ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ: ಸಚಿವ ಸಂಪುಟ ಉಪಸಮಿತಿ ವರದಿ ಅನುಮೋದನೆ

Date:

ಕರ್ನಾಟಕ ರಾಜ್ಯದಲ್ಲಿ 2006 ರಿಂದ 2011ರವರೆಗೆ ನಡೆದ ಭಾರಿ ಪ್ರಮಾಣದ ಅಕ್ರಮ ಗಣಿಗಾರಿಕೆಯಿಂದ ರಾಜ್ಯದ ಸಂಪತ್ತಿಗೆ ಉಂಟಾದ ಲೂಟಿಯನ್ನು ತಡೆಗಟ್ಟಲು ರಾಜ್ಯ ಸರ್ಕಾರವು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಈ ಸಂಬಂಧ ರಚಿಸಲಾಗಿದ್ದ ಸಚಿವ ಸಂಪುಟದ ಉಪಸಮಿತಿಯ ವರದಿಯನ್ನು ದಿನಾಂಕ ಆ. 19 ರಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅನುಮೋದಿಸಲಾಗಿದೆ.

ಲೋಕಾಯುಕ್ತರ ವರದಿಯ ಪ್ರಕಾರ, ‘ಬಿ’ ವರ್ಗದ 60 ಕಬ್ಬಿಣದ ಅದಿರಿನ ಗಣಿ ಗುತ್ತಿಗೆಗಳಿಂದ 9.37 ಕೋಟಿ ಟನ್ ಮತ್ತು ‘ಸಿ’ ವರ್ಗದ 51 ಗಣಿ ಗುತ್ತಿಗೆಗಳಿಂದ 9.70 ಕೋಟಿ ಟನ್ ಕಬ್ಬಿಣದ ಅದಿರು ಅಕ್ರಮವಾಗಿ ತೆಗೆಯಲಾಗಿದೆ. ಒಟ್ಟಾರೆ, 19.07 ಕೋಟಿ ಮೆಟ್ರಿಕ್ ಟನ್ ಅದಿರು ಅಕ್ರಮವಾಗಿ ರಫ್ತಾಗಿದ್ದು, ರಾಜ್ಯಕ್ಕೆ ರೂ. 78,245 ಕೋಟಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಈ ಅಕ್ರಮದಲ್ಲಿ ರಾಜಕಾರಣಿಗಳು, ವ್ಯಾಪಾರಸ್ಥರು, ಅಧಿಕಾರಿಗಳು ಮತ್ತು ಇತರರು ಶಾಮೀಲಾಗಿದ್ದಾರೆ ಎಂಬುದು ಲೋಕಾಯುಕ್ತ ತನಿಖೆಯಿಂದ ದೃಢಪಟ್ಟಿದೆ.

ಸರ್ಕಾರದ ಕ್ರಮಗಳು
2013-2018ರ ಅವಧಿಯಲ್ಲಿ ರಾಜ್ಯ ಸರ್ಕಾರವು ಅಕ್ರಮ ಗಣಿಗಾರಿಕೆಯನ್ನು ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಂಡಿತ್ತಾದರೂ, ಸರ್ಕಾರ ಬದಲಾದ ನಂತರ ಈ ಕ್ರಮಗಳಿಗೆ ಹಿನ್ನಡೆಯಾಯಿತು. ಪ್ರಸ್ತುತ ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಸಚಿವ ಎಚ್.ಕೆ. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಉಪಸಮಿತಿಯನ್ನು ದಿನಾಂಕ 05.07.2025 ರಂದು ರಚಿಸಿತು. ಈ ಸಮಿತಿಯು 13.08.2025 ರಂದು ಸಲ್ಲಿಸಿದ ವರದಿಯ ಶಿಫಾರಸ್ಸುಗಳನ್ನು ಸರ್ಕಾರವು ಒಪ್ಪಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹೇಶ್‌ ಶೆಟ್ಟಿ ತಿಮರೋಡಿ ಬಂಧನ; ಜನರ ಪ್ರಶ್ನೆಗಳಿಗೆ ಸರ್ಕಾರದ ಉತ್ತರ ಏನು?

ಪ್ರಮುಖ ತೀರ್ಮಾನಗಳು:

ನಷ್ಟ ವಸೂಲಾತಿಗೆ ಕಾನೂನು ಚೌಕಟ್ಟು: ಅಕ್ರಮ ಗಣಿಗಾರಿಕೆಯಿಂದ ಉಂಟಾದ ಆರ್ಥಿಕ ನಷ್ಟವನ್ನು ವಸೂಲಿಗಾಗಿ ‘ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವ ಕಾಯ್ದೆ’ಯ ಕರಡು ಮಸೂದೆಯನ್ನು ಸಚಿವ ಸಂಪುಟವು ಅನುಮೋದಿಸಿದೆ. ಇದಕ್ಕಾಗಿ ವಸೂಲಾತಿ ಆಯುಕ್ತರನ್ನು ನೇಮಿಸಲಾಗುವುದು.

ತ್ವರಿತ ನ್ಯಾಯಾಲಯಗಳ ಸ್ಥಾಪನೆ: ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು.

ತನಿಖೆಯ ಮರುಪರಿಶೀಲನೆ: ವಿಶೇಷ ತನಿಖಾ ತಂಡವು ಸಲ್ಲಿಸಿದ 29 ‘ಬಿ’ ರಿಪೋರ್ಟ್‌ಗಳನ್ನು ಮರುಪರಿಶೀಲಿಸಲು ಮತ್ತು 8 ಪ್ರಕರಣಗಳ ‘ಬಿ’ ರಿಪೋರ್ಟ್‌ಗಳನ್ನು ನ್ಯಾಯಾಲಯದಿಂದ ಹಿಂಪಡೆಯಲು ತೀರ್ಮಾನಿಸಲಾಗಿದೆ.
ಅರಣ್ಯ ಇಲಾಖೆಗೆ ನಷ್ಟದ ಮೌಲ್ಯಮಾಪನ: ಅಕ್ರಮ ಗಣಿಗಾರಿಕೆಯಿಂದ ಅರಣ್ಯ ಇಲಾಖೆಗೆ ಉಂಟಾದ ನಷ್ಟವನ್ನು ಅಂದಾಜಿಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಗುವುದು.

ಸಿಬಿಐ ತನಿಖೆಗೆ ವೇಗ: ಕಳೆದ 10 ವರ್ಷಗಳಿಂದ ಸಿಬಿಐನಲ್ಲಿ ಬಾಕಿಯಿರುವ ಪ್ರಕರಣಗಳ ತನಿಖೆಯನ್ನು ತ್ವರಿತಗೊಳಿಸಲು ಅಥವಾ ರಾಜ್ಯದ ವಿಶೇಷ ತನಿಖಾ ತಂಡಕ್ಕೆ ವಾಪಸ್ ವರ್ಗಾಯಿಸಲು ಕೇಂದ್ರ ಸರ್ಕಾರವನ್ನು ಕೋರಲಾಗುವುದು.
ಕಾನೂನು ತಂಡದ ರಚನೆ: ಗಣಿಗಾರಿಕೆ ವಿಷಯದಲ್ಲಿ ಪರಿಣಿತಿ ಹೊಂದಿರುವ ಕಾನೂನು ಅಧಿಕಾರಿಗಳ ತಂಡವನ್ನು ರೂಪಿಸಲಾಗುವುದು.

ಅಧಿಕಾರಿಗಳ ವಿರುದ್ಧ ಕ್ರಮ: ಅಕ್ರಮ ಗಣಿಗಾರಿಕೆಗೆ ಸಹಕರಿಸಿದ ಸರ್ಕಾರಿ ಅಧಿಕಾರಿಗಳು, ಮಧ್ಯವರ್ತಿಗಳು ಮತ್ತು ಖಾಸಗಿ ವ್ಯಕ್ತಿಗಳ ವಿರುದ್ಧ ಲೋಕಾಯುಕ್ತ ಶಿಫಾರಸ್ಸಿನಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಉಪಗ್ರಹ ಚಿತ್ರಗಳ ಆಧಾರದಲ್ಲಿ ಅಂದಾಜು
ಕರ್ನಾಟಕ ರಾಜ್ಯ ಬಾಹ್ಯಾಕಾಶ ಅನ್ವಯಿಕ ಕೇಂದ್ರ (KSRSAC) ಯ 2006-07 ಮತ್ತು 2018-19ರ ಉಪಗ್ರಹ ಚಿತ್ರಗಳ ಆಧಾರದಲ್ಲಿ, ‘ಬಿ’ ವರ್ಗದ 60 ಗಣಿಗಳಿಂದ 9.37 ಕೋಟಿ ಟನ್ ಮತ್ತು ‘ಸಿ’ ವರ್ಗದ 51 ಗಣಿಗಳಿಂದ 9.70 ಕೋಟಿ ಟನ್ ಕಬ್ಬಿಣದ ಅದಿರು ಹೆಚ್ಚುವರಿಯಾಗಿ ತೆಗೆಯಲಾಗಿದೆ ಎಂದು ಅಂದಾಜಿಸಲಾಗಿದೆ.

ಸರ್ಕಾರದ ಬದ್ಧತೆ
ರಾಜ್ಯ ಸರ್ಕಾರವು ಸಾರ್ವಜನಿಕ ಸಂಪತ್ತಿನ ಲೂಟಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದು, ಅಕ್ರಮ ಗಣಿಗಾರಿಕೆ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಮತ್ತು ರಾಜ್ಯಕ್ಕೆ ಉಂಟಾದ ನಷ್ಟವನ್ನು ವಸೂಲಾತಿ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...