ಐಟಿ, ಇಡಿ ಎಲ್ಲ ಬಿಜೆಪಿಯವರ ಕೈಯಲ್ಲೇ ಇದೆ, ದಾಳಿ ರಾಜಕೀಯ ಪ್ರೇರಿತ: ಪ್ರಿಯಾಂಕ್‌ ಖರ್ಗೆ ಆರೋಪ

Date:

  • ‘ಐಟಿ, ಇಡಿ ಎಲ್ಲ ಬಿಜೆಪಿಯವರ ಕೈಯಲ್ಲೇ ಇದೆ’
  • ರಾಜಕೀಯ ಪ್ರೇರಿತ ರೇಡ್ ಮಾಡ್ತಿದ್ದಾರೆ: ಆರೋಪ

ಗುತ್ತಿಗೆದಾರರಿಂದ ಕಲೆಕ್ಷನ್ ಮಾಡಿದ್ದಾರೆ ಎಂಬ ಬಿಜೆಪಿಯವರ ಹೇಳಿಕೆ ಹಾಸ್ಯಾಸ್ಪದ. ಐಟಿ ಇಲಾಖೆಯಲ್ಲಿ ಸೆಲೆಕ್ಟಿವ್ ರೇಡ್ ಯಾಕಾಗ್ತಿದೆ? ಹಿಂದೂ ಕಾರ್ಯಕರ್ತೆ ಚೈತ್ರಾ ಕೇಸ್‌ನಲ್ಲಿ ಐಟಿ ದಾಳಿ ಯಾಕಾಗಿಲ್ಲ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದರು.

ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, “ಐಟಿ, ಇಡಿ ಎಲ್ಲ ಬಿಜೆಪಿಯವರ ಕೈಯಲ್ಲೇ ಇದೆ. ತನಿಖೆ ಮಾಡಲಿ. ಉಪ್ಪು ತಿಂದೋರು ನೀರು ಕುಡಿಯಲೇಬೇಕು. ಉದ್ಯಮಿಗೆ ವಂಚಿಸಿರುವ ಚೈತ್ರಾ ಪ್ರಕರಣದಲ್ಲಿ ಹಣ ವರ್ಗಾವಣೆ ನಡೆದಿದೆ. ಇಲ್ಲಿ ಐಟಿ ರೇಡ್ ನಡೆಯಲೇ ಇಲ್ಲ. ಇದೆಲ್ಲವನ್ನು ನೋಡಿದರೆ ರಾಜಕೀಯ ಪ್ರೇರಿತ ರೇಡ್ ಮಾಡ್ತಿದ್ದಾರೆ ಎಂದು ಅನ್ನಿಸುತದೆ” ಎಂದು ಆರೋಪಿಸಿದರು.

ಅದಾನಿ ಮೇಲೆ ರೇಡ್ ಯಾಕಿಲ್ಲ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಪಕ್ಷದವರನ್ನೇ ಗುರಿಯಾಗಿಸಿಕೊಂಡು ಐಟಿ ದಾಳಿ ಮಾಡಲಾಗುತ್ತಿದೆ. ಗುಜರಾತ್ ಸೇರಿ ಎಲ್ಲ ಕಡೆ ವಿಪಕ್ಷಗಳ ಮೇಲೆ ರೇಡ್ ಮಾಡುತ್ತಿದ್ದಾರೆ. ಎಷ್ಟು ಜನ ಬಿಜೆಪಿಯವರ ಮೇಲೆ ರೇಡ್ ಆಗಿದೆ? ಈ ಬಗ್ಗೆ ಲೆಕ್ಕ ತಗೆದುಕೊಳ್ಳಿ. ಯಾಕೆ ಅದಾನಿ ಮೇಲೆ ರೇಡ್ ಅಗ್ತಿಲ್ಲ? ಐಟಿ, ಇಡಿ ರೇಡ್‌ಗೆಲ್ಲಾ ನಾವು ಹೆದರುವುದಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರವೇನೋ ಬದಲಾಯಿತು, ಕೋಮುವಾದಿಗಳ ಅಟಾಟೋಪಗಳಿಗೆ  ಅಂಕುಶ ಯಾವಾಗ?

ಕುಮಾರಸ್ವಾಮಿ ಪ್ರತಿಕ್ರಿಯಿಗೆ ತಿರಗೇಟು ನೀಡಿದ ಸಚಿವರು, ” ಬಿಜೆಪಿ ಜೊತೆ ಕುಮಾರಸ್ವಾಮಿ ಒಂದಾಗಿದ್ದಾರೆ. ಕಲೆಕ್ಷನ್ ಮಾಡಲಾಗಿದೆ ಎಂದು ಆರೋಪ ಮಾಡುವ ಬಿಜೆಪಿಯರಿಗೆ ಮೇಲೆ ಬಾಸ್ ಗಳಿದ್ದಾರಲ್ಲ, ಹೋಗಿ ಸಾಕ್ಷಿ ಕೊಡಲಿ. ಕುಮಾರಸ್ವಾಮಿ ಅವರು ನೇರವಾಗಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರನ್ನು ಭೇಟಿ ಮಾಡುತ್ತಾರೆ. ‌ಡೈರಿ, ಪೆನ್ ಡ್ರೈವ್ ಎಲ್ಲಾ ಅವರಿಗೆ ಕೊಡಲಿ” ಎಂದು ಕುಟುಕಿದರು.

“ವಿಪಕ್ಷ ನಾಯಕನ ಆಯ್ಕೆಗಂತೂ ಅಪಾಯಿಂಟ್ಮೆಂಟ್ ಕೊಟ್ಟಿಲ್ಲ. ಬಿಜೆಪಿ ಮನೆಯೊಂದು ನೂರು ಬಾಗಿಲಾಗಿದೆ. ಯಾರು ಲೀಡರ್ ಅಂತಾ ಗೊತ್ತಾಗುತ್ತಲೇ ಇಲ್ಲ. ಅಲ್ಲಿ ಮೈತ್ರಿ ಆಗಬೇಕಾದರೆ ರಾಜ್ಯದ ಒಬ್ಬ ಲೀಡರ್‌ ಆದ್ರೂ ಇದ್ರಾ? ಜನತಾದಳ ಜನತೆ ಜೊತೆಯೂ ಇಲ್ಲ, ದಳವಾಗಿಯೂ ಉಳಿದಿಲ್ಲ” ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...