ಖರ್ಗೆ ಕುಟುಂಬಕ್ಕೆ ಕೊಲ್ಲುವ ಬೆದರಿಕೆ ತಾಲಿಬಾನ್ ಮನಃಸ್ಥಿತಿಯಲ್ಲವೇ: ದಿನೇಶ್ ಗುಂಡೂರಾವ್ ಪ್ರಶ್ನೆ

Date:

ಪ್ರಿಯಾಂಕ್‌ ಖರ್ಗೆ ಹಾಗೂ ಅವರ ಕುಟುಂಬದವರನ್ನು ಕೊಲ್ಲುವ ಬೆದರಿಕೆ ಹಾಕುತ್ತಿರುವ ಅಂಧಭಕ್ತರ ಮನಸ್ಥಿತಿ ತಾಲಿಬಾನ್ ಮನಃಸ್ಥಿತಿಯಲ್ಲವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಶಾಲಾ ಕಾಲೇಜು ಹಾಗೂ ಸಾರ್ವಜನಿಕ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗೆ ಅವಕಾಶ ಕೊಡಬಾರದು ಎಂಬ ನನ್ನ ಸಹದ್ಯೋಗಿ ಮಿತ್ರ ಪ್ರಿಯಾಂಕ್‌ ಖರ್ಗೆ ಪತ್ರಕ್ಕೆ ಅಂಧ ಭಕ್ತರು ಜೀವ ಬೆದರಿಕೆ ಒಡ್ಡಿದ್ದಾರೆ. ಪ್ರಿಯಾಂಕ್ ಖರ್ಗೆ ಹಾಗೂ ಅವರ ಕುಟುಂಬದವರನ್ನು ಕೊಲ್ಲುವುದಾಗಿ ಹೇಳಿದ್ದಾರೆ. ಖರ್ಗೆ ಹಾಗೂ ಅವರ ಕುಟುಂಬದವರನ್ನು ಕೊಲ್ಲುವ ಬೆದರಿಕೆ ಹಾಕುತ್ತಿರುವ ಅಂಧಭಕ್ತರ ಮನಸ್ಥಿತಿ ಯಾವುದು.? ಅದು ತಾಲಿಬಾನ್ ಮನಃಸ್ಥಿತಿಯಲ್ಲವೆ? ಎಂದು ಸಚಿವರು ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ತಂಡ ಸಿದ್ದ; ಶುಭಮನ್ ಗಿಲ್‌ಗೆ ನಾಯಕತ್ವ – ತಂಡಕ್ಕೆ ಮರಳಿದ ಕೊಹ್ಲಿ, ರೋಹಿತ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ಎಸ್‌ಎಸ್‌ ಒಂದು ಜೀವ ಮುಖಿ ಸಂಘಟನೆಯಾಗಿದ್ದರೆ ಯಾಕೆ ಆ ಸಂಘಟನೆಯ ಕಾರ್ಯಕರ್ತರು ಕೇವಲ ಜೀವ ತೆಗೆಯುವ ಮಾತಾಡುತ್ತಾರೆ? ಪಾನ್ಸೋರೆ, ಗೌರಿ ಲಂಕೇಶ್, ಕಲಬುರಗಿಯವರ ಹತ್ಯೆಯಲ್ಲಿ ಯಾಕೆ ನೇರವಾಗಿ ಭಾಗಿಯಾಗುತ್ತಾರೆ? ಗಾಂಧಿ ಕೊಂದ ಗೂಡ್ಸೆಯನ್ನು ಯಾಕೆ ಆರಾಧಿಸುತ್ತಾರೆ..? ಎಂದು ದಿನೇಶ್ ಗುಂಡೂರಾವ್‌ ಆಕ್ರೋಶ ವ್ಯಕ್ತಪಡಿಸಿದರು.

ಆರ್‌ಎಸ್‌ಎಸ್‌ನವರು ಗಾಂಧಿ ಕೊಂದ ಗೂಡ್ಸೆಯ ಪರ ನಿಂತಿದ್ದಾರೆ. ಹಾಗಂದ ಮಾತ್ರಕ್ಕೆ ಗಾಂಧಿ ತತ್ವಕ್ಕೆ ಸಾವು ಬಂದಿಲ್ಲ. ‌ಅದೇ ರೀತಿ ಗೌರಿ ಲಂಕೇಶ್, ಕಲಬುರಗಿ, ಪಾನ್ಸೋರೆ ಹತ್ಯೆಯಾದರು. ಆದರೆ ಅವರು ಪ್ರತಿಪಾದಿಸಿದ ತತ್ವ ಸಿದ್ದಾಂತಕ್ಕೆ ಸಾವು ಬಂದಿಲ್ಲ. ಸೈದಾಂತಿಕವಾಗಿ ಗಟ್ಟಿಯಿದ್ದಾಗ ಯಾವ ಗೊಡ್ಡು ಬೆದರಿಕೆಗಳು ಅಡ್ಡಿಯಾಗುವುದಿಲ್ಲ. ತಾವು ಪ್ರಿಯಾಂಕ್‌ ಖರ್ಗೆ ಪರವಾಗಿ ನಿಲ್ಲುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...