ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

Date:

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ ತಕ್ಕಂತೆ ಲಭ್ಯವಾಗಲು ಕೃಷಿ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ.

“ರೈತ ಕರೆ ಕೇಂದ್ರ” ಉನ್ನತೀಕರಣದ ಮಹತ್ವದ ಒಡಂಬಡಿಕೆಗೆ ವಿಕಾಸಸೌಧ ಕಚೇರಿಯಲ್ಲಿ ಇಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಸಹಿ ಹಾಕಿದರು.

ರೈತರ ಅಭಿವೃದ್ಧಿ ಪರ ಕೆಲಸಕ್ಕೆ ಒತ್ತು ನೀಡಿರುವ ರಾಜ್ಯ ಸರ್ಕಾರವು, ಈಗಾಗಲೇ ರೈತ ಕರೆ ಕೇಂದ್ರಕ್ಕೆ ಆಧುನಿಕ ತಂತ್ರಜ್ಞಾನದ ಸ್ಫರ್ಶ ನೀಡಿರುವ ಸಚಿವರು, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಡಂಬಡಿಕೆ ನಂತರ ಮಾತನಾಡಿದ ಸಚಿವ ಚಲುವರಾಯ ಸ್ವಾಮಿ, ಬೆಳೆ ಮಾಹಿತಿ, ಹವಾಮಾನ ಮಾಹಿತಿ, FRUITS ದತ್ತಾಂಶ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಸೇರಿದಂತೆ ಪ್ರಮುಖ ಕೃಷಿ ಮಾಹಿತಿಗಳನ್ನ ಸಮಗ್ರಗೊಳಿಸಿ, ವಿಶ್ಲೇಷಿಸಿ, ರೈತರಿಗೆ ನಿಖರ ಮತ್ತು ತಂತ್ರಜ್ಞಾನ ಆಧಾರಿತ ಸಲಹಾ ಸೇವೆಗಳನ್ನ ಒದಗಿಸಲು ಅನುಕೂಲವಾಗುತ್ತದೆಂದು ತಿಳಿಸಿದರು.

1001887357

ಈ ಹಿಂದೆ ರೈತ ಕರೆ ಕೇಂದ್ರದ ಸಹಾಯವಾಣಿಯ 8 ಬೇರೆ ಬೇರೆ ನಂಬರ್‌ಗಳು ಚಾಲ್ತಿಯಲ್ಲಿತ್ತು. ಇದನ್ನು ಸರಳೀಕರಿಸುವ ಉದ್ದೇಶದಿಂದ ಸಚಿವರು ಏಕ ರೈತ ಕರೆ ಸಹಾಯವಾಣಿ ಕೇಂದ್ರಕ್ಕೆ ಚಾಲನೆ ನೀಡಿದ್ದರು. ಇದೀಗ ಅದಕ್ಕೆ ಮತ್ತಷ್ಟು ಹೈಟೆಕ್( AI) ಸ್ಪರ್ಶ ನೀಡುತ್ತಿರುವ ಸಚಿವರು BEL ಸಂಸ್ಥೆ ಯೊಂದಿಗೆ ಒಡಂಬಡಿಕೆಗೆ ಸಹಿ ಮಾಡಿದರು.

ಒಪ್ಪಂದದ ಪ್ರಮುಖ ಅಂಶಗಳು:

  1. ಬಿ.ಇ.ಎಲ್ ಸಂಸ್ಥೆಯ EQUINOX ವೇದಿಕೆಯನ್ನು ಕೃಷಿ ಕ್ಷೇತ್ರಕ್ಕೆ ಹೊಂದಿಸುವುದು. ತಾಂತ್ರಿಕ ಸಲಹೆ ಹಾಗೂ ಮಾಹಿತಿ (ದತ್ತಾಂಶ) ಸಂಯೋಜನೆಗೆ ಬೆಂಬಲ ನೀಡುವುದು.
  2. ಕೇಂದ್ರೀಕೃತ ಡ್ಯಾಶ್‌ಬೋರ್ಡ್ ಗೆ ಕೃಷಿ ಇಲಾಖೆಯು ಕೃಷಿ ಸಂಬಂಧಿತ ಮಾಹಿತಿಗಳು ಸರ್ಕಾರಿ ಯೋಜನೆಗಳು ಮತ್ತು ನೀತಿ ವಿವರಗಳನ್ನ ಒದಗಿಸುತ್ತದೆ.
  3. ಈ ಯೋಜನೆ 2 ಹಂತಗಳಲ್ಲಿ ಜಾರಿಯಾಗುವುದು. ಮೊದಲನೆಯದಾಗಿ ಪ್ರಾಯೋಗಿಕ ಹಂತ (ಒಂದು ವರ್ಷ) ನಂತರ ಪೂರ್ಣ ಪ್ರಮಾಣದಲ್ಲಿ (4 ವರ್ಷ) ಜಾರಿಗೆ ತರುವುದು.
  4. ಈ ಯೋಜನೆ ರಾಜ್ಯ ಸರ್ಕಾರದ ರೈತರ ಬಲವರ್ಧನೆಗೆ ತಂತ್ರಜ್ಞಾನ ಬಳಸುವ ಬದ್ಧತೆಯ ಪ್ರತಿಬಿಂಬವಾಗಿದೆ. ರೈತ ಕರೆ ಕೇಂದ್ರವು ರೈತ ಸ್ನೇಹಿ ಏಕಗವಾಕ್ಷಿ (Singal Widow) ವ್ಯವಸ್ಥೆಯಾಗಿದೆ.
  5. ರೈತರ ಪ್ರಶ್ನೆಗಳಿಗೆ ಒಂದೇ ಸಹಾಯವಾಣಿಯನ್ನು ಒದಗಿಸುವುದು (ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ) ವಿವಿಧ ಚಾಲ್ತಿಯಲ್ಲಿರುವ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸುವುದು.
  6. ಸುಧಾರಿತ ಸಂವಹನ ಸಾಧನಗಳಾದ ವ್ಯಾಟ್ಸ್ಅಪ್, ಟೆಲಿಗ್ರಾಂ, ಚಾಟ್‌ಬಾಟ್, ವಿಡಿಯೋ ಕರೆ, ವಿಡಿಯೋ/ಆಡಿಯೋ ಕ್ಲಿಪ್‌ಗಳು ಡ್ಯಾಶ್‌ಬೋರ್ಡನ್ನು ಅಭಿವೃದ್ಧಿಪಡಿಸುವುದು ಹಾಗೂ AI ಆಧಾರಿತ ನಿರ್ಧಾರ ಬೆಂಬಲ ವ್ಯವಸ್ಥೆಯನ್ನ ಅಭಿವೃದ್ಧಿಪಡಿಸುವುದು.

ಇದೇ ವೇಳೆ ಹವಾಮಾನ ಬದಲಾವಣೆಯಂಥ ಈ ಸಂದರ್ಭದಲ್ಲಿ ಭತ್ತದ ಕೃಷಿಯನ್ನು ವೈಜ್ಞಾನಿಕವಾಗಿ ಬೆಳೆಯಲು ಭತ್ತದ ಕೃಷಿಯಲ್ಲಿ ಹಸಿರು ಮನೆ ಅನಿಲ ಹೊರಸೂಸುವಿಕೆ ತಗ್ಗಿಸಲು ಹಾಗೂ ನೀರನ್ನು ಮಿತವಾಗಿ ಬಳಸಿ ಭತ್ತ ಬೆಳೆಯುವ ಹೊಸ ಯೋಜನೆಗೆ ಸಚಿವರು J-PAL ಸಂಸ್ಥೆಯೊಂದಿಗೆ ಒಡಂಬಡಿಕೆಗೆ ಸಹಿ ಮಾಡಿದರು.

ಪ್ರಾಯೋಗಿಕವಾಗಿ ದಾವಣಗೆರೆ ಜಿಲ್ಲೆಯ ಆಯ್ದ ಗ್ರ‍್ರಾಮಗಳಲ್ಲಿ 210 ರೈತರ ಜಮೀನಿನಲ್ಲಿ ಪರ್ಯಾಯವಾಗಿ ನೀರು ನಿಲ್ಲಿಸುವ ಮತ್ತು ಒಣಗಿಸುವ ಪ್ರಕ್ರಿಯೆಯ ಹಾಗೂ ಭತ್ತದ ಬೆಳೆಯಲ್ಲಿ ನೇರ ಬಿತ್ತನೆ ತಾಂತ್ರಿಕತೆಯನ್ನು ಅಳವಡಿಸಿ, ಭತ್ತದ ಕೃಷಿ ಮಾಡುವ ಯೋಜನೆಯ ಮಹತ್ವದ ಒಪ್ಪಂದಕ್ಕೆ ಚಲುವರಾಯಸ್ವಾಮಿಯವರು ಸಹಿ ಹಾಕಿದರು.

ಈ ಯೋಜನೆಗೆ ನೋಂದಣಿ ಮಾಡಿದ ರೈತರಿಗೆ ಎಕರೆಗೆ ರೂ.4000ರ ವರೆಗೆ ಹಾಗೂ 2 ಎಕರೆಗೆ ರೂ.8000ರ ವರೆಗೆ ಸಹಾಯಧನ ನೀಡುವ ಮೂಲಕ ಪ್ರೋತ್ಸಾಹಧನ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಕೃಷಿ ಇಲಾಖೆ ಆಯುಕ್ತ ವೈ.ಎಸ್. ಪಾಟೀಲ್, ನಿರ್ದೇಶಕ ಜಿ.ಟಿ. ಪುತ್ರ, ಸೆಕೆಂಡರಿ ಅಗ್ರಿಕಲ್ಚರ್ ನಿರ್ದೇಶಕ ವೆಂಕಟರಮಣ ರೆಡ್ಡಿ, BEL ಹಾಗೂ J-PAL ಸಂಸ್ಥೆಯ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...