ದುಬೈನಲ್ಲಿ ಭಾರೀ ಮಳೆ; ಸಂಕಷ್ಟದಲ್ಲಿ ಸಿಲುಕಿದವರ ನೆರವಿಗೆ ಕನ್ನಡಿಗಾಸ್ ಹೆಲ್ಪ್ ಲೈನ್ ತಂಡ

Date:

ಏಪ್ರಿಲ್ 16ರಂದು ಯುಎಇಯ ಇತಿಹಾಸದಲ್ಲೇ ಅತಿ ಹೆಚ್ಚಿನ ಮಳೆ ಸುರಿದು ಸೃಷ್ಟಿಯಾದ ನೆರೆಯಿಂದ ಶಾರ್ಜಾ ಮತ್ತು ದುಬೈನ ಹಲವು ತಗ್ಗು ಪ್ರದೇಶಗಳಲ್ಲಿ ನೀರು ಜನಜೀವನ ಅಸ್ತವ್ಯಸ್ತವಾಗಿದ್ದು, ಜನರಿಗೆ ಊಟ, ನೀರು ಔಷಧಿಯ ಸಮಸ್ಯೆ ಎದುರಾಗಿರುವುದು ಮನಗಂಡು ಕನ್ನಡಿಗಾಸ್ ಹೆಲ್ಪ್‌ಲೈನ್ ತಂಡ ನೆರವಿನ ಕಾರ್ಯಾಚರಣೆ ನಡೆಸಿದೆ.

ದುಬೈ ಇಂಡಿಯನ್ ಕನ್ಸಲೇಟ್ ಅನುಮತಿ ಮತ್ತು ಸಹಯೋಗದಲ್ಲಿ ಕನ್ನಡಿಗಾಸ್ ಹೆಲ್ಪ್‌ಲೈನ್ ತಂಡ ರಕ್ಷಣಾ ಬೋಟ್‌ನಲ್ಲಿ ಊಟ, ನೀರು, ರೇಷನ್‌ಗಳನ್ನು ಕಳೆದ ಮೂರು ದಿನಗಳಿಂದ ಸಂಕಷ್ಟದಲ್ಲಿರುವ ಅನಿವಾಸಿ ಭಾರತೀಯರಿಗೆ ಮಾತ್ರವಲ್ಲದೆ ನೂರಾರು ವಿದೇಶಿಯರಿಗೂ ಭೇದವಿಲ್ಲದೇ ನೆರವಿನ ಹಸ್ತ ನೀಡಿದೆ. ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ನಗರ ಪಾಲಿಕೆ ವಾಹನ ಚಾಲಕರಿಗೂ ಸ್ಥಳದಲ್ಲೇ ಊಟದ ವ್ಯವಸ್ಥೆ ಕಲ್ಪಿಸಿದೆ.

ಕನ್ನಡಿಗಾಸ್ ಹೆಲ್ಪ್ ಲೈನ್ ತಂಡ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂತರರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಹಿದಾಯತ್ ಅಡ್ಡೂರು, ಕೆಎನ್ಆರ್‌ಐ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಒಕ್ಕಲಿಗರ ಸಂಘ ದುಬೈ ಅಧ್ಯಕ್ಷ ಕಿರಣ್ ಗೌಡ, ಕರ್ನಾಟಕ ಸಂಘ ದುಬೈ ಅಧ್ಯಕ್ಷ ಶಶಿಧರ ನಾಗರಾಜಪ್ಪ, ಉಪಾಧ್ಯಕ್ಷ ದಯಾ ಕಿರೋಡಿಯನ್, ದುಬೈ ಅನಿವಾಸಿ ಕನ್ನಡಿಗರು ಸ್ಥಾಪಕ ಇಮ್ರಾನ್ ಖಾನ್ ಎರ್ಮಾಳ್, ಸಮೀರ್ ಉದ್ಯಾವರ, ಫಿರೋಜ್, ಬಿಸಿಸಿಐ ಯುಎಇ ಪ್ರಧಾನ ಕಾರ್ಯದರ್ಶಿ ಅನ್ವರ್ ಹುಸೈನ್, ಓವರ್‌ಸೀಸ್‌ ಮೂವೀಸ್‌ನ ದೀಪಕ್ ಸೋಮಶೇಖರ್, ಏಮ್ ಇಂಡಿಯಾ ಫೌಂಡೇಶನ್ ಮುಝಫ್ಫರ್ ಶೇಖ್, ಯೂಸುಫ್ ಶೇಖ್, ಬಾಹರ್ ಅಲ್ ನೂರ್‌ನ ಇಸ್ಮಾಯಿಲ್, ಗಲ್ಫ್ ಗೆಳೆಯರು ತಂಡದ ಸಾಗರ್ ಶೆಟ್ಟರ್ ಆಹಾರ ಸಾಮಗ್ರಿಗಳನ್ನು ವ್ಯವಸ್ಥೆ ಮಾಡಿ, ಜನರಿಗೆ ತಲುಪಿಸುವ ಕಾರ್ಯ ನಡೆಸಿದೆ. ಪರಿಸ್ಥಿತಿ ಸಂಪೂರ್ಣವಾಗಿ ಸುಧಾರಿಸುವವರೆಗೂ ಈ ನೆರವಿನ ಕಾರ್ಯ ಮುಂದುವರೆಯಲಿದೆ.

ಈ ಸುದ್ದಿ ಓದಿದ್ದೀರಾ? ಹಾವೇರಿ | ನೇಹಾ ಕೊಲೆ ಪ್ರಕರಣ; ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಎಸ್‌ಎಫ್‌ಐ ಒತ್ತಾಯ 

ಮಳೆ ಸಂಕಷ್ಟದಲ್ಲಿರುವ ಯಾವುದೇ ಅನಿವಾಸಿ ಕನ್ನಡಿಗರು ಊಟ, ನೀರು, ರೇಷನ್, ಔಷಧಿಯ ಸಹಾಯ ಬೇಕಿದ್ದಲ್ಲಿ +971 55 111 8555, +971529214783, +971 52 466 8185, +971526995413, +97155 597 1414 ಈ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕನ್ನಡಿಗಾಸ್ ಹೆಲ್ಪ್‌ಲೈನ್ ತಂಡ ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...