ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದಿಂದ ವೆಬ್ ಪೋರ್ಟಲ್‌ ಲೋಕಾರ್ಪಣೆ

Date:

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ (KCCDC) ತನ್ನ ಹೊಸ ಸಾಲ, ಸಹಾಯಧನ ಹಾಗೂ ಕಲ್ಯಾಣ ಯೋಜನೆಗಳು ಮತ್ತು ಅಧಿಕೃತ ವೆಬ್ ಪೋರ್ಟಲ್‌ನ ಲೋಕಾರ್ಪಣೆ ಇಂದು ಬೆಂಗಳೂರಿನ ಶೇಷಾದ್ರಿಪುರದಲ್ಲಿರುವ ಕೆಎಂಡಿಸಿ ಭವನ ನೆರವೇರಿಸಿತು.

ಕಾರ್ಯಕ್ರಮವನ್ನು ವಕ್ಸ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ. ಝಡ್. ಜಮೀರ್ ಅಹ್ಮದ್ ಖಾನ್ ಅವರು ಉದ್ಘಾಟಿಸಿದರು. “ಕರ್ನಾಟಕ ಸರ್ಕಾರವು ‘ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು’ ಎಂಬ ಧೈರ್ಯದೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಮಾನ್ಯ ಮುಖ್ಯಮಂತ್ರಿ ಅವರು ಸಮಾಜದ ಅಂಚಿನಲ್ಲಿರುವ ಸಮುದಾಯಗಳ ಸಬಲೀಕರಣಕ್ಕಾಗಿ ಪ್ರತ್ಯೇಕ ನಿಗಮಗಳನ್ನು ಸ್ಥಾಪಿಸಿ, ವಿಶೇಷ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದ್ದಾರೆ. ಅದೇ ರೀತಿಯಲ್ಲಿ, ಕ್ರಿಶ್ಚಿಯನ್ ಸಮುದಾಯದ ಸಾಮಾಜಿಕ ಹಾಗೂ ಆರ್ಥಿಕ ಹಿತಕ್ಕಾಗಿ ಮತ್ತು ಅವರ ಸಂಸ್ಥೆಗಳ ಬಲವರ್ಧನೆಗಾಗಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗಿದೆ. ಮುಖ್ಯಮಂತ್ರಿಗಳವರು ನಿಗಮಕ್ಕೆ ನೀಡಿರುವ ₹250 ಕೋಟಿಯ ಅನುದಾನ ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ಉಪಯೋಗವಾಗಲೆಂದು ನಾನು ಆಶಿಸುತ್ತೇನೆ” ಎಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರು ನಿಗಮದ ಹೊಸ ಯೋಜನೆಗಳು ಕ್ರಿಶ್ಚಿಯನ್ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಲಿ ಎಂದು ಶುಭಾಶಯ ಕೋರಿದರು.

ನಿಗಮದ ಅಧ್ಯಕ್ಷ ಪ್ರೊ. ಎಸ್. ಜಾಫೆಟ್, ಈ ನಿಗಮದ ಸ್ಥಾಪನೆಗೆ ಕಾರಣರಾದ ಮುಖ್ಯಮಂತ್ರಿ, ಸಚಿವರು, ಸರ್ಕಾರ ಹಾಗೂ ಕ್ರಿಶ್ಚಿಯನ್ ಮುಖಂಡರಿಗೆ ಕೃತಜ್ಞತೆ ವ್ಯಕ್ತಪಡಿಸಿ, ನಿಗಮದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಬದ್ಧತೆಯನ್ನು ವ್ಯಕ್ತಪಡಿಸಿದರು. ಈ ನಿಗಮದ ಯೋಜನೆಗಳ ಬಗ್ಗೆ ಚರ್ಚ್‌ಗಳು, ಸಂಸ್ಥೆಗಳು ಮತ್ತು ಮುಖಂಡರು ಹೆಚ್ಚಿನ ಪ್ರಚಾರ ನೀಡುವುದರ ಮೂಲಕ ಅರ್ಹ ವ್ಯಕ್ತಿಗಳು ಈ ಯೋಜನೆಗಳ ಪ್ರಯೋಜನವನ್ನು ಪಡೆಯಲು ಸಹಕಾರ ನೀಡುವಂತೆ ವಿನಂತಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕಾರ್ಯಕ್ರಮದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಟೋನಿ ಮರಿಯಾ ಇಮ್ಯಾನ್ಯುಯಲ್, ನಿರ್ದೇಶಕ ಮಂಡಳಿಯ ಸದಸ್ಯ ಸಂಜೀವ್ ಕುಮಾರ್ ಜಾಗೀರ್ದಾರ್, ಪ್ರಶಾಂತ್ ರಾಜ್ ಜತ್ತನ್ನ, ಹರ್ಷ ಮೆಲ್ವಿನ್ ಲಾಸ್ರಾದೊ, ಸಂದೀಪ್ ಕೆ.ಸಿ. ಜೋಸೆಫ್ ಕುಮಾರ್, ಜಿ.ಜೆ. ರವಿಕುಮಾರ್, ಜೆ. ಕ್ಷೇವಿಯರ್. ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರು, ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಮತ್ತು ಅಲ್ಪಸಂಖ್ಯಾತರ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...