ಅಮೂಲ್ಯ ವೃಕ್ಷಗಳ ಸಂರಕ್ಷಣೆಗೆ ಕ್ರಮ: ಜಿಯೋ ಟ್ಯಾಗ್‌ಗೆ ಸೂಚನೆ ನೀಡಿದ ಸಚಿವ ಈಶ್ವರ ಖಂಡ್ರೆ

Date:

ಮರಗಳ ಅಕ್ರಮ ಕಡಿತಲೆ ತಡೆಯಲು ಮತ್ತು ಅಮೂಲ್ಯ ವೃಕ್ಷ ಸಂಪತ್ತು ಉಳಿವಿಗಾಗಿ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿರುವ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಬೀಟೆ, ಶ್ರೀಗಂಧ, ತೇಗದ ಮರಗಳ ಜಿಯೋ ಟ್ಯಾಗ್ ಮಾಡಲು ಸೂಚನೆ ನೀಡಿದ್ದಾರೆ.

ಕಾಡನಂಚಿನಲ್ಲಿರುವ ಎಲ್ಲ ಜಮೀನಿನಲ್ಲಿ ಅಂದರೆ ಗ್ರಾಮಗಳಿಗೆ ಹೊಂದಿಕೊಂಡ ವನಪ್ರದೇಶ, ಪಟ್ಟಾಭೂಮಿ ಮತ್ತು ಸರ್ಕಾರಿ ಜಮೀನಿನಲ್ಲಿರುವ ಬೀಟೆ (ರೋಸ್ ವುಡ್), ತೇಗ (ಟೀಕ್) ಮತ್ತು ಶ್ರೀಗಂಧ (ರಕ್ತ ಚಂದನ) ಮರಗಳಿಗೆ 3 ತಿಂಗಳ ಅವಧಿಯೊಳಗೆ ಜಿಯೋ ಟ್ಯಾಗ್ ಮಾಡಿ ಇಲಾಖೆಗೆ ವಲಯವಾರು ಪಟ್ಟಿ ಸಲ್ಲಿಸುವಂತೆ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ಇತ್ತೀಚೆಗೆ ಹಾಸನ ಜಿಲ್ಲೆ ಬೇಲೂರು ತಾಲೂಕು, ನಂದಗೋಡನಹಳ್ಳಿ, ಸಕಲೇಶಪುರದ ಕೌಡಳ್ಳಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಇಡಗುಂದಿ ಸೇರಿದಂತೆ ಕೆಲವು ಕಡೆಗಳಲ್ಲಿ ಅಕ್ರಮವಾಗಿ ನೂರಾರು ಅಮೂಲ್ಯ ಮನ್ನಾ ಜಾತಿಯ ವೃಕ್ಷಗಳನ್ನು ಕಡಿದ ಪ್ರಕರಣಗಳು ಬೆಳಕಿಗೆ ಬಂದಿದ್ದು, ಶುಂಠಿ ಬೆಳೆಯ ಹೆಸರಲ್ಲಿ ಮರಗಳ ಹನನ ಆಗುತ್ತಿರುವುದನ್ನು ತಪ್ಪಿಸಲು ಶ್ರೀಗಂಧ, ತೇಗ ಮತ್ತು ಬೀಟೆ ಮರಗಳ ಜಿಯೋ ಟ್ಯಾಗ್ ಮಾಡಿಸುವಂತೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಟಿಪ್ಪಣಿಯಲ್ಲಿ ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಸ್ಪೃಶ್ಯತೆ, ಮೌಢ್ಯ, ಜಾತೀಯತೆ ತೊಲಗಿಸಿ ಬಸವಣ್ಣನಿಗೆ ನಿಜ ಗೌರವ ಸಲ್ಲಿಸೋಣ

“ಅರಣ್ಯದೊಳಗೆ ಬೆಲೆ ಬಾಳುವ ಮರ ಕಡಿದು ಸಾಗಾಟ ಮಾಡಲು ಸಾಧ್ಯವಾಗದಂತೆ ಕಳ್ಳಬೇಟೆ ನಿಗ್ರಹ ತಂಡಗಳನ್ನು ನಿಯೋಜಿಸಲಾಗಿದೆ. ಆದರೆ ಕಾಡಿನಂಚಿನಲ್ಲಿ ಮತ್ತು ಸರ್ಕಾರಿ ಭೂಮಿಯಲ್ಲಿ, ಅರಣ್ಯ ಇಲಾಖೆ ಗುತ್ತಿಗೆ ನೀಡಿರುವ ಎಸ್ಟೇಟ್ ಹಾಗೂ ಪಟ್ಟಾ ಜಮೀನಿನಲ್ಲಿರುವ ಬೆಲೆಬಾಳುವ ವೃಕ್ಷಗಳ ಸಂರಕ್ಷಣೆ ಇಲಾಖೆಗೆ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಜಿಯೋ ಟ್ಯಾಗ್ ಮಾಡಿದರೆ ವೃಕ್ಷ ಸಂರಕ್ಷಣಾ ಕಾಯಿದೆ ಅಡಿ ಪೂರ್ವಾನುಮತಿ ಪಡೆಯದೆ ಮರ ಕಡಿಯಲು ಸಾಧ್ಯವಾಗುವುದಿಲ್ಲ” ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...