ಕೌಟುಂಬಿಕ ಸಮಸ್ಯೆ ಬಗೆಹರಿಸಿಕೊಳ್ಳಲು ದಂಪತಿಯನ್ನು ಮಠಕ್ಕೆ ಕಳಿಸಿದ ನ್ಯಾ. ದೀಕ್ಷಿತ್‌; ಚಿಂತಕರ ವಿರೋಧ

Date:

ಧಾರವಾಡದ ಹೈಕೋರ್ಟ್‌ ಸರ್ಕ್ಯೂಟ್‌ ಪೀಠದಲ್ಲಿ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರು ನ್ಯಾಯ ಕೋರಿ ಬಂದಿದ್ದ ದಂಪತಿಯನ್ನು ಕೊಪ್ಪಳದ ಗವಿ ಸಿದ್ಧೇಶ್ವರ ಸ್ವಾಮೀಜಿಗಳ ಮಧ್ಯಸ್ಥಿಕೆಯಲ್ಲಿ ವಿವಾದವನ್ನು ಬಗೆಹರಿಸಿಕೊಳ್ಳಲು ಸೂಚಿಸಿರುವುದನ್ನು ನಾಡಿನ ಹಲವು ಚಿಂತಕರು ವಿರೋಧಿಸಿದ್ದಾರೆ.

ಇದು ಅತ್ಯಂತ ವಿಷಾದನೀಯ ಮತ್ತು ಕಾನೂನುಬಾಹಿರ ನಡೆಯಾಗಿದೆ. ಇದನ್ನು ನಾವು ಬಲವಾಗಿ ವಿರೋಧಿಸುತ್ತೇವೆ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಜನರು ಅಂತಿಮವಾಗಿ ನ್ಯಾಯಾಲಯಕ್ಕೆ ಹೋಗುವುದು ನ್ಯಾಯ ಸಿಗುತ್ತದೆಯೆಂಬ ಭರವಸೆಯಿಂದ. ಆದರೆ, ನ್ಯಾಯಾಧೀಶರು ತಮ್ಮ ಕಾನೂನುಬದ್ಧ ಕರ್ತವ್ಯವನ್ನು ನಿರ್ವಹಿಸುವ ಬದಲು, ಸತಿ-ಪತಿಯನ್ನು ಮಠಾಧೀಶರೊಬ್ಬರ ಬಳಿಗೆ ಮಧ್ಯಸ್ಥಿಕೆವಹಿಸಿ ವಿವಾದ ಬಗೆಹರಿಸಲು ಸೂಚಿಸುವುದು ಅಥವಾ ನಿರ್ದೇಶಿಸುವುದು, ʼಮಠಗಳು ಸಂವಿಧಾನ ಕೊಡಮಾಡಿರುವ ನ್ಯಾಯಾಲಯಗಳಿಗಿಂತ ದೊಡ್ಡವುʼ ಎಂಬ ಭಾವನೆಯನ್ನು ಜನರಲ್ಲಿ ಬೆಳೆಸುತ್ತವೆ. ನ್ಯಾಯಾಲಯಗಳು ವಾದ -ಪ್ರತಿವಾದಗಳನ್ನು ಆಲಿಸಿ, ಸಾಕ್ಷ್ಯಾಧಾರಗಳನ್ನು ಸಮಗ್ರವಾಗಿ ಪರಿಶೀಲಿಸಿ ನ್ಯಾಯ ಒದಗಿಸುವ ಬದಲು ಮಠದ ಸ್ವಾಮೀಜಿಯವರ ಮಧ್ಯಸ್ಥಿಕೆಗೆ ಸೂಚಿಸುವುದು ಯಾವ ಬಗೆಯ ನ್ಯಾಯ?

ನಿರ್ದಿಷ್ಟ ಜಾತಿ ಧರ್ಮಕ್ಕೆ ಸೇರಿದ ಮಠಮಾನ್ಯಗಳು ವಿವಾದಗಳನ್ನು ಬಗೆಹರಿಸುವ ನ್ಯಾಯಾಲಯಗಳಾದರೆ, ಸಂವಿಧಾನದ ಅಡಿಯಲ್ಲಿ ಸ್ಥಾಪಿತವಾಗಿರುವ ನ್ಯಾಯಾಲಯಗಳ ಅವಶ್ಯಕತೆಯಾದರೂ ಏನು ಎಂಬ ಪ್ರಶ್ನೆ ಮೂಡುತ್ತದೆ. ನ್ಯಾಯಾಲಯಗಳ ಬದಲು ನಾವು ಮಠಮಾನ್ಯಗಳನ್ನೇ ನ್ಯಾಯಾಲಯಗಳೆಂದು ಘೋಷಿಸಿಬಿಡಬಹುದು. ಗೌರವಾನ್ವಿತ ನ್ಯಾಯಾಧೀಶರ ಈ ನಡೆ ಸಂವಿಧಾನ ವಿರೋಧಿ ನಡೆಯಾಗಿದ್ದು, ಈ ಹಿಂದೆ ಮೇಲ್ಜಾತಿ ಮತ್ತು ಮೇಲ್ವರ್ಗದವರು ನಡೆಸುತ್ತಿದ್ದ ಪಂಚಾಯತಿ ಕಟ್ಟೆಯ ತೀರ್ಮಾನಗಳನ್ನು ನೆನಪಿಸುತ್ತದೆ. ಇದು ಕಾನೂನಿನ ನಿಯಮದ ಪ್ರಕಾರ ನ್ಯಾಯದಾನ ಮಾಡುವ ಬದಲು ಮತೀಯತೆ, ಜಾತಿ ಮತ್ತು ಧರ್ಮದ ನೆಲೆಯಲ್ಲಿ ಅನ್ಯಾಯವನ್ನು ಕ್ರಮಬದ್ಧಗೊಳಿಸುವ ಕ್ರಮವಾಗಿದೆ.

ನ್ಯಾಯಾಧೀಶರಿಗೆ ಮಧ್ಯಸ್ಥಿಕೆಯ ಅಗತ್ಯ ಕಂಡಿದ್ದರೆ, ಕಾನೂನು ಸೇವಾ ಪ್ರಾಧಿಕಾರ ನಡೆಸುವ ಕಾನೂನು ಬದ್ದ ಸಂಧಾನ ಕೇಂದ್ರಕ್ಕೆ (ಮೀಡಿಯೇಷನ್ ಸೆಂಟರ್) ಕಳಿಸಲು ಸೂಚಿಸಬಹುದಿತ್ತು. ಅದನ್ನು ಬಿಟ್ಟು ಮಠಾಧೀಶರ ಮಧ್ಯಸ್ಥಿಕೆ ಸೂಚಿಸಿರುವುದು ʼಸಂವಿಧಾನಬದ್ಧ ನ್ಯಾಯಾಧೀಶರ ನ್ಯಾಯ ಪೀಠಕ್ಕಿಂತ ಧರ್ಮಾಧಾರಿತ ಮಠಾಧೀಶರ ಪೀಠವೇ ಮೇಲುʼ ಎಂಬ ಸಂದೇಶ ರವಾನಿಸುತ್ತದೆ.

ಎಲ್ಲಕಿಂತ ಮಿಗಿಲಾಗಿ, ವಿವಾದ ಬಗೆಹರಿಸಲಿರುವ ಪರ್ಯಾಯ ವ್ಯವಸ್ಥೆಗೆ (ಎಡಿಆರ್) ಅಥವಾ ಮಧ್ಯಸ್ಥಿಕೆಗೆ ಎಲ್ಲೆಂದರಲ್ಲಿ ಶಿಫಾರಸು ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ಮೀಡಿಯೇಷನ್ ಮಾಡುವವರಿಗೂ ಕೆಲವು ಅರ್ಹತೆಗಳಿವೆ. ಆ ಅರ್ಹತೆ ಗವಿಸಿದ್ದೇಶ್ವರ ಶ್ರೀಗಳಿಗೆ ಇದೆ ಎಂಬುದನ್ನು ನ್ಯಾಯಾಲಯ ಖಚಿತಪಡಿಸಿಕೊಂಡಿದೆಯೇ ಎಂಬ ಬಗ್ಗೆ ನ್ಯಾಯಾಲಯ ಏನನ್ನೂ ಹೇಳಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
gavisiddeshwara swamy
ಕೊಪ್ಪಳದ ಗವಿ ಸಿದ್ಧೇಶ್ವರ ಸ್ವಾಮೀಜಿ

ದಂಪತಿಗಳು ನೇರವಾಗಿ ಸ್ವಾಮೀಜಿಯ ಬಳಿ ಹೋಗಿ ಮಧ್ಯಸ್ಥಿಕೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವುದಕ್ಕೂ, ನ್ಯಾಯಾಲಯವೇ ಅವರನ್ನು ಸ್ವಾಮೀಜಿಯ ಬಳಿ ಹೋಗುವಂತೆ ಸೂಚಿಸುವುದಕ್ಕೂ ಬಹಳ ವ್ಯತ್ಯಾಸವಿದೆ. ನಾವು ವ್ಯಕ್ತಿಯೊಬ್ಬರ ಬಳಿ ನಾವಾಗಿಯೇ ಹೋಗುವುದು ನಮ್ಮ ನಂಬಿಕೆ ವಿಶ್ವಾಸವಾದರೆ, ನ್ಯಾಯಾಲಯದ ಮೊರೆ ಹೋಗುವುದು ನಮ್ಮ ವೈಯಕ್ತಿಕ ನಂಬಿಕೆ ವಿಶ್ವಾಸಗಳನ್ನು ಮೀರಿ ಕಾನೂನಿನ ಚೌಕಟ್ಟಿನಲ್ಲಿ ಸಂವಿಧಾನದ ಆಶಯದಂತೆ ವಾಸ್ತವಿಕ ನ್ಯಾಯವನ್ನು ಕೊಡಮಾಡುವುದಾಗಿದೆ. ಇವೆರಡನ್ನು ಅದಲು-ಬದಲಾಗಿ ಅಥವಾ ಪರ್ಯಾಯವಾಗಿ ನೋಡುವುದು ನ್ಯಾಯದ ಪರಿಕಲ್ಪನೆ ಮತ್ತು ಅದಕ್ಕಾಗಿ ನಾವು ರೂಪಿಸಿಕೊಂಡಿರುವ ನ್ಯಾಯಾಂಗ ವ್ಯವಸ್ಥೆಯನ್ನು ಅಣಕಿಸುವಂತಿದೆ.

ಸುಪ್ರೀಂ ಕೋರ್ಟು ಈ ತೀರ್ಮಾನವನ್ನು ಗಂಭೀರವಾಗಿ ಪರಿಗಣಿಸಿ ಸಂವಿಧಾನ ಬಾಹಿರವಾಗಿರುವ ಹೈಕೋರ್ಟಿನ ನ್ಯಾಯಾಧೀಶರ ಇಂಥ ನಡೆಗಳ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಸೂಕ್ತವಾದ ನಿರ್ದೇಶನವನ್ನು ಅಧೀನ ನ್ಯಾಯಾಲಯದ ನ್ಯಾಯಾಧೀಶರಿಗೆ ನೀಡಬೇಕು. ಈ ತೀರ್ಪು ನೀಡಿದ ಗೌರವಾನ್ವಿತ ನ್ಯಾಯಮೂರ್ತಿಗಳೂ ಸಹ ತಮ್ಮ ಈ ತೀರ್ಪನ್ನು ಮರುಪರಿಶೀಲಿಸಬೇಕು” ಎಂದು ಡಾ ವಿ ಪಿ ನಿರಂಜನಾರಾಧ್ಯ, ಬಸವರಾಜ ಸೂಳಿಭಾವಿ, ಡಾ ವಸುಂಧರ ಭೂಪತಿ, ಬಿ. ಸುರೇಶ, ಡಾ ಸಬಿಹಾ ಭೂಮಿಗೌಡ, ಮೂಡ್ನಾಕೂಡ ಚಿನ್ನಸ್ವಾಮಿ, ಕ.ಮ. ರವಿಶಂಕರ, ಲಕ್ಷ್ಮಣ ಕೊಡಸೆ, ಡಾ ಜಯಲಕ್ಷ್ಮಿ ಎಚ್.ಜಿ, ಡಾ. ಮಂಜುನಾಥ್ ಬಿ ಆರ್, ಡಾ ತುಕಾರಾಮ, ಶ್ರೀಪಾದ ಭಟ್ಟ, ಪೂಜಾ ಸಿಂಗೆ, ಪ್ರಕಾಶ ಬಿ, ಮುತ್ತು ಬಿಳಯಲಿ ಜೆ ಎಂ ವೀರಸಂಗಯ್ಯ, ಬಸವರಾಜ ಬ್ಯಾಗವಾಟ, ಎಸ್ ಸತ್ಯಾ, ವಿಶುಕುಮಾರ, ಅನಿಲ ಹೊಸಮನಿ, ಪ್ರಶಾಂತ್ ಹೊಸಪೇಟೆ ಕರಿಬಸಪ್ಪ ಎಂ ಸೇರಿದಂತೆ ಹಲವು ಪ್ರಗತಿಪರ ಚಿಂತಕರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...