ಕೇರಳ ಮಾದರಿ ಮಾಟ ಮಂತ್ರದಿಂದಲೇ ಜೆಡಿಎಸ್ ಸೋತಿದ್ದು: ಬಂಡೆಪ್ಪ ಕಾಶಂಪೂರ

Date:

  • 30 ಜನರಲ್ಲಿ ಕೇವಲ ನಾಲ್ಕು ಜನ ಗೆದ್ದಿದ್ದಾರೆ
  • 2018ರ ಚುನಾವಣೆಯಲ್ಲಿ 37 ಜ‌ನ ಗೆದ್ದಿದ್ವಿ

ಕಳೆದ ಚುನಾವಣೆಯಲ್ಲಿ ಕೇರಳ ಮಾದರಿ ಮಾಟ ಮಂತ್ರದಿಂದಲೇ ನಾವು ಸೋತಿದ್ದು. 2018ರ ಚುನಾವಣೆಯಲ್ಲಿ ನಾವು 37 ಜ‌ನ ಗೆದ್ದಿದ್ವಿ. ಅದರಲ್ಲಿ ಏಳು ಜನ ಹೋಗಿ 30 ಜನ ಉಳಿದುಕೊಂಡಿದ್ವಿ. ಆದರೆ ಆ 30 ಜನರಲ್ಲಿ ಕೇವಲ ನಾಲ್ಕು ಜನ ಗೆದ್ದಿದ್ದಾರೆ. ಉಳಿದವರು ಸೋಲಲು‌ ಮಾಟ ಮಂತ್ರವೇ ಕಾರಣ ಎಂದು ಜೆಡಿಎಸ್‌ ಮಾಜಿ ಶಾಸಕ ಬಂಡೆಪ್ಪ ಕಾಶಂಪೂರ ಹೇಳಿದರು.

ಹುಬ್ಬಳ್ಳಿಯಲ್ಲಿ ನಡೆದ ಪಕ್ಷದ ಪುನಃಶ್ಚೇತನ ಪರ್ವದಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲಿಗೆ ಕಾರಣ ಎನು ಎಂಬುದನ್ನು ಹೀಗೆ ಬಿಚ್ಚಿಟ್ಟರು.

“ಕಾಂಗ್ರೆಸ್‌ನವರಿಗೆ 135 ಸ್ಥಾನ ಬರುತ್ತದೆ ಎಂಬುದು ಗೊತ್ತಿರಲಿಲ್ಲ. ನಾವು 55 ಸ್ಥಾನ ಗೆಲ್ಲಬೇಕಿತ್ತು. ಮಾಟ ಮಂತ್ರ ಮಾಡಿರೋದು ನೂರಕ್ಕೆ ನೂರು ನಿಜವಾಗಿದ್ದು, ನಾವು ಹೀನಾಯವಾಗಿ ಸೋಲಲು ಕಾರಣವಾಯಿತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಒಂದು ಸ್ಥಾನ ಕೂಡ ಗೆಲ್ಲಬಾರದು. ಕಾಂಗ್ರೆಸ್ ವಿರುದ್ದ ಅವರದೇ 35 ಶಾಸಕರು ದಿನ ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಇನ್ನೊಂದು 20 ರಿಂದ 25 ಜನ ಡೈಲಾಗ್ ಹೊಡೆದರೂ ಸರ್ಕಾರದ ಕಥೆ ಮುಗೀತು”ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಹೇಳಿದ್ದ ಹಸಿ ಸುಳ್ಳು-‘ನಾನೂ ತಿನ್ನುವುದಿಲ್ಲ, ತಿನ್ನಲೂ ಬಿಡುವುದಿಲ್ಲ’

ಜಿ ಟಿ ದೇವೇಗೌಡ ಮಾತನಾಡಿ, “ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕರ್ನಾಟಕದಿಂದ ಹಣ ಹೋಗುತ್ತಿದೆ. ಚುನಾವಣೆಗಾಗಿ ಲಂಚದ ದುಡ್ಡನ್ನು ತೆಗೆದುಕೊಂಡು ಹೋಗುತ್ತಿದ್ದಾರೆ. ಯಾರು ಏನೇ ಎನ್ನಲಿ ಮತ್ತೆ ಮೋದಿ‌ಯನ್ನು ಪ್ರಧಾನಿ‌ ಮಾಡೋಣ” ಎಂದು ​ ಸಮಾವೇಶದಲ್ಲಿ ಕರೆಕೊಟ್ಟರು.

“ಪಂಪಸೆಟ್​ಗಳಿಗೆ ಕರೆಂಟ್ ಇಲ್ಲ, ರೈತರ ಆತ್ಮಹತ್ಯೆ 6ನೇ ಗ್ಯಾರಂಟಿಯಾಗಿದೆ. ಕಾಂಗ್ರೆಸ್ ಸರ್ಕಾರ ಒಂದು ಕಾಳು ಅಕ್ಕಿಯನ್ನೂ ಕೂಡ ಕೊಟ್ಟಿಲ್ಲ. ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆ ಎಲ್ಲವೂ ಬೋಗಸ್​” ಎಂದು ಹರಿಹಾಯ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...