ಅಲೆಮಾರಿಗಳನ್ನು ತಾಯ್ತನದಿಂದ ಪೊರೆದವರು ಮಾದಿಗರು: ಗೋಸಂಗಿ ಲೋಕೇಶ್

Date:

"ನಮ್ಮ ಅನ್ನದ ತಟ್ಟೆಗಳು ಎಲ್ಲಿ ಕಳೆದು ಹೋಗಿವೆ ಎಂಬುದು ಗೊತ್ತಿತ್ತು. ಅವುಗಳನ್ನು ನ್ಯಾಯಬದ್ಧವಾಗಿ ವಾಪಸ್ ಪಡೆದು ನಮಗೆ ದೊರಕಿಸುವ ಕೆಲಸವನ್ನು ಮಾದಿಗ ಸಮುದಾಯ ಮಾಡುತ್ತಿದೆ. ಅಲೆಮಾರಿಗಳು ಮಾದಿಗರಿಗೆ ಆಭಾರಿಯಾಗಿರುತ್ತೇವೆ."

“ಕಳೆದ 70 ವರ್ಷಗಳಿಂದಲೂ ದಿಕ್ಕಿಲ್ಲದೆ ಬದುಕುತ್ತಿರುವ ಅಲೆಮಾರಿಗಳನ್ನು ತಮ್ಮೊಂದಿಗೆ ಕರೆದುಕೊಂಡು ಹೆಜ್ಜೆ ಹಾಕಿದವರು ಮಾದಿಗರು. ಒಳಮೀಸಲಾತಿ ಹೋರಾಟ ನಮಗೂ ನ್ಯಾಯ ದೊರಕಿಸಿ ಕೊಟ್ಟಿದೆ. ಮಾದಿಗ ಸಮುದಾಯವು ತಾಯ್ತನದಿಂದ ನಮ್ಮನ್ನು ಪೊರೆದಿದೆ” ಎಂದು ‘ಅಲೆಮಾರಿ, ಅರೆಅಲೆಮಾರಿ ವಿಮುಕ್ತ ಬುಡಕಟ್ಟು ಒಕ್ಕೂಟ’ದ ಕಾರ್ಯಾಧ್ಯಕ್ಷ ಹಾಗೂ ಗೋಸಂಗಿ ಸಮುದಾಯದ ಚಾವಡಿ ಲೋಕೇಶ್ ಹೇಳಿದರು.

ಜಸ್ಟಿಸ್ ನಾಗಮೋಹನ ದಾಸ್ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಹೋರಾಟದ ಸ್ಥಳದಲ್ಲಿ ಇಂದು (ಮಂಗಳವಾರ) ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

“ಮಾದಿಗ ಸಹೋದರರು ನಮ್ಮನ್ನು (ಅಲೆಮಾರಿಗಳನ್ನು) ಅಪ್ಪಿಕೊಂಡಿದ್ದಾರೆ. ಸಂವಿಧಾನ ಜಾರಿಯಾಗಿ ಎಪ್ಪತ್ತು ವರ್ಷಗಳಾಯಿತು. ಇಷ್ಟು ಕಾಲ ಬೀದಿಯಲ್ಲಿ ಬಿದ್ದಿದ್ದ ನಮ್ಮನ್ನು ಕೈ ಹಿಡಿದು ನಡೆಸುವ ಕೆಲಸ ಮಾಡಿದ್ದು ಮಾದಿಗ ಸಹೋದರರು” ಎಂದು ಮಾರ್ಮಿಕವಾಗಿ ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಕಾಡಲ್ಲಿ ಇರಲಿಕ್ಕೂ ಬಿಡಲಿಲ್ಲ, ನಾಡಲ್ಲಿ ಇರಲಿಕ್ಕೂ ಬಿಡಲಿಲ್ಲ. ನಮ್ಮ ಮಕ್ಕಳ ಮೇಲೆ ಅತ್ಯಾಚಾರಗಳಾಗಿವೆ. ನಮ್ಮ ಮೇಲೆ ಕೇಸ್‌ಗಳನ್ನು ಹಾಕಿದ್ದಾರೆ. ಅಂತಹ ಅನಿಷ್ಟ ಜೀವನ ನಮ್ಮದು. ಹೀಗಿರುವಾಗ ಒಳಮೀಸಲಾತಿ ಚಳವಳಿಗಾರರು ನಮ್ಮನ್ನು ಮಡಿಲಿಗೆ ಹಾಕಿಕೊಂಡು ತಾಯಿ ರೀತಿಯಲ್ಲಿ ಪೋಷಣೆ ಮಾಡಿದ್ದಾರೆ” ಎಂದರು.

“ನಮ್ಮ ಅನ್ನದ ತಟ್ಟೆಗಳು ಎಲ್ಲಿ ಕಳೆದು ಹೋಗಿವೆ ಎಂಬುದು ಗೊತ್ತಿತ್ತು. ಅವುಗಳನ್ನು ನ್ಯಾಯಬದ್ಧವಾಗಿ ವಾಪಸ್ ಪಡೆದು ನಮಗೆ ದೊರಕಿಸುವ ಕೆಲಸ ಮಾಡುತ್ತಿದ್ದಾರೆ. ಮಾದಿಗ ಸಮುದಾಯಕ್ಕೆ ಅಲೆಮಾರಿಗಳು ಆಭಾರಿಯಾಗಿರುತ್ತೇವೆ” ಎಂದು ಕೃತಜ್ಞತೆ ಸಲ್ಲಿಸಿದರು.

ಇದನ್ನೂ ಓದಿರಿ: ‘ನೆಪಗಳನ್ನಿಟ್ಟು ಒಳಮೀಸಲಾತಿ ಜಾರಿ ತಡಮಾಡದಿರಿ’; ಅನಿರ್ದಿಷ್ಟಾವಧಿ ಹೋರಾಟ ಆರಂಭ

“ಎಪ್ಪತ್ತು ವರ್ಷಗಳಿಂದಲೂ ಬೀದಿಯಲ್ಲಿದ್ದ ನಮ್ಮನ್ನು, 35 ವರ್ಷಗಳ ಹಿಂದೆ ಜೊತೆಯಲ್ಲಿ ಕರೆದುಕೊಂಡು ಹೊರಟವರು ಮಾದಿಗರು. 49 ಜಾತಿಗಳನ್ನೆಲ್ಲ ಒಟ್ಟುಗೂಡಿಸಿದರೂ ನಮ್ಮ ಸಂಖ್ಯೆ 4 ಲಕ್ಷ ದಾಟುವುದಿಲ್ಲ. ನಮಗೆ ಒಳಮೀಸಲಾತಿ ಬೇಕಾಗಿದೆ. ಸರ್ಕಾರದ ಆದೇಶ ಪ್ರತಿ ಸಿಗುವವರೆಗೂ ಹಿಂತಿರುಗಿ ಹೋಗುವುದಿಲ್ಲ. 70 ವರ್ಷಗಳಿಂದಲೂ ನಾವು ಬೀದಿಯಲ್ಲೇ ಇದ್ದೇವೆ. ಹೋರಾಟ ಮಾಡುವುದು ನಮಗೆ ಹೊಸದಲ್ಲ” ಎಂದು ತಿಳಿಸಿದರು.

ಒಳಮೀಸಲಾತಿ ಹೋರಾಟಗಾರರಾದ ಎಸ್.ಮಾರೆಪ್ಪ, ಅಂಬಣ್ಣ ಅರೋಲಿಕರ್, ಬಸವರಾಜ್ ಕೌತಾಳ್, ಕರಿಯಪ್ಪ ಗುಡಿಮನಿ, ಶಿವರಾಯ ಅಕ್ಕರಕಿ ಮೊದಲಾದ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...