ಡಿಕೆಶಿ ಸಿಎಂ ಆಗುವುದಾದರೆ ಜೆಡಿಎಸ್ ಶಾಸಕರ ಬೆಂಬಲ ನೀಡುವೆ: ಎಚ್ ​ಡಿ ಕುಮಾರಸ್ವಾಮಿ ಘೋಷಣೆ

Date:

  • ಜೆಡಿಎಸ್​ನ 19 ​​ ಶಾಸಕರ ಬೆಂಬಲ ಇದೆ ಎಂದು ಘೋಷಿಸಿದ ಎಚ್‌ಡಿಕೆ
  • ಸರ್ಕಾರದಲ್ಲಿ ಟೆಂಪ್ರವರಿ ಸಿಎಂ, ಡೂಪ್ಲಿಕೇಟ್ ಸಿಎಂ ಇದ್ದಾರೆ: ಕಿಡಿ

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು​ ನಾಳೆಯೇ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್​ನ 19 ​​ ಶಾಸಕರ ಬೆಂಬಲ ಇದೆ ಎಂದು ಮಾಜಿ ಸಿಎಂ ಎಚ್ ​ಡಿ ಕುಮಾರಸ್ವಾಮಿ ಘೋಷಿಸಿದರು.

ಜೆಡಿಎಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರ ಸಿಎಂ ಆಗುವ ಆಸೆಗೆ ನೀವೇ ಹೆಚ್ಚು ಅಡ್ಡಿಯಾಗಿದ್ದೀರಿ ಎನ್ನುವ ಆರೋಪ ಇದೆಯಲ್ಲ ಎಂದು ಪತ್ರಕರ್ತರು ಪ್ರಶ್ನಿಸಿದಾಗ ಅವರು ಪ್ರತಿಕ್ರಿಯಿಸಿದರು.

ಈ ಮೂಲಕ ಡಿ ಕೆ ಶಿವಕುಮಾರ್ ನಾಳೆ ಬೆಳಗ್ಗೆ ಸಿಎಂ ಆದರೆ ನಾವು ಬೆಂಬಲ ನೀಡುತ್ತೇವೆ ಎಂದು ಓಪನ್ ಆಫರ್​ ನೀಡಿದ್ದಾರೆ. “ಕಾಂಗ್ರೆಸ್ ಪರಿಸ್ಥಿತಿ ನೋಡಿದರೆ ಎಷ್ಟು ಜನ ಸಿಎಂ ಆಗುತ್ತಾರೆ ಗೊತ್ತಿಲ್ಲ. ಇದನ್ನು ನೋಡಿದರೆ ಈ ಸರ್ಕಾರಕ್ಕೆ ಒಂದು ಹೆಸರು ಇಡಬಹುದು. ಟಿಸಿಎಂ, ಡಿಸಿಎಂ ಸರ್ಕಾರ ಎಂದು ಕರೆಯಬಹುದು. ಟಿಸಿಎಂ ಅಂದರೆ ಟೆಂಪ್ರವರಿ ಸಿಎಂ, ಡಿಸಿಎಂ ಅಂದ್ರೆ ಡೂಪ್ಲಿಕೇಟ್ ಸಿಎಂ” ಎಂದು ಲೇವಡಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಂಗಾರು ‌ಕೊರತೆಯಿಂದ 60 ಲಕ್ಷ ಹೆಕ್ಟೇರ್ ಬೆಳೆಹಾನಿಯಾಗಿದೆ. ಜಿಲ್ಲಾ ಪ್ರವಾಸ ಮಾಡಿ ಸಿಎಂ, ಸಚಿವರು ಕೂಡ ವರದಿ ಕೊಟ್ಟಿದ್ದಾರೆ. ಬರಪರಿಹಾರ ಕೊಡಿಸಿ ಎಂದು ಬಿಜೆಪಿಯವರಿಗೆ ಸಿಎಂ ಹೇಳಿದ್ದಾರೆ. ಕೇಂದ್ರ ಬರ ಅಧ್ಯಯನ ತಂಡ ಕೂಡ ವರದಿ ಪಡೆದು ಹೋಗಿದೆ. 17 ಸಾವಿರ ಕೋಟಿ ರೂ. ಬರ ಪರಿಹಾರ ಹಣಕ್ಕೆ ಮನವಿ ಮಾಡಲಾಗಿದೆ. ನಾನು ನನ್ನ ರಾಜಕೀಯ ಅನುಭವದಲ್ಲಿ ಹೇಳುವುದಾದರೆ. ಇಷ್ಟು ದೊಡ್ಡ ಮೊತ್ತದ ನೆರವನ್ನು ಯಾವ ರಾಜ್ಯಗಳು ಕೇಳಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಸಿದ್ದರಾಮಯ್ಯ ಅವರಿಗೆ ಆಡಳಿತ ನಡೆಸುವ ವಿಧಾನ ಗೊತ್ತಿಲ್ಲ: ನಳಿನ್ ಕುಮಾರ್ ಕಟೀಲ್

“ಸಿಎಂ ಸಿದ್ದರಾಮಯ್ಯ ಜಿಲ್ಲೆಗಳಿಗೆ ಹೋಗಿ ಡ್ಯಾನ್ಸ್ ಮಾಡಿ ಬಂದಿದ್ದಾರೆ. ಆ ಜಿಲ್ಲೆಯಲ್ಲೂ ಬರ ಇದೆ, ಏನು ಪರಿಹಾರ ಕೊಟ್ಟು ಬಂದಿದ್ದೀರಿ? ಗ್ಯಾರಂಟಿ ಕಾರ್ಯಕ್ರಮಕ್ಕಾಗಿ ಕೇಂದ್ರದ ಯೋಜನೆ ನಿಲ್ಲಿಸಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ರೈತರು ಬೆಳೆದ ಭತ್ತ ಒಣಗಿ ಹೋಗಿದೆ. ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಸಂಪೂರ್ಣ ನಾಶವಾಗಿದೆ” ಎಂದು ಹೇಳಿದರು.

ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪೀಪಲ್ ಲೆಸ್ ಎಂದಿದ್ದಾರೆ. ಯಾವುದು ಪೀಪಲ್ ಲೆಸ್ ಅಂತಾ ಮುಂದೆ ಎಲ್ಲವೂ ಗೊತ್ತಾಗುತ್ತೆ ಎಂದು ಇದೇ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದರು.

ಬರ ಅಧ್ಯಯನ ತಂಡ ರಚನೆ

ರಾಜ್ಯದ 31 ಜಿಲ್ಲೆಗಳ ಬರ ಅಧ್ಯಯನಕ್ಕೆ 24 ತಂಡ ರಚನೆ ಮಾಡಲಾಗಿದೆ. ಮೈಸೂರಿನಲ್ಲಿ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್​, ಮಹದೇವ್​, ಅಶ್ವಿನ್​ ಕುಮಾರ್​, ಮಂಜುನಾಥ್​ ನೇತೃತ್ವದಲ್ಲಿ ಬರ ಅಧ್ಯಯನ ನಡೆಸಲಿದೆ.  ಮಂಡ್ಯದಲ್ಲಿ ಟಿ.ಸಿ.ತಮಣ್ಣ, ರಮೇಶ್ ಗೌಡ, ಸುರೇಶ್​ಗೌಡ, ಡಾ.ರವೀಂದ್ರ ಶ್ರೀಕಂಠಯ್ಯ ನೇತೃತ್ವದಲ್ಲಿ ಬರ ಅಧ್ಯಯನ. ಹಾಸನ- ಶಾಸಕರಾದ ಎ.ಮಂಜು, ಸ್ವರೂಪ್, ಸಿ.ಎನ್.ಬಾಲಕೃಣ್ಣ. ಶಿವಮೊಗ್ಗ- ಶಾಸಕರಾದ‌ ಶಾರದ ಪಿ ನಾಯ್ಕ್, ಪ್ರಸನ್ನ ಕುಮಾರ್. ಚಿಕ್ಕಮಗಳೂರು- ವೈಎಸ್​ವಿ ದತ್ತಾ, ಬೋಜೆಗೌಡ, ಸುಧಾಕರ್ ಶೆಟ್ಟಿ. ಬೆಂಗಳೂರು- ರಮೇಶ್​ಗೌಡ, ಮಂಜುನಾಥ್, ಶರವಣ, ಜವರಾಯಿಗೌಡ ನೇತೃತ್ವದಲ್ಲಿ ಬರ ಅಧ್ಯಯನ ನಡೆಯಲಿದೆ” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...