸುತ್ತೇವೆ. ಆದರೆ ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮತ್ತು ಹೂಡಿಕೆದಾರರಿಗೆ ಇರಬೇಕಾದ ಸಾಮಾಜಿಕ ಜವಾಬ್ದಾರಿಗಳನ್ನು ಮರೆಯುವಂತಿಲ್ಲ” ಎಂದು ಕರವೇ ಅಧ್ಯಕ್ಷ ನಾರಾಯಣ ಗೌಡ ಎಚ್ಚರಿಸಿದ್ದಾರೆ.

“ಬಂಡವಾಳ ಹೂಡಿಕೆ, ಉದ್ಯಮಶೀಲತೆಗೆ ಪ್ರೋತ್ಸಾಹ ಎಲ್ಲವೂ ಸರಿಯೇ. ಆದರೆ ಅದು ಈ ನಾಡಿನ ಜನರನ್ನು ಒಳಗೊಳ್ಳದಿದ್ದರೆ ಅದಕ್ಕೆ ಅರ್ಥವಿಲ್ಲ. ಇನ್ವೆಸ್ಟ್ ಕರ್ನಾಟಕದ ಬಹುಪಾಲು ಲಾಭ ಕನ್ನಡಿಗರಿಗೆ ದೊರೆಯುವಂತಾಗಬೇಕು. ಇಲ್ಲವಾದಲ್ಲಿ ಉದ್ಯಮಿಗಳಿಗೆ ರತ್ನಗಂಬಳಿ ಹಾಸಿ ಕರೆಯುವುದರಲ್ಲಿ ಯಾವುದೇ ಪ್ರಯೋಜನವೂ ಇರುವುದಿಲ್ಲ. ಇನ್ವೆಸ್ಟ್ ಕರ್ನಾಟಕದ ಮೂಲಕ ರಾಜ್ಯ, ಹೊರರಾಜ್ಯಗಳಲ್ಲಿ ಇರುವ ಕನ್ನಡಿಗ ಉದ್ಯಮಿಗಳಿಗೆ ಹೆಚ್ಚಿನ ಆದ್ಯತೆ ದೊರೆಯುವಂತಾಗಬೇಕು. ಯಾವುದೇ ಉದ್ಯಮ ಕರ್ನಾಟಕಕ್ಕೆ ಬಂದರೂ ಸಿ ಮತ್ತು ಡಿ ದರ್ಜೆಯ ಎಲ್ಲ ಹುದ್ದೆಗಳು ಕನ್ನಡದ ಮಕ್ಕಳಿಗೆ ದೊರೆಯುವಂತಾಗಬೇಕು. ಇತರ ಹುದ್ದೆಗಳಲ್ಲಿ ಶೇ. 60ರಷ್ಟು ಕನ್ನಡಿಗರಿಗೇ ದೊರೆಯಬೇಕು. ಆಗ ಇಂಥ ಸಮಾವೇಶ ನಿಜವಾದ ಅರ್ಥದಲ್ಲಿ ಯಶಸ್ವಿಯಾಗುತ್ತದೆ. ಕರ್ನಾಟಕ ಎಂದರೆ ಕೇವಲ ಒಂದು ಭೂಭಾಗವಲ್ಲ, ಕರ್ನಾಟಕವೆಂದರೆ ಇಲ್ಲಿನ ಜನರು, ಅವರ ಬದುಕು. ಅದನ್ನು ಸರ್ಕಾರ, ಉದ್ಯಮಿಗಳು ಮರೆಯಬಾರದು” ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಹಿಂದೆ ಕರ್ನಾಟಕದಲ್ಲಿ ಬಂಡವಾಳ ಹೂಡಿದವರು ಸರ್ಕಾರ ನೀಡಿದ ಎಲ್ಲ ಸಹಾಯವನ್ನು ಪಡೆದು, ರಿಯಾಯಿತಿ ದರದಲ್ಲಿ ಭೂಮಿ, ತೆರಿಗೆ ರಜೆ, ಕಡಿಮೆ ದರದಲ್ಲಿ ವಿದ್ಯುತ್, ನೀರಿನ ಸೌಲಭ್ಯ ಇತ್ಯಾದಿಗಳನ್ನು ಪಡೆದು ಬೆಳೆದು ನಿಂತವು. ಆದರೆ ಕನ್ನಡಿಗರಿಗೆ ಉದ್ಯೋಗ ಕೊಡಿ ಎಂದು ಕೇಳಿದಾಗ “ನಾವು ಅರ್ಹತೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುತ್ತೇವೆ” ಎಂದು ದುರಂಹಕಾರದ ಹೇಳಿಕೆಗಳನ್ನು ನೀಡಿದವು. ಇದು ಕೃತಘ್ನತೆಯ ಪರಮಾವಧಿ ಮಾತ್ರವಲ್ಲ, ಹತ್ತಿದ ಏಣಿಯನ್ನು ಒದೆಯುವ ಅಹಂಕಾರ. ಸ್ಥಳೀಯರಿಗೆ ಉದ್ಯೋಗ ನೀಡುತ್ತೇವೆ ಎಂದು ಲಿಖಿತ ಒಪ್ಪಂದ ಮಾಡಿಕೊಂಡ ಉದ್ಯಮಿಗಳೂ ಕೂಡ ಅದನ್ನು ಪಾಲಿಸಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕದಲ್ಲಿ ಹೊರರಾಜ್ಯದ ವಲಸೆ ಪ್ರಮಾಣ ಮಿತಿಮೀರಿ ಹೋಗಿರುವ ಈ ಸಂದರ್ಭದಲ್ಲಿ ಹೊಸ ಉದ್ಯಮಗಳಲ್ಲೂ ಹೊರರಾಜ್ಯದವರನ್ನೇ ತುಂಬಿದರೆ ಕರ್ನಾಟಕದ ಚಹರೆಯೇ ಬದಲಾಗುವ ಅಪಾಯವಿದೆ. ಈ ಹಿನ್ನೆಲೆಯಲ್ಲಿ ಹೊಸ ಉದ್ಯಮಿಗಳ ಜೊತೆಯಲ್ಲಿ ಬರುವ ಹೊಸ ವಲಸಿಗರ ಸಮಸ್ಯೆಯನ್ನು ನಾವು ಎದುರಿಸಬೇಕಾಗುತ್ತದೆ.

ಉದ್ಯಮಗಳು ಬರಲಿ, ಅದಕ್ಕೆ ನಮ್ಮ ಆಕ್ಷೇಪಣೆಯಿಲ್ಲ. ಆದರೆ ಕರ್ನಾಟಕದ ಸುಂದರ ಪರಿಸರದಲ್ಲಿ, ಎಲ್ಲ ಸವಲತ್ತುಗಳನ್ನು ಪಡೆದು ಉದ್ಯಮ ಕಟ್ಟುವವರು ಕನ್ನಡಿಗರಿಗೇ ಉದ್ಯೋಗ ನೀಡಬೇಕೆಂಬ ಸಾಮಾಜಿಕ ಜವಾಬ್ದಾರಿ ಹೊಂದಿರಬೇಕು. ಈ ಜವಾಬ್ದಾರಿಯನ್ನು ಕಾನೂನುಬದ್ಧವಾಗಿ ಸರ್ಕಾರ ಜಾರಿಗೆ ತರಬೇಕು. ಕರ್ನಾಟಕದ ಅಭಿವೃದ್ಧಿ ಎಂದರೆ ಕನ್ನಡಿಗರ ಅಭಿವೃದ್ಧಿ ಎಂಬುದನ್ನು ಯಾರೂ ಮರೆಯಬಾರದು.

ಕನ್ನಡ, ಕರ್ನಾಟಕ, ಕನ್ನಡಿಗರ ಕುರಿತಾಗಿ ಅಪಾರ ಕಾಳಜಿ ಹೊಂದಿರುವ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ಈ ಸೂಕ್ಷ್ಮಗಳನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂಬುದು ನನ್ನ ನಂಬಿಕೆ. ಕನ್ನಡಿಗರ ಪಾಲಿಗೆ ‘ಇನ್ವೆಸ್ಟ್ ಕರ್ನಾಟಕ’ ಭಾಗ್ಯದ ಬಾಗಿಲು ತೆರೆಯಬೇಕೇ ಹೊರತು ಕನ್ನಡಿಗರನ್ನು ಕರ್ನಾಟಕದಲ್ಲಿ ಅತಂತ್ರರನ್ನಾಗಿ ಮಾಡಬಾರದು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...