ಜನರ ಆಶೀರ್ವಾದದಿಂದ ಎಂಟು ಬಾರಿ ದಸರಾದಲ್ಲಿ ಪಾಲ್ಗೊಂಡಿರುವುದು ನನ್ನ ಸೌಭಾಗ್ಯ: ಸಿದ್ದರಾಮಯ್ಯ

Date:

ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ, ಎಲ್ಲ ದಸರಾ ಉತ್ಸವಗಳಲ್ಲಿ ಭಾಗಿಯಾಗಿದ್ದೇನೆ. ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ ಎಂಟು ಬಾರಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತಿದ್ದು, ಅತ್ಯಂತ ಸಂತೋಷವನ್ನು ತಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಶ್ವ ಪ್ರಸಿದ್ಧ ಮೈಸೂರು ದಸರಾದ ಜಂಬೂಸವಾರಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, “ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ಮೈಸೂರು ದಸರಾಕ್ಕೆ ಪ್ರವಾಸಿಗರನ್ನು ಸ್ವಾಗತಿಸುತ್ತೇನೆ. ಈ ಬಾರಿ ದಸರಾ ಹಬ್ಬವು ಹನ್ನೊಂದು ದಿನಗಳ ಕಾಲ ನಡೆದಿದ್ದು, ನಾಡಿನ ಜನತೆಗೆ ದಸರಾ ಮಹೋತ್ಸವದ ಶುಭಾಶಯಗಳನ್ನು ಕೋರುತ್ತೇನೆ” ಎಂದರು.

ದಸರಾ ಉತ್ಸವವನ್ನು ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಭಿನಂದಿಸಿದ ಮುಖ್ಯಮಂತ್ರಿಗಳು, ದಸರಾ ಉತ್ಸವ ಯಾವುದೇ ಅಡಚಣೆಗಳಿಲ್ಲದೇ ಯಶಸ್ವಿಯಾಗಿ ನಡೆದಿರುವುದು ಸಂತಸ ತಂದಿದೆ. ಇದಕ್ಕಾಗಿ ಶ್ರಮಿಸಿದ ಸಚಿವರು, ಶಾಸಕರು ಹಾಗೂ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
dasara 2

ಜಂಟಿ ಸಮೀಕ್ಷೆ ನಂತರ ಬೆಳೆಪರಿಹಾರ

“ಈ ವರ್ಷ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗಿದ್ದು, ಎಲ್ಲ ಜಲಾಶಯಗಳು ತುಂಬಿ, ಉತ್ತಮ ಬೆಳೆಯೂ ಆಗುತ್ತಿದೆ. ಆದರೆ ಉತ್ತರಕರ್ನಾಟಕದ ಕೆಲವು ಜಿ್ಲ್ಲೆಗಳಲ್ಲಿ ಅತಿವೃಷ್ಠಿಯಿಂದ ರಾಜ್ಯದಲ್ಲಿ ಸುಮಾರು 10ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ ಸಂಭವಿಸಿದೆ. ರೈತರಿಗೆ ಸಮೀಕ್ಷೆ ನಡೆಸಿ ಬೆಳೆಪರಿಹಾರ ನೀಡುವುದಾಗಿ ಕಲ್ಬುರ್ಗಿಯ ಭೇಟಿ ಸಂದರ್ಭದಲ್ಲಿ ತಿಳಿಸಲಾಗಿದ್ದು, ಸರ್ಕಾರ ಮತ್ತು ಎನ್ ಡಿಆರ್ ಎಫ್ ಸೇರಿದಂತೆ ಖುಷ್ಕಿ ಜಮೀನಿನ ತಲಾ ಹೆಕ್ಟೇರ್ ಗೆ 17000 ರೂ ನೀರಾವರಿ ಜಮೀನಿಗೆ 17,500 ರೂ. ಮತ್ತು ಬಹುಬೆಳೆ ಬೆಳೆಯುವ ಜಮೀನಿಗೆ 31ಸಾವಿರ ರೂ.ಗಳ ಪರಿಹಾರ ನೀಡುವುದಾಗಿ ತಿಳಿಸಲಾಗಿದೆ. ಆದರೆ ಹೆಚ್ಚಿನಮಳೆಯಿರುವುದರಿಂದ ಬೆಳೆಹಾನಿಯ ಜಂಟಿಸಮೀಕ್ಷೆ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಸಮೀಕ್ಷೆಯ ನಂತರ ಬೆಳೆಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಪರಿಹಾರ ನೀಡಲಾಗುವುದು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...