‘ಮರಣ ಇಚ್ಛೆಯ ಉಯಿಲು’ ರಾಜ್ಯದಲ್ಲಿ ಕಾರ್ಯಗತ, ದಯಾಮರಣ ಹಕ್ಕು ನೀಡಿ ಸರ್ಕಾರ ಆದೇಶ

Date:

ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದು, ಚೇತರಿಕೆಯೇ ಕಾಣದೆ ಜೀವನಪೂರ್ತಿ ಸಂಕಷ್ಟ ಅನುಭವಿಸುವ ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕು ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.

ರೋಗಿಯ ಘನತೆಯಿಂದ ಸಾಯುವ ಹಕ್ಕಿಗಾಗಿ ಸುಪ್ರೀಂ ಕೋರ್ಟ್‌ ನೀಡಿರುವ ನಿರ್ದೇಶನವನ್ನು ಜಾರಿಗೆ ತರಲು ರಾಜ್ಯ ಆರೋಗ್ಯ ಇಲಾಖೆ ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಆದೇಶ ಪ್ರತಿ ಹಂಚಿಕೊಂಡಿದ್ದಾರೆ.

ದಯಾಮರಣಕ್ಕೆ ಅವಕಾಶ ನೀಡುವುದನ್ನು ನಿರ್ಧರಿಸಲು ಇಬ್ಬರು ವೈದ್ಯರನ್ನೊಳಗೊಂಡ ಎರಡು ಮಂಡಳಿಗಳ ಸ್ಥಾಪನೆ ಮಾಡುವ ಬಗ್ಗೆಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಈ ಮೂಲಕ ಮಾರಕ ರೋಗದಿಂದ ಬಳಲುತ್ತಿರುವವರಿಗೆ ಘನತೆಯಿಂದ ಸಾಯುವ ಹಕ್ಕನ್ನು ನೀಡುವ ಮೂಲಕ ಸುಪ್ರೀಂ ಕೋರ್ಟ್​​ ನಿರ್ದೇಶನವನ್ನು ಸರ್ಕಾರ ಜಾರಿ ಮಾಡಿದಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ರಾಜ್ಯದ ಆರೋಗ್ಯ ಇಲಾಖೆಯು ರೋಗಿಯ ಘನತೆಯಿಂದ ಸಾಯುವ ಹಕ್ಕಿಗಾಗಿ ಸುಪ್ರೀಂ ಕೋರ್ಟ್‌ನ ನಿರ್ದೇಶನವನ್ನು ಜಾರಿಗೆ ತಂದಿದೆ. ಮರಣ ಇಚ್ಛೆಯ ಉಯಿಲು ಅಥವಾ ಲಿವಿಂಗ್ ವಿಲ್ ಸಹ ಹೊರತಂದಿದೆ. ಇದರಲ್ಲಿ ರೋಗಿಯು ಭವಿಷ್ಯದಲ್ಲಿ ತಮ್ಮ ವೈದ್ಯಕೀಯ ಚಿಕಿತ್ಸೆಯ ಬಗ್ಗೆ ತಮ್ಮ ಇಚ್ಛೆಯನ್ನು ದಾಖಲಿಸಬಹುದು” ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ ದೌರ್ಜನ್ಯ ಪ್ರಕರಣ: ಶಿಕ್ಷೆಯ ಪ್ರಮಾಣ ಕುಸಿತ; ದಲಿತ ಕಳಕಳಿಯ ವಕೀಲರ ನೇಮಕವಾಗಲಿ  

“ಚಿಕಿತ್ಸೆಯ ಸಂದರ್ಭದಲ್ಲಿ ಚೇತರಿಕೆ ಸಾಧ್ಯವಿಲ್ಲದ ಸ್ಥಿತಿಗೆ ತಲುಪಿದರೆ ಆ ಸ್ಥಿತಿಯಲ್ಲಿ ಬದುಕಲು ಇಷ್ಟ ಇಲ್ಲದವರು ತಾವು ಚಿಕಿತ್ಸೆಗೆ ಒಳಪಡುವ ಮೊದಲೇ ಈ ರೀತಿಯ ಉಯಿಲು ಬರೆಯಬಹುದು. ಇಂತಹ ಉಯಿಲು ಇದ್ದರೆ ಅದನ್ನು ಜಾರಿಮಾಡುವುದು ವೈದ್ಯರು ಹಾಗೂ ಬಂಧುಗಳ ಕರ್ತವ್ಯವಾಗುತ್ತದೆ. ರೋಗಿಯ ಕೃತಕ ಉಸಿರಾಟ ಅಥವಾ ಜೀವರಕ್ಷಕ ವೈದ್ಯಕೀಯ ಚಿಕಿತ್ಸೆಗೆ ತಡೆ ನೀಡಲು ಇದರಿಂದ ವೈದ್ಯರಿಗೆ ಅವಕಾಶ ಇರುತ್ತದೆ. ಬದುಕುವುದಿಲ್ಲ ಎಂದು ಗೊತ್ತಿದ್ದೂ ಅನಗತ್ಯವಾದ ದುಬಾರಿ ವೆಚ್ಚದ ಚಿಕಿತ್ಸೆ ನೀಡುವುದನ್ನು ತಪ್ಪಿಸಲು ಇದರಿಂದ ಸಾಧ್ಯವಾಗುತ್ತದೆ” ಎಂದು ಸಚಿವರು ತಿಳಿಸಿದ್ದಾರೆ.

“ಕರ್ನಾಟಕವು ಪ್ರಗತಿಪರ ರಾಜ್ಯವಾಗಿದೆ. ನ್ಯಾಯಯುತ ಸಮಾಜಕ್ಕಾಗಿ ಉದಾರ ಮತ್ತು ಸಮಾನ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ನಾವು ಯಾವಾಗಲೂ ಮುಂಚೂಣಿಯಲ್ಲಿದ್ದೇವೆ” ಎಂದು ಹೇಳಿದ್ದಾರೆ.

ಮಾರಣಾಂತಿಕ ರೋಗದಿಂದ ಬಳಲುತ್ತಿರುವ ವ್ಯಕ್ತಿಗೆ ಅಳವಡಿಸಿರುವ ಜೀವ ರಕ್ಷಕ ಸಾಧನ ತೆಗೆಯುವುದಕ್ಕೆ ಸಂಬಂಧಿಸಿದ ‘ಮರಣ ಇಚ್ಛೆಯ ಉಯಿಲಿಗೆ ಸಮ್ಮತಿ ನೀಡಿದ ದೇಶದ ಮೊದಲ ರಾಜ್ಯ ಗೋವಾ ಆಗಿದೆ. ಬಾಂಬೆ ಹೈಕೋರ್ಟ್‌ ಗೋವಾ ಪೀಠವು ವ್ಯಕ್ತಿಯೊಬ್ಬರ ‘ಮರಣ ಇಚ್ಛೆಯ ಉಯಿಲು’ (ಲಿವಿಂಗ್ ವಿಲ್‌) ಕಾರ್ಯಗತಗೊಳಿಸಲು 2024 ಜೂನ್‌ 1ರಂದು ಅನುಮತಿ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...