ಶೂ ವಿವಾದ | ವೈಯಕ್ತಿಕ ಸಹಾಯಕ್ಕೆ ಬಣ್ಣ ಕಟ್ಟುವುದು ಸರಿಯಲ್ಲ: ಎಚ್‌ ಸಿ ಮಹದೇವಪ್ಪ

Date:

  • ಅಂಗರಕ್ಷಕರು ಮಂತ್ರಿಗೆ ಶೂ ಹಾಕಿದ್ದಾರೆಂಬ ವಿವಾದ
  • ‘ಆತ್ಮೀಯ ವಲಯದಿಂದ ಸಹಾಯ ಪಡೆದಿದ್ದೇನೆ’

ಧಾರವಾಡಕ್ಕೆ ಭೇಟಿ ನೀಡಿದ ವೇಳೆ ಅಂಗರಕ್ಷಕರು ಶೂ ಹಾಕಿದ್ದಾರೆಂಬ ಸಂಗತಿಯು ವಿವಾದದ ಸ್ವರೂಪ ಪಡೆದಿರುವುದು ದುರದೃಷ್ಟಕರ ಬೆಳವಣಿಗೆ. ವೈಯಕ್ತಿಕವಾಗಿ ವ್ಯಕ್ತಿ ಗೌರವ ಮತ್ತು ಘನತೆಯಲ್ಲಿ ನಂಬಿಕೆ ಇಟ್ಟಿರುವ ನನಗೆ ಒಬ್ಬರಿಂದ ಶೂ ಹಾಕಿಸಿಕೊಳ್ಳಬೇಕೆಂಬ ದರ್ಪ, ಇರಾದೆ ಇರಲಿಲ್ಲ ಎಂದು ಸಮಾಜ ಕಲ್ಯಾಣ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌ ಸಿ ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “Hip joint knee ತೊಂದರೆಗೆ ಸಿಲುಕಿ ಶಸ್ತ್ರಚಿಕಿತ್ಸೆಗೆ ಒಳಗಾದ ಸಂದರ್ಭದಿಂದ ಬಾಗುವುದು ಕಷ್ಟವಾಗಿದ್ದ ಕಾರಣ ನಮ್ಮ ಆತ್ಮೀಯ ವಲಯದಿಂದ ಸಹಾಯ ಪಡೆದಿದ್ದೇನೆ” ಎಂದು ಹೇಳಿದ್ದಾರೆ.

“ಬಹು ವರ್ಷಗಳ ಕಾಲ ನನ್ನೊಡನೆಯೇ ಒಂದು ಕುಟುಂಬದಂತೆ ಇರುವ ನಮ್ಮ ಕೆಲ ಸಿಬ್ಬಂದಿ ಬಳಿ ಕಾಲಿನ ಸಮಸ್ಯೆಯ ಹಿನ್ನೆಲೆಯಲ್ಲಿ ಪಡೆದುಕೊಂಡಿರುವ ಈ ಸಹಾಯಕ್ಕೆ ಮಾನವೀಯ ನೆಲೆ ಇದ್ದು ಅನಗತ್ಯವಾಗಿ ಇದಕ್ಕೆ ಅಂಹಕಾರ, ಅಧಿಕಾರದ ಅಮಲು ಎಂಬ ಶಬ್ದಗಳನ್ನು ಬಳಸುವುದು ಸರಿಯಾದ ಕ್ರಮವಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ

“ನನ್ನನ್ನು ಬಲ್ಲ ಎಲ್ಲರಿಗೂ ವ್ಯಕ್ತಿ ಗೌರವಕ್ಕೆ ಸಂಬಂಧಿಸಿದ ನನ್ನ ನಿಲುವುಗಳ ಬಗ್ಗೆ ಚೆನ್ನಾಗಿಯೇ ತಿಳಿದಿರುವ ಕಾರಣ ಈ ಬಗ್ಗೆ ಸ್ವಯಂ ವಿವರಣೆ ಕೊಡುವುದಾಗಲೀ ಇಲ್ಲವೇ ಸ್ವಮರುಕ ಪಡುವುದಾಗಲೀ ನಾನು ಮಾಡುವುದಿಲ್ಲ. ಮೂಲತಃ ಸಂವಿಧಾನದ ಆಶಯಗಳ ಪ್ರಕಾರವೇ ಬದುಕುವ ನನಗೆ ಸಮಾನತೆ, ವ್ಯಕ್ತಿ ಗೌರವ, ಪ್ರೀತಿ ವಿಶ್ವಾಸ ಹೊರತು ಪಡಿಸಿ ಇತರೆ ಸಂಗತಿಗಳಲ್ಲಿ ಆಸಕ್ತಿ ಇಲ್ಲ” ಎಂದು ಹೇಳಿದ್ದಾರೆ.

“ದೈಹಿಕ ತೊಂದರೆಗಾಗಿ ಪಡೆದ ಸಹಾಯವನ್ನು ಸಂಕುಚಿತ ಮನಸ್ಸಿನಿಂದ ನೋಡಬಾರದೆಂದು ನಮ್ಮ ಮಾಧ್ಯಮ ಮಿತ್ರರಲ್ಲಿ ನಾನು ಮನವಿ ಮಾಡುತ್ತೇನೆ. ಇನ್ನು ಅಗತ್ಯ ಸಹಾಯಕ್ಕಾಗಿ ನನ್ನ ಅಂಗರಕ್ಷಕನಿಗೆ ನನ್ನ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...