ಅಕ್ರಮ ವನ್ಯಜೀವಿ ಉತ್ಪನ್ನ ಮರಳಿಸಲು ಕೊನೆ ಅವಕಾಶ ನೀಡಲು ಚಿಂತನೆ: ಅರಣ್ಯ ಸಚಿವ ಈಶ್ವರ ಖಂಡ್ರೆ

Date:

  • ‘ಈ ಕುರಿತು ತಜ್ಞರ ಜೊತೆ ಚರ್ಚಿಸಿ ವರದಿ ಸಲ್ಲಿಸಲು ತಂಡ ರಚಿಸಲಾಗಿದೆ’
  • ‘ಮುಂದಿನ ದಿನಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಲಿದೆ’

ಅಕ್ರಮ ವನ್ಯಜೀವಿ ಉತ್ಪನ್ನಗಳನ್ನು ಮರಳಿಸಲು ಕೊನೆಯ ಒಂದು ಅವಕಾಶ ನೀಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ. ಈ ಕುರಿತು ತಜ್ಞರ ಜೊತೆ ಚರ್ಚಿಸಿ ವರದಿ ಸಲ್ಲಿಸಲು ಈಗಾಗಲೇ ತಂಡ ರಚಿಸಲಾಗಿದೆ. ವರದಿ ಬಂದ ಬಳಿಕ ಸಾರ್ವಜನಿಕರಿಗೆ ಮಾಹಿತಿ ಕೊಟ್ಟು ಶಾಶ್ವತ ಪರಿಹಾರ ಕಂಡುಕೊಳ್ಳಲು ಅರಣ್ಯ ಇಲಾಖೆ ಬದ್ಧವಾಗಿ ಇದೆ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಬೆಂಗಳೂರಿನಲ್ಲಿ ವಿಕಾಸಸೌಧದ ನಾಲ್ಕನೇ ಮಹಡಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ವನ್ಯಜೀವಿಗಳ ಚರ್ಮ, ಉಗುರು ಧರಿಸುವುದು ವನ್ಯಜೀವಿಗಳ ಸಂರಕ್ಷಣಾ ಕಾಯ್ದೆಯಡಿ ಕಾನೂನು ಉಲ್ಲಂಘನೆ ಆಗುತ್ತದೆ” ಎಂದು ಹೇಳಿದರು.

“ರಿಯಾಲಿಟಿ ಶೋದಲ್ಲಿ ಹುಲಿ ಉಗುರು ಧರಿಸಿದ್ದ ವಿಚಾರದಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ. ಸಂತೋಷ ಅವರ ಹುಲಿ ಉಗುರು ಧಾರಣೆಯ ಪ್ರಕರಣದ ನಂತರ ಇಲ್ಲಿಯವರೆಗೆ 8 ದೂರುಗಳು ಸಾರ್ವಜನಿಕರ ಕಡೆಯಿಂದ ಬಂದಿದೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನಾ ಕಾರ್ಯ ನಡೆಯುತ್ತಿದ್ದು, ಕಾನೂನಿನ ಪ್ರಕಾರ ಕ್ರಮವಹಿಸಲಾಗುವುದು. ದೂರು ಬಂದ ಬೇರೆ ಕಡೆ ಕೂಡ ನಮ್ಮ ಅಧಿಕಾರಿಗಳು ಹೋಗಿ ಪರಿಶೀಲನೆ ನಡೆಸಿದ್ದಾರೆ. ಕಾಯ್ದೆ ಬಗ್ಗೆ ಸಾರ್ವಜನಿಕರಿಗೆ ಪೂರ್ತಿ ಅರಿವು ಇಲ್ಲ ಎಂದು ನನಗೆ ಅನ್ನಿಸುತ್ತಿದೆ. ಹೀಗಾಗಿ ಇಂತಹ ಘಟನೆಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹುಲಿ ಉಗುರು ಧರಿಸಿದ ಹಲವರ ವಿರುದ್ಧ ದೂರುಗಳು ಬಂದಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲಿಸಿ ಕ್ರಮಕೈಗೊಳ್ಳುತ್ತಾರೆ. ಯಾರು ಬಳಿ ವ್ಯನ್ಯಜೀವಿಗಳ ಚರ್ಮ, ಉಗುರು, ಇತರೆ ವಸ್ತು ಇದೆಯೋ, ಪ್ರಾಣಿಗಳಿಗೆ ಸಂಬಂಧಿಸಿದ ವಸ್ತುಗಳು ಇದೆಯೋ ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳುತ್ತೇವೆ. ಪ್ರಾಣಿಗಳ ವಸ್ತುಗಳು ಇದ್ದರೆ ಸ್ವಯಂಪ್ರೇರಿತವಾಗಿ ಹಿಂದಿರುಗಿಸಬಹುದು. ಅರಣ್ಯ ಇಲಾಖೆ ಸುಪರ್ದಿಗೆ ಒಪ್ಪಿಸಲು ಅವಕಾಶ ನೀಡಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭೀಕರ ಬರದ ನಡುವೆ ಅನಗತ್ಯ ವಿವಾದಗಳಲ್ಲಿ ಕಾಲಹರಣ ಮಾಡುತ್ತಿರುವ ಸರ್ಕಾರ

800 ಹುದ್ದೆ ಭರ್ತಿಗೆ ಅನುಮೋದನೆ

ಅರಣ್ಯ ಇಲಾಖೆಯಲ್ಲಿ 4 ಸಾವಿರ ಹುದ್ದೆಗಳು ಖಾಲಿಯಿವೆ. 4 ಸಾವಿರ ಹುದ್ದೆಗಳ ಪೈಕಿ 800 ಹುದ್ದೆ ಭರ್ತಿಗೆ ಅನುಮೋದನೆ ನೀಡಲಾಗಿದೆ. 800 ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಬಾಕಿಯಿರುವ ಖಾಲಿ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಗೆ ಮನವಿ ಮಾಡಲಾಗಿದೆ. ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಕೆ ಮಾಡಲಾಗಿದೆ ಎಂದು ಇದೇ ವೇಳೆ ಖಂಡ್ರೆ ಮಾಹಿತಿ ಹಂಚಿಕೊಂಡರು.

“ಅರಣ್ಯ ಇಲಾಖೆಗೆ ಸಂಬಂಧಿಸಿದ ದೂರುಗಳಿದ್ದರೆ ಸಹಾಯವಾಣಿ ಸಂಖ್ಯೆ 1926ಗೆ ಕರೆ ಮಾಡಿ ಮಾಹಿತಿ ನೀಡಬಹುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...