ವಿಜಯನಗರ : ಕನ್ನಡ ವಿವಿ ವತಿಯಿಂದ ‘ಕರ್ನಾಟಕ ಸೌಹಾರ್ದತಾ ಮಾನವ ಸರಪಳಿ’ ಕಾರ್ಯಕ್ರಮ

Date:

ಇಂದು ಕನ್ನಡ ವಿಶ್ವವಿದ್ಯಾಲಯದ ‘ಬಿ’ಗೇಟ್‌ಬಳಿ ‘ಕರ್ನಾಟಕ ಸೌಹಾರ್ದತಾ ಮಾನವ ಸರಪಳಿ’ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಹಂಪಿ ಕನ್ನಡ ವಿವಿಯ ಪ್ರಾಧ್ಯಾಪಕರಾದ ಡಾ. ಚಲುವರಾಜು, ಈ ದೇಶ ಮತ್ತು ರಾಜ್ಯದಲ್ಲಿ ಸೌಹಾರ್ದತೆಯ ಸಂಕೇತವೇ ಮಹಾತ್ಮ ಗಾಂಧಿ. ಅವರು ದೇಶವನ್ನು ಉದ್ದೇಶಿಸಿ ಗ್ರಾಮ ಸ್ವರಾಜ್ ಉಳಿಯಬೇಕು ಎಂದು ಹೇಳಿದ್ದರು. ಗ್ರಾಮ ಸ್ವರಾಜ್ ಉಳಿದರೆ ಮಾತ್ರ ಈ ದೇಶ ಉಳಿಯುತ್ತದೆ. ಇಲ್ಲದಿದ್ದರೆ ಈ ದೇಶದ ಮೂಲ ಸ್ವರೂಪವೇ ಬದಲಾಗುತ್ತದೆ. ಆದ್ದರಿಂದ ಯುವಕರು ಗಾಂಧಿ ಅವರನ್ನು ಓದಬೇಕು ಎಂದರು.

“ಈ ದೇಶದ ಧರ್ಮಗಳು ಐಕ್ಯತೆ, ಸೌಹಾರ್ದತೆ ಸಾರಬೇಕಿದೆ‌. ನಮ್ಮ ದೇಶದ ಸಂವಿಧಾನದ ಪೀಠಿಕೆಯಲ್ಲಿ ಭ್ರಾತೃತ್ವ, ಸಮಾನತೆ ಸಹೋದರತೆ ಬೆಳೆಸಲು ಯುವಕರು ಸಿದ್ದರಾಗಬೇಕು. ಅಲ್ಲದೆ ಸಂಶೋಧಕರು ಗಾಂಧಿ ಸ್ವರಾಜ್‌ದ ಮೂಲ ಆಶಯದ ಬಗ್ಗೆ ಹೆಚ್ಚು ಅಧ್ಯಯನ ಶೀಲಮರಾಗಬೇಕು. ಎಳೆ ಎಳೆಯಾಗಿ ಸಮಾಜಕ್ಕೆ ಬಿತ್ತಬೇಕು. ಸಮಾಜವನ್ನು ಕಾಲ ಕಾಲಕ್ಕೆ ಜೀವಂತವಾಗಿ ಇಡುವ ಮತ್ತು ತಪ್ಪುಗಳನ್ನು ತಿದ್ದಿ ಎಚ್ಚರಿಸುವವರು ನೀವಾಗಬೇಕು ಎಂದು ಚಲುವರಾಜು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ

ಸಂಶೋಧನಾರ್ಥಿ ಮಂಜುನಾಥ ಮಾತನಾಡಿ, ಮಹಾತ್ಮ ಗಾಂಧಿ ನಮ್ಮಲ್ಲಿ ಎಂದಿಗೂ ಜೀವಂತ ಅವರು ಕಟ್ಟಿಕೊಟ್ಟ ಎಲ್ಲ ಧರ್ಮಗಳ ಸೌಹಾರ್ದ ಸಮಾಜವನ್ನು ನಾವು ಮುನ್ನಡೆಸಬೇಕು. ಸ್ವಾತಂತ್ರ್ಯ ನಂತರದಲ್ಲಿ ದೇಶದಲ್ಲಿ ಮೊದಲು ಹತ್ಯೆಯಾದವರು ಮಹಾತ್ಮ ಗಾಂಧಿ. ಆದರೆ ಅದರ ಹಿಂದಿನ ಉನ್ನಾರವನ್ನು ಮುಚ್ಚಿಹಾಕಲು ದೇಶದಲ್ಲಿ ಇಂದಿಗೂ ಪ್ರಯತ್ನಗಳು ನಡೆಯುತ್ತಿವೆ. ಚರಿತ್ರೆಕಾರರು ಎಲ್ಲವನ್ನೂ ಸತ್ಯದಿಂದ ಬರೆದಿಲ್ಲ. ಆದರೆ ಗಾಂಧಿಯನ್ನು ಕೊಂದುದ್ದು ಸತ್ಯ ಅದು ಎಂದೂ ಮಿತ್ಯವಾಗಲು ಸಾಧ್ಯವಿಲ್ಲ ಎಂದರು.

ಈ ಸಂದರ್ಭದಲ್ಲಿ ಪ್ರದೀಪ ಡಿ.ಡಿ, ದಾದುಹಾಯತ್, ಯರಿಸ್ವಾಮಿ, ಮಹೇಶ್, ಮಣಿಕಂಠ, ಸಂಶೋಧನಾ ವಿದ್ಯಾರ್ಥಿಗಳಾದ ಸೋಮಪ್ಪ.ಸಿ, ಲಕ್ಷ್ಮಣ್, ನಾಗರಾಜ, ರಾಜು, ಹನುಮಂತ, ಸಂತೋಷ, ಬಸವರಾಜ, ಅಶೋಕ, ದಿನೇಶ್ ಪಾವಗಡ, ಇನ್ನೂ ಅನೇಕರು ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...