ಜೆಡಿಎಸ್‌ ವಿಸರ್ಜನೆ ಆಗುವ ಮಟ್ಟಕ್ಕೆ ಅಲ್ಲಿಯ ನಾಯಕರು ಕಾಂಗ್ರೆಸ್‌ಗೆ ಬರಲಿದ್ದಾರೆ: ಎಂ ಲಕ್ಷ್ಮಣ

Date:

  • ಡಿಕೆಶಿಯವರ ಬೆಳವಣಿಗೆ ಕಂಡು ಕುಮಾರಸ್ವಾಮಿಗೆ ಹೊಟ್ಟೆಗೆ ಬೆಂಕಿ ಬಿದ್ದಿದೆ
  • ಜೆಡಿಎಸ್‌ನಲ್ಲಿ ಬೆಲೆ ಇಲ್ಲ, ಕಾಂಗ್ರೆಸ್‌ಗೆ ಬನ್ನಿ; ಸಿಎಂ ಇಬ್ರಾಹಿಂಗೆ ಒತ್ತಾಯ

ಜೆಡಿಎಸ್‌ ಮೊದಲು ತಮ್ಮ ತತ್ವ ಸಿದ್ದಾಂತ ಬಗ್ಗೆ ರಾಜ್ಯದ ಜನತೆಗೆ ಸ್ಪಷ್ಟತೆ ನೀಡಲಿ. ರಾಜ್ಯಾಧ್ಯಕ್ಷರನ್ನು ನಿರ್ಲಕ್ಷ್ಯ ಮಾಡಿ, ಒಳಗೊಳಗೆ ಒಪ್ಪಂದ ಮಾಡಿಕೊಂಡು ಜ್ಯಾತ್ಯತೀತ ಸಿದ್ಧಾಂತ ಹಾಳು ಮಾಡಿದ್ದೀರಿ. ನಿಮಗೆ ದಿಗ್ಬ್ರಮೆ ಆಗುವಷ್ಟು ನಾಯಕರು ಕಾಂಗ್ರೆಸ್‌ಗೆ ಬರಲಿದ್ದಾರೆ. ಅದು ಎಷ್ಟರ ಮಟ್ಟಿಗೆ ಅಂದರೆ ನಿಮ್ಮ ಪಕ್ಷ ವಿಸರ್ಜನೆ ಆಗುವ ಮಟ್ಟಕ್ಕೆ ಬರಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಜಂಟಿಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜೆಡಿಎಸ್ ಎನ್ನುವುದು ಫ್ಯಾಮಿಲಿ ಟ್ರಸ್ಟ್ ಆದರೆ ಎಂದಿಗೂ ಬಿಜೆಪಿಯ ಜೊತೆ ಹೋಗದ ದೇವೆಗೌಡರು ಈಗ ಕೋಮುವಾದಿ ಪಕ್ಷದ ಜೊತೆ ಹೋಗಿದ್ದಾರೆ. ಪಕ್ಷದ ರಾಜ್ಯ ಅಧ್ಯಕ್ಷ ಸಿ ಎಂ ಇಬ್ರಾಹಿಂ ಅವರು ಎಲ್ಲಿ ಭೂಗತವಾಗಿದ್ದಾರೆʼ ಅವರಿಗೆ ಈ ಮೈತ್ರಿ ಇಷ್ಟವಿದೆಯೇ? ಅವರು ಹೊರಗೆ ಬಂದು ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದರು.

“ಕುಮಾರಸ್ವಾಮಿ ಅವರೇ ನೀವು ಡಿ ಕೆ ಶಿವಕುಮಾರ್ ಅವರಿಗೆ ಬೈದಷ್ಟು ಅವರು ಒಕ್ಕಲಿಗ ನಾಯಕರಾಗಿ ಬೆಳೆಯುತ್ತಲೇ ಇರುತ್ತಾರೆ. ಅವರ ಬೆಳವಣಿಗೆ ಕಂಡು ನಿಮಗೆಲ್ಲ ಹೊಟ್ಟೆಗೆ ಬೆಂಕಿ ಬಿದ್ದಿದೆ” ಎಂದು ಕುಟುಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಎಂಎಲ್‌ಸಿ ರಮೇಶ್ ಬಾಬು ಮಾತನಾಡಿ, “ಜೆಡಿಎಸ್ ಮತ್ತು ಬಿಜೆಪಿ ಒಂದಾಗಿರುವುದು ಯಡಿಯೂರಪ್ಪ ಅವರನ್ನು ತುಳಿಯಲು ಕುಮಾರಸ್ವಾಮಿ ಅವರನ್ನು ಬಳಸಿಕೊಳ್ಳಲಾಗುತ್ತಿದೆ. ಹಳೇ ಮೈಸೂರು ಭಾಗದಲ್ಲಿ ಕುಮಾರಸ್ವಾಮಿ ಅವರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಡಿ ಕೆ ಶಿವಕುಮಾರ್ ಅವರನ್ನು ಬೈಯುವ ಕೆಲಸ ಮಾಡುತ್ತಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವರ್ತಮಾನದ ಕೃಷಿ ಬಿಕ್ಕಟ್ಟು ಮತ್ತು ಎಂ ಎಸ್ ಸ್ವಾಮಿನಾಥನ್ ಸೃಷ್ಟಿಸಿದ ಚರಿತ್ರೆ

“ಕೇರಳದ ಜೆಡಿಎಸ್ ಶಾಸಕರು ದೇವೆಗೌಡರ ವಿರುದ್ದ ದನಿ ಎತ್ತಿ, ನಾವು ಪ್ರತ್ಯೇಕವಾಗಿ ಉಳಿಯುತ್ತೇವೆ ಎಂದು ಹೇಳಿದ್ದಾರೆ. ಜೆಡಿಎಸ್ ಪ್ರಾದೇಶಿಕ ಪಕ್ಷವಲ್ಲ, ಅದರ ರಾಷ್ಟ್ರೀಯ ಅಧ್ಯಕ್ಷರು ದೇವೇಗೌಡರು. ದೇವೇಗೌಡರು ಸಮಾಜವಾದಿ ಜನತಾ ಪಕ್ಷ ಎನ್ನುವ ಪ್ರಾದೇಶಿಕ ಪಕ್ಷ ಕಟ್ಟಿದ್ದರು. ಗುದ್ದಲಿ ಹಿಡಿದ ರೈತನ ಪಕ್ಷ ಆದರೆ ಅದು ಸಫಲವಾಗಲಿಲ್ಲ” ಎಂದರು.

“ದೇವೇಗೌಡರು ಹೇಳಿದ್ದಾರೆ ಬಂಗಾಳದಲ್ಲಿ ಎಡ ಪಕ್ಷಗಳು ಬಿಜೆಪಿ ಜೊತೆ ಸೇರಿದ್ದವು ಎಂದು ಆದರೆ ನೀವು ಕೇರಳದಲ್ಲಿ ಮಾಡಿದ್ದೇನು. ಹಿರಿಯರು ಸುಳ್ಳು ಹೇಳಬಾರದು. ಸಿ ಎಂ ಇಬ್ರಾಹಿಂ ಅವರೇ ನಿಮಗೆ ಜೆಡಿಎಸ್‌ನಲ್ಲಿ ಬೆಲೆ ಇಲ್ಲ ಆದ ಕಾರಣ ಕಾಂಗ್ರೆಸ್‌ಗೆ ಬನ್ನಿ. ಅನೇಕ ಶಾಸಕರು ಹಾಗೂ ಮಾಜಿ ಶಾಸಕರು, ಸಚಿವರು ಬಿಜೆಪಿ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆʼ ಎಂದು ಹೇಳಿದರು.

“ತಾಂತ್ರಿಕ ಕಾರಣವಾಗಿ 19 ಶಾಸಕರಲ್ಲಿ ಯಾರೂ ಕೂಡ ಬಹಿರಂಗವಾಗಿ ಅತೃಪ್ತಿ ವ್ಯಕ್ತಪಡಿಸುತ್ತಿಲ್ಲ. ಎಲ್ಲರೂ ಸೈದ್ದಾಂತಿಕವಾಗಿ ಗಟ್ಟಿ ಇರುವ ಕಾಂಗ್ರೆಸ್‌ಗೆ ಬರಬಹುದು ಎಂದು ಬಹಿರಂಗವಾಗಿ ಆಹ್ವಾನ‌ ನೀಡುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...