ಕಲಬುರಗಿ | ಕೋಮು ದ್ವೇಷ ಬಿತ್ತುವ ಕೇಂದ್ರವಾಗುತ್ತಿದೆ ಕೇಂದ್ರೀಯ ವಿವಿ; ಸಂಯುಕ್ತ ಹೋರಾಟ ಕರ್ನಾಟಕ ಖಂಡನೆ

Date:

ಬೌದ್ಧ, ಜೈನ, ಸೂಫಿ ಸಂತರು, ಶರಣರು, ತತ್ವಪದಕಾರರ ದಾರ್ಶನಿಕ ನೆಲೆಯಾದ ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ರಾಜ್ಯದ ಏಕೈಕ ಕೇಂದ್ರೀಯ ವಿಶ್ವವಿದ್ಯಾಲಯವಾಗಿದೆ. ಈ ವಿಶ್ವವಿದ್ಯಾಲಯವನ್ನು ಕೋಮು ದ್ವೇಷ ಬಿತ್ತುವ ಕೇಂದ್ರವಾಗಿಸಬಾರದು ಎಂದು ಸಂಯುಕ್ತ ಹೋರಾಟ ಕರ್ನಾಟಕ ಒತ್ತಾಯಿಸಿದೆ.

ಕಲಬುರಗಿಯಲ್ಲಿ ಪಾದಯಾತ್ರೆ ನಡೆಸಿದ ಒಕ್ಕೂಟ ಮುಖಂಡರು ಮತ್ತು ಕಾರ್ಯಕರ್ತರು ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ತೆರಳಿ ಕುಲಪತಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ” 2009ರಲ್ಲಿ ಸ್ಥಾಪನೆಯಾದ ಕೇಂದ್ರೀಯ ವಿಶ್ವವಿದ್ಯಾಲಯ ಕಲ್ಯಾಣ ಕರ್ನಾಟಕ ಭಾಗವನ್ನು ಶೈಕ್ಷಣಿಕವಾಗಿ ಸಬಲಿಕರಿಸುವ ಉದ್ದೇಶ ಹೊಂದಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ತನ್ನ ಸದುದ್ದೇಶದಿಂದ ದೂರಸರಿದು ಮನುವಾದಿ ಆರ್‌ಎಸ್ಎಸ್ ಮತ್ತು ಎಬಿವಿಪಿಯ ಸಮಾಜ ವಿರೋಧಿ ಚಟುವಟಿಕೆಗಳ ಅಡ್ಡವಾಗಿ ಮಾರ್ಪಟ್ಟಿದೆ. ಇದರಿಂದಾಗಿ ಗುಣಮಟ್ಟದ ಶಿಕ್ಷಣದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

“ಕೇಂದ್ರೀಯ ವಿಶ್ವವಿದ್ಯಾಲಯವು ಸಂಘಿಗಳ ಹಿಂದುತ್ವದ ಕಾರ್ಖಾನೆಯಂತೆ ಬಳಕೆಯಾಗುತ್ತಿದೆ. ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಕೋಮು ಸಂಘಟನೆಗಳಿಗೆ ಬೆಂಬಲ ನೀಡುತ್ತಿದ್ದಾರೆ. ಕೋಮುವಾದಿ ವಿಚಾರಧಾರೆಯನ್ನು ವಿದ್ಯಾರ್ಥಿಗಳ ಮನಸಿನಲ್ಲಿ ಬಿತ್ತುತ್ತಿದ್ದಾರೆ. ಸರ್ವ ಜನಾಂಗದ ಶಾಂತಿಯ ತೋಟವಾಗಬೇಕಿದ್ದ ವಿಶ್ವವಿದ್ಯಾಲಯವು ಸಂಘ ಪರಿವಾರದ ಅವಾಸ ಸ್ಥಾನವಾಗಿದೆ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಶ್ವವಿದ್ಯಾಲಯವು ವಿಧ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿಗಳು ಮತ್ತು ಜಿಲ್ಲೆಯ ಆಡಳಿತ ಮತ್ತು ವಿರೋಧ ಪಕ್ಷಗಳ ಬಲವಾದ ಹೋರಾಟದಿಂದ ಅಸ್ಥಿತ್ವಕ್ಕೆ ಬಂದಿದೆ. ಕಲ್ಯಾಣ ಕರ್ನಾಟಕದ ರೈತರು, ಕೂಲಿಕಾರರು, ಬಡವರ ಮಕ್ಕಳಿಗೆ ಪ್ರಗತಿಪರ, ಗುಣಮಟ್ಟದ ಶಿಕ್ಷಣ ನೀಡಬೇಕೆಂಬುದು ಹೋರಾಟಗಾರರ ಕನಸಾಗಿತ್ತು. ಆದರೆ, ಆ ಎಲ್ಲ ಕನಸುಗಳು ಭಗ್ನಗೊಂಡು ಕೊಮುವಾದಿಗಳ ಅಡ್ಡೆಯಾಗಿ ಮಾರ್ಪಟ್ಟಿದೆ. ಇದರ ವಿರುದ್ಧ ಹೋರಾಟ ಮಾಡುವ ಮೊದಲ ಹೆಜ್ಜೆಯಾಗಿ ಮಂಗಳವಾರ ಕಾಲ್ನಡಿಗೆ ಜಾಥಾ ಪಾದಯಾತ್ರೆ ನಡೆಸಿದ್ದೇವೆ” ಎಂದು ಹೇಳಿದ್ದಾರೆ.

ಹೋರಾಟಗಾರರ ಹಕ್ಕೊತ್ತಾಯಗಳು:

  1. ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಎಲ್ಲ ಸಿದ್ಧಾಂತಗಳಿಗೆ ಸಮನಾಗಿ ಮಾನ್ಯತೆ ಕೊಡಬೇಕು.
  2. ವಿಶ್ವವಿದ್ಯಾಲಯದ ಆವರಣದಲ್ಲಿ ಕೋಮುವಾದಕ್ಕೆ ಪ್ರೋತ್ಸಾಹ ಕೊಡಬಾರದು.
  3. ನೇಮಕಾತಿಗಳಲ್ಲಿ ಕಲ್ಯಾಣ ಕರ್ನಾಟಕದ ರೈತರ, ಕೂಲಿಕಾರರ ಮಕ್ಕಳಿಗೆ ಆದ್ಯತ ನೀಡಬೇಕು.
  4. ವಿಶ್ವವಿದ್ಯಾಲಯದಲ್ಲಿ ಕೇವಲ ಆಂಧ್ರ – ತೆಲಂಗಾಣ ಜನರನ್ನು ನೇಮಕಾತಿ ಮಾಡುವುದನ್ನು ನಿಲ್ಲಿಸಬೇಕು.
  5. ನೌಕರರ ಮತ್ತು ಶಿಕ್ಷಕರ ಮೇಲೆ ಆಡಳಿತ ಮಂಡಳಿ ನಡೆಸುತ್ತಿರುವ ದಾಳಿ, ದಬ್ಬಾಳಿಕೆಯನ್ನು ಕೂಡಲೇ ನಿಲ್ಲಿಸಬೇಕು.

ಪ್ರತಿಭಟನೆಯಲ್ಲಿ ಶರಣಬಸಪ್ಪಾ ಮಮಶೆಟ್ಟಿ, ನಾಗೇಂದ್ರ ಥಾಂಬೆ,ಅರ್ಜುನ್ ಗೊಬ್ಬುರು,ಭಿಮಶಟ್ಟಿ ಯಂಪಳ್ಳಿ,ಮೇಘ ರಾಜ ಕಠಾರ,ಎಂ.ಬಿ. ಸಜ್ಜನ, ಪ್ರಭು ಪ್ಯಾರಬದ್ದಿ, ಗುಂಡಪ್ಪ ಅರಣಕಲ್,ಜಾಫರ್ ಖಾನ್, ಶಂಕ್ರಯ್ಯಾ ಘಂಟಿ,ಪದ್ಮಾ ಎನ್ ಮಾಲಿ ಪಾಟೀಲ್,ಶಿವುಲಿಂಗಮ್ಮ ಲೆಂಗಟಕರ,ಕುಸಾಳೆ, ಪಾಂಡುರಂಗ ಮಾವಿನಕರ, ಅನಿಲ್ ಗುತ್ಯದಾರ. ಜಾವೇದ್,ಹುಸೇನ್,ಸಾಗರ ಗಾಳೆ,ಅಲ್ತಾಫ್ ಇನಾಮಂದಾರ, ಸಾಯಬಣ್ಣ ಗುಡುಬಾ ಇನ್ನಿತರ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...