ಅಣ್ಣನನ್ನು ಕಣದಿಂದ ತೆಗೆಸಿ ನೀನೂ ರಾಜೀನಾಮೆ ನೀಡು: ಏಕವಚನದಲ್ಲಿ ವಿಜಯೇಂದ್ರಗೆ ಈಶ್ವರಪ್ಪ ತಿರುಗೇಟು

Date:

‘ಕಾಲ ಮಿಂಚಿಲ್ಲ. ಪಕ್ಷಕ್ಕೆ ವಾಪಸ್ ಬನ್ನಿ. ಸಮಸ್ಯೆ ಇದ್ದರೆ ಹೈಕಮಾಂಡ್ ಜೊತೆ ಮಾತನಾಡಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಮಾಡಿರುವ ಮನವಿಗೆ ಭಾನುವಾರ ಇಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ‘ನನಗೆ ಮನವಿ ಮಾಡಿಕೊಳ್ಳುವ ಬದಲು ನಿಮ್ಮ ಅಣ್ಣನಿಗೆ (ಬಿ. ವೈ . ರಾಘವೇಂದ್ರ) ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಣದಿಂದ ಹಿಂದೆ ಸರಿಯಲು ಹೇಳಿ. ನಿಮಗೆ ಧೈರ್ಯವಿದ್ದರೆ ವಾಪಸ್ ತೆಗೆಸಿ’ ಎಂದು ತಿರುಗೇಟು ನೀಡಿದ್ದಾರೆ.

ಶಿವಮೊಗ್ಗ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈಶ್ವರಪ್ಪ ಗೆಲ್ಲಲಿ ಬಿಡು, ನೀನು ಸ್ಪರ್ಧೆ ಮಾಡಬೇಡ ಅಂತಾ ನಿಮ್ಮಣ್ಣ ರಾಘವೇಂದ್ರಗೆ ಹೇಳು. ನೀನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡು ಎಂದು ಒತ್ತಾಯಿಸಿದರು.

ಕೇಂದ್ರದ ನಾಯಕರು ಈಶ್ವರಪ್ಪನವರ ಜೊತೆ ಮಾತಾಡುತ್ತಾರೆ ಎಂದು ಹೇಳಲು ನಿನಗೆ ಅಧಿಕಾರ ಕೊಟ್ಟವರು ಯಾರು? ಎಲ್ಲ ಅಧಿಕಾರ ಯಡಿಯೂರಪ್ಪ ಮತ್ತು ಮಕ್ಕಳ ಕೈಯಲ್ಲಿ ಇರಬೇಕಾ? ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನೀನು ಬಿಟ್ಟುಕೊಡು. ಜನರ ದಾರಿ ತಪ್ಪಿಸುವ ಕೆಲಸ ಮಾಡಬೇಡ. ಎಲ್ಲರ ನೋವು ಪರಿಹಾರ ಆಗುತ್ತದೆ ಎಂದು ವಿಜಯೇಂದ್ರ ವಿರುದ್ಧ ಕೆ ಎಸ್ ಈಶ್ವರಪ್ಪ ಏಕವಚನದಲ್ಲಿ ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮರೆಯಲಾರದ, ಮರೆಯಬಾರದ ಮನಮೋಹನ ಈ ಸಿಂಗ್

‘ಮೋದಿ ವಿಶ್ವ ನಾಯಕ. ಅವರ ಪೋಟೋ ಬಳಸಿಕೊಳ್ಳಬಾರದು ಎಂದು ಎಲ್ಲಿಯೂ ಇಲ್ಲ. ಮೋದಿ ನನ್ನ ಹೃದಯದಲ್ಲಿ ಇದ್ದಾರೆ. ಯಡಿಯೂರಪ್ಪನ ಮಕ್ಕಳು ಕೇಸು ಹಾಕಿಕೊಳ್ಳುತ್ತಾರೆಂದೇ ನಾನು ಕೇವಿಯೆಟ್ ಹಾಕಿದ್ದೇನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಸಹೋದರ ಬಿ ವೈ ರಾಘವೇಂದ್ರ ಎರಡು ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ’ ಎಂಬ ವಿಜಯೇಂದ್ರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಕೆ ಎಸ್ ಈಶ್ವರಪ್ಪ, ‘ನಾನು ಈ ಬಾರಿ 3 ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತೇನೆ. ಗೆದ್ದ ನಂತರ ಬಿಜೆಪಿಗೆ ಮತ್ತೆ ವಾಪಸ್ ಬರುತ್ತೇನೆ. ಮುಂಬರುವ ಮಹಾನಗರ ಪಾಲಿಕೆ ಚುನಾವಣೆಗೆ ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ನಾನೇ ಟಿಕೆಟ್ ಕೊಡೋದು’ ಎಂದು ಹೇಳಿದರು.

‘ನಿಮ್ಮಣ್ಣ (ಬಿ.ವೈ. ರಾಘವೇಂ ದ್ರ) ಸೋಲುತ್ತಾನೆ ಅಂತಾ ಭಯನಾ? ಏನು ನೀವೇ ಗೂಟ ಹೊಡ್ಕೊಂಡು ಇರಬೇಕಾ? ಎಂದು ಪ್ರಶ್ನಿಸಿದ ಈಶ್ವರಪ್ಪ, ‘ನಾನು ಈಗಲೂ ಬಿಜೆಪಿಯವನು ಆದರೆ ಪಕ್ಷೇ ತರವಾಗಿ ಸ್ಪರ್ಧೆ ಮಾಡಲು ನಿರ್ಧರಿಸಿ ಆಗಿದೆ. ನಾನು ಸ್ಪರ್ಧೆ ಮಾಡಿದರೆ ಬಿಜೆಪಿಯವರು ಏನು ಮಾಡಬಹುದು? ಪಕ್ಷದಿಂದ ಉಚ್ಚಾಟನೆ ಮಾಡಬಹುದಾ. ಅಷ್ಟೇ ತಾನೇ ಇನ್ನೇನೂ ಮಾಡಲು ಸಾಧ್ಯ. ನಾನೇನು ಪಕ್ಷ ಬಿಟ್ಟು ಹೋಗಿದ್ದೇನಾ? ಯಡಿಯೂರಪ್ಪ ಬಿಜೆಪಿ ಬಿಟ್ಟು ಕೆಜೆಪಿಗೆ ಹೋಗಿರಲಿಲ್ಲವಾ? ಎಂದು ಪ್ರಶ್ನಿಸಿದರು.

ಜಗದೀಶ ಶೆಟ್ಟರ್ ಕಾಂಗ್ರೆಸ್‌ಗೆ ಹೋಗಿ ಮತ್ತೆ ಪಕ್ಷಕ್ಕೆ ವಾಪಸ್ ಬಂದು ಲೋಕಸಭೆ ಚುನಾವಣೆಗೆ ಟಿಕೆಟ್ ತೆಗೆದುಕೊಂಡಿದ್ದಾರೆ. ನಾನೇನು ಹಾಗೆ ಮಾಡಿದ್ದೇನಾ? ಶಿವಮೊಗ್ಗ ಲೋಕಸಭಾ ಕ್ಷೇತ್ರದ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದೇನೆ. ‘ನಿಮಗೆ ಅನ್ಯಾಯ ಆಗಿದೆ, ಬಿಜೆಪಿ ಅಪ್ಪ ಮಕ್ಕಳ ಕೈಯಲ್ಲಿದೆ. ನಾವು ನಿಮಗೆ ಮತ ಕೊಡುತ್ತೇವೆ’ ಅಂತಾ ಮತದಾರರು ಹೇಳುತ್ತಿದ್ದಾರೆ’ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...