ಕರ್ನಾಟಕ ಬಂದ್ |‌ ರಾಜಧಾನಿ ಸಂಪೂರ್ಣ ಸ್ತಬ್ಧ; ಬಸ್‌ ಗಾಜು ಒಡೆದ ಪ್ರತಿಭಟನಾಕಾರರು

Date:

  • ಸ್ವಯಂಪ್ರೇರಿತವಾಗಿ ಅಂಗಡಿ-ಮಳಿಗೆ ಬಂದ್‌ ಮಾಡಿದ ವ್ಯಾಪಾರಸ್ಥರು
  • ರಾಜಧಾನಿಯಲ್ಲಿ 144 ಸೆಕ್ಷನ್​ ಜಾರಿ, ಪ್ರತಿಭಟನಾಕಾರರ ಬಂಧನ

ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಕನ್ನಡಪರ, ರೈತ ಸಂಘಟನೆಗಳು ಕರ್ನಾಟಕ ಬಂದ್​​ಗೆ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗಿದೆ.

ರಾಜಧಾನಿಯಲ್ಲಿ ಬಹುತೇಕ ವ್ಯಾಪಾರ – ವಹಿವಾಟು ಸ್ಥಗಿತವಾಗಿದೆ. ಬೆಳಗ್ಗೆಯಿಂದಲೇ ವ್ಯಾಪಾರಿಗಳು, ಸ್ವಯಂಪ್ರೇರಿತವಾಗಿ ಅಂಗಡಿ-ಮಳಿಗೆ ಬಂದ್‌ ಮಾಡಿದ್ದಾರೆ.

ಬೆಂಗಳೂರು ನಗರದ ಪುರಭವನ ಎದುರು ಜಮಾಯಿಸಿ ಮೆರವಣಿಗೆ ನಡೆಸಲು ಮುಂದಾಗಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು. ಇದೇ ಸಂದರ್ಭದಲ್ಲಿ ಬಸ್‌ನಲ್ಲಿ ಕುಳಿತಿದ್ದ ಪ್ರತಿಭಟನಾಕಾರರು ಬಿಎಂಟಿಸಿ ಬಸ್‌ ಗಾಜು ಒಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಬಂದ್​ಗೆ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​ ಬೆಂಬಲ ವ್ಯಕ್ತಪಡಿಸಿವೆ. ಅಲ್ಲದೇ ಬೆಂಗಳೂರಲ್ಲಿ 144 ಸೆಕ್ಷನ್​ ಜಾರಿ ಮಾಡಲಾಗಿದೆ. ಈಗಾಗಲೆ ಪೊಲೀಸರು ಬಂದೋಬಸ್ತ್​​ಗೆ ಫೀಲ್ಡ್​​ಗೆ ಇಳಿದಿದ್ದಾರೆ.

ಸಿಎಂ ಸಿವಾಸಕ್ಕೆ ಹೋಗುವ ಎಲ್ಲ ರಸ್ತೆಗಳಲ್ಲಿ ಬಂದೋಬಸ್ತ್

ಮುಖ್ಯಮಂತ್ರಿ ನಿವಾಸಕ್ಕೆ ಹೋಗುವ ಎಲ್ಲ ರಸ್ತೆಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಪ್ರತಿಭಟನಾಕಾರರು ಇಂದು (ಸೆ. 29) ಸಿಎಂ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ನೀಡಲಾಗಿದೆ.

ಬೆಂಗಳೂರಿನಲ್ಲಿ ಪ್ರತಿಭಟನೆಯ ಕಾವು ಜೋರಾಗುತ್ತಿದ್ದಂತೆ ಪೊಲೀಸರು ಎಲ್ಲೆಡೆ ಹೈ ಅಲರ್ಟ್ ಆಗಿದ್ದಾರೆ. ಪ್ರತಿಭಟನೆಗಳು ನಡೆಯುವ ಜಾಗಗಳಾದ ಟೌನ್ ಹಾಲ್ ಸೇರಿದಂತೆ ಕೆಲವಾರು ಸ್ಥಳಗಳನ್ನು ಮೊದಲೇ ಗುರುತಿಸಿದ್ದ ಪೊಲೀಸರು ಅಲ್ಲಿಗೆ ಆಗಮಿಸಿದ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ತುಂಬಿ ಫ್ರೀಡಂ ಪಾರ್ಕ್ ನತ್ತ ಕೊಂಡೊಯ್ದಿದ್ದಾರೆ.

ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಎಚ್ಚರಿಕೆ

ಬಂದ್ ನಲ್ಲಿ ಭಾಗಿಯಾಗಬಯಸಲಿರುವ ಎಲ್ಲ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಬಂದ್ ಹಿನ್ನೆಲೆಯಲ್ಲಿ ನಡೆಯುವ ಪ್ರತಿಭಟನೆಗಳಲ್ಲಿ ಯಾವುದೇ ಸರ್ಕಾರಿ ನೌಕರ ಭಾಗವಹಿಸುವಂತಿಲ್ಲ ಎಂದು ಸರ್ಕಾರದಿಂದ ಸುತ್ತೋಲೆ ಹೊರಡಿಸಿದೆ. ನಿಗಮ, ಮಂಡಳಿಗಳ ಪದಾಧಿಕಾರಿಗಳಿಗೂ ಸೂಚನೆ ನೀಡಿದೆ. ಅನಗತ್ಯವಾಗಿ ಇಂದು (ಸೆ. 29) ರಜೆ ಹಾಕಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಸರ್ಕಾರ ಎಚ್ಚರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...