ಪ್ರತಿ ಟನ್‌ ಕಬ್ಬಿಗೆ ₹3,500 ದರ ನೀಡುವುದು ಅಸಾಧ್ಯ: ಸಿಎಂಗೆ ಸಕ್ಕರೆ ಕಾರ್ಖಾನೆ ಮಾಲೀಕರ ಸ್ಪಷ್ಟನೆ

Date:

ಸಕ್ಕರೆ ಉತ್ಪಾದನೆ ಮತ್ತು ಮಾರಾಟ, ಎಥೆನಾಲ್ ಉತ್ಪಾದನೆ ಮತ್ತು ಬೆಲೆ ನಿಗಧಿ, ಸಕ್ಕರೆ ರಫ್ತು ಮತ್ತು ಬೆಲೆ ನಿಗಧಿ ಎಲ್ಲವೂ ಕೇಂದ್ರ ಸರ್ಕಾರದ ಕೈಯಲ್ಲಿದೆ. ರೈತರು ಕೇಳುತ್ತಿರುವ ಪ್ರತಿ ಟನ್‌ ಕಬ್ಬಿಗೆ ₹3,500 ದರ ನೀಡುವುದು ನಮ್ಮಿಂದ ಅಸಾಧ್ಯ ಎನ್ನುವುದನ್ನು ಸಕ್ಕರೆ ಕಾರ್ಖಾನೆ ಮಾಲೀಕರು ಸಿಎಂ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆ.

ಪ್ರತಿ ಟನ್‌ ಕಬ್ಬಿಗೆ ₹3,500 ದರ ನೀಡಬೇಕು ಎಂದು ಆಗ್ರಹಿಸಿ ರೈತರು ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಗುರ್ಲಾಪುರದಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಕಾವು ಪಕ್ಕದ ಜಿಲ್ಲೆಗಳಿಗೂ ವಿಸ್ತರಿಸಿದೆ. ಈ ಹಿನ್ನೆಲೆಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚಿಸಲು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆದಿದ್ದರು.

ಕೇಂದ್ರದ ನೀತಿಯಿಂದ ದಕ್ಷಿಣ ಭಾರತದ ಕಾರ್ಖಾನೆಗಳು ಸಮಸ್ಯೆಯಲ್ಲಿವೆ, ಉತ್ತರ ಭಾರತದ ಕಾರ್ಖಾನೆಗಳು ಅನುಕೂಲಕರವಾಗಿವೆ ಎಂದು ಕಾರ್ಖಾನೆ ಮಾಲೀಕರು ಒಗ್ಗಟ್ಟಿನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಕ್ಕರೆ ಕಾರ್ಖಾನೆ ಮಾಲೀಕರ ಪರವಾಗಿ ಮುರುಗೇಶ್ ನಿರಾಣಿ ಮಾತನಾಡಿ, “ಎಲ್ಲ ಸರ್ಕಾರಗಳಲ್ಲೂ ಕಬ್ಬು ಬೆಳೆಗಾರರ ಸಮಸ್ಯೆ ಮುಂದುವರೆಯುತ್ತಾ ಬಂದಿದೆ. ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದವನ್ನು ರಾಜ್ಯ ಸರ್ಕಾರ ನವೀಕರಣ ಮಾಡಿರುವುದಿಲ್ಲ. ಮಹಾರಾಷ್ಟ್ರದಲ್ಲಿ ಸಕ್ಕರೆ ಕಾರ್ಖಾನೆಯವರಿಂದ ಖರೀದಿಸುವ ವಿದ್ಯುತ್ ಪ್ರತಿ ಯುನಿಟ್‌ಗೆ ರೂ. 6 ಪಾವತಿಸಲಾಗುತ್ತಿದೆ. ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರ ಒಪ್ಪಂದ ಮಾಡಬೇಕಿದೆ. ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್‌ಗೆ 60 ಪೈಸೆ ತೆರಿಗೆ ನಿಗದಿಪಡಿಸಿರುವುದನ್ನು ಕೈಬಿಡಬೇಕು. ಸಕ್ಕರೆ ಕಾರ್ಖಾನೆಗಳ ನಡುವಿನ ಅಂತರ ಕನಿಷ್ಠ 25 ಕಿಮೀ ನಿಗದಿಪಡಿಸಬೇಕು. ಏವಿಯೇಷನ್ ಇಂಧನಕ್ಕೆ ಎಥೆನಾಲ್ ಮಿಶ್ರಣ ಅನುಮತಿಯನ್ನು ಆದಷ್ಟು ಬೇಗನೆ ನೀಡುವಂತೆ ಪ್ರಧಾನಿ ಅವರಿಗೆ ಮನವಿ ಮಾಡಬೇಕು. ಪ್ರಸ್ತುತ ರೈತರಿಗೆ ಎಫ್ಆರ್‌ಪಿ ಪ್ರಕಾರ ದರ ನೀಡಲಾಗುವುದು. ಹೆಚ್ವುವರಿ ಆದಾಯ ಸಾಧ್ಯವಾದರೆ ಸೀಸನ್ ಮುಗಿದ ಬಳಿಕ ಅದನ್ನು ರೈತರಿಗೆ ಹಂಚಿಕೆ ಮಾಡಲು ಸಿದ್ಧರಿದ್ದೇವೆ” ಎಂದು ಹೇಳಿದರು.

“ಎಥೆನಾಲ್ ಎಂಎಸ್ಪಿ ಹೆಚ್ಚಳ ಕುರಿತು ಕೇಂದ್ರಕ್ಕೆ ಮನವಿ ಮಾಡಿದರೂ ಇದುವರೆಗೆ ಹೆಚ್ಚಳ ಮಾಡಿಲ್ಲ. ಇದರಿಂದ ಕರ್ನಾಟಕ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗಿದೆ. ಇದೇ ರೀತಿ ಸಕ್ಕರೆ ರಫ್ತಿನ ಮೇಲೆ ನಿರ್ಬಂಧ ಹೇರಿರುವುದರಿಂದ ಸಕ್ಕರೆ ಕಾರ್ಖಾನೆಗಳಿಗೆ ಆರ್ಥಿಕವಾಗಿ ನಷ್ಟ ಉಂಟಾಗಿದೆ. ಇಡೀ ದೇಶಕ್ಕೆ ಕೇವಲ 10ಲಕ್ಷ ಮೆ. ಟನ್ ಮಾತ್ರ ರಫ್ತಿಗೆ ಅನುಮತಿ ನೀಡಲಾಗಿದೆ. ಕಳೆದ ಆರು ವರ್ಷಗಳಿಂದ ಸಕ್ಕರೆ ದರವನ್ನು ಸಹ ಪರಿಷ್ಕರಿಸಿಲ್ಲ. ಆದರೆ ಕಬ್ಬಿನ ದರ ಪ್ರತಿ ವರ್ಷ ಹೆಚ್ಚುತ್ತಾ ಹೋಗುತ್ತಿದೆ. ಈ ಎಲ್ಲಾ ಕಾರಣಗಳಿಂದ ಸಕ್ಕರೆ ಕಾರ್ಖಾನೆಗಳಿಗೆ ಈಗ ಎಫ್ಆರ್‌ಪಿ ಪ್ರಕಾರ ರೈತರಿಗೆ ಪಾವತಿ ಮಾಡಲು ಕಷ್ಟ ಪಡಬೇಕಾದ ಪರಿಸ್ಥಿತಿಯಿದೆ. ಆದರೆ ಈ ದರ ಕಾನೂನಾತ್ಮಕವಾಗಿ ನೀಡಬೇಕಾಗಿರುವ ಹಿನ್ನೆಲೆಯಲ್ಲಿ ಕಾರ್ಖಾನೆಗಳು ಪಾವತಿಸುತ್ತಿವೆ” ಎಂದು ಸಕ್ಕರೆ ಕಾರ್ಖಾನೆ ಮಾಲೀಕರ ಸಂಘದ ಅಧ್ಯಕ್ಷರು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, “ರೈತರ ಬೇಡಿಕೆ ಈಡೇರಿಸುವುದರಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಪ್ರಮುಖವಾಗಿವೆ. ಮತ್ತು ಕಾರ್ಖಾನೆಗಳ ಜವಾಬ್ದಾರಿಯೂ ಇವೆ. ನಾವು ರೈತರ ಪರವಾಗಿ ನಿಲ್ಲುತ್ತೇವೆ. ರೈತರ ಸಮಸ್ಯೆ ಬಗೆಹರಿಸಲು ನೀವೂ ಸಿದ್ದರಿರಬೇಕು. ಕಾರ್ಖಾನೆ ಮಾಲೀಕರ ಸಮಸ್ಯೆಗಳಲ್ಲಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆಯೂ ಪರಿಶೀಲಿಸೋಣ” ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

“ಕಬ್ಬು ಬೆಳೆಗಾರರಿಗೆ ನೆರವಾಗುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜವಾಬ್ದಾರಿಯಾಗಿದೆ. ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಫ್ಆರ್‌ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕಾರ್ಯ. ಕೇಂದ್ರ ಸರ್ಕಾರ ದಿನಾಂಕ 6-05-2025ರಲ್ಲಿ ಎಫ್ಆರ್‌ಪಿ ನಿಗದಿಪಡಿಸಿದೆ. ಈ ಎಫ್ಆರ್‌ಪಿಯಲ್ಲಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂಎಸ್‌ಪಿ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ನಾವು ಮನವಿ ಸಲ್ಲಿಸಿದ್ದೇವೆ. ಇದೀಗ ಕೇಂದ್ರ ಸರ್ಕಾರ ಸಮಸ್ಯೆ ಹುಟ್ಟು ಹಾಕಿದೆ” ಎಂದು ಮುಖ್ಯಮಂತ್ರಿ ಅವರು ಹೇಳಿದರು.

“ಸಕ್ಕರೆ ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್ಗೆ 60 ಪೈಸೆ ತೆರಿಗೆ ನಿಗದಿಪಡಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಲಾಗುವುದು” ಎಂದು ಮುಖ್ಯಮಂತ್ರಿ ಅವರು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...