ಡೆಂಘೀಯನ್ನು ‘ಸಾಂಕ್ರಾಮಿಕ ಕಾಯಿಲೆ’ ಎಂದು ಘೋಷಿಸಿದ ರಾಜ್ಯ ಸರ್ಕಾರ

Date:

ಕರ್ನಾಟಕದಲ್ಲಿ ಡೆಂಘೀ ಪ್ರಕರಣಗಳು ಅಧಿಕವಾಗುತ್ತಿರುವ ನಡುವೆ ರಾಜ್ಯ ಸರ್ಕಾರವು ಮಂಗಳವಾರ ಡೆಂಘೀಯನ್ನು ‘ಸಾಂಕ್ರಾಮಿಕ ಕಾಯಿಲೆ’ ಎಂದು ಘೋಷಿಸಿದೆ.

ಹಾಗೆಯೇ ಕರ್ನಾಟಕ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ 2020ಗೆ ತಿದ್ದುಪಡಿ ಮಾಡಿದ್ದು, ಆಗಸ್ಟ್ 31ರ ಕರ್ನಾಟಕ ಗೆಜೆಟ್​​ನಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಇನ್ನು ಮುಂದೆ ನೈರ್ಮಲ್ಯ(ಸ್ವಚ್ಚತೆ) ಕಾಪಾಡದವರಿಗೆ ದಂಡ ಬೀಳಲಿದೆ.

ಮನೆಗಳಿಗೆ ಹೊರಾಂಗಣ ಹಾಗೂ ಒಳಾಂಗಣದಲ್ಲಿ ನಿಯಮ ಉಲ್ಲಂಘನೆ ಮಾಡಿದರೆ 400 ರೂಪಾಯಿ ದಂಡ, ನಗರ ಪ್ರದೇಶ ಗ್ರಾಮಾಂತರದಲ್ಲಿ ಓಳಾಂಗಣ ಹಾಗೂ ಹೊರಾಂಗಣಕ್ಕೆ 200 ರೂಪಾಯಿ ದಂಡ ವಿಧಿಸಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೋಂ ಸ್ಟೇ, ರೆಸಾರ್ಟ್, ಹೋಟೆಲ್, ರೆಸ್ಟೋರಂಟ್, ಲಾಡ್ಜ್, ಮಾರ್ಕೆಟ್, ಸೂಪರ್ ಮಾರ್ಕೆಟ್, ಮಾಲ್, ಪಾರ್ಕ್, ಥಿಯೇಟರ್, ಕಾರ್ಖಾನೆ, ಕೈಗಾರಿಕೆ, ಶಾಲೆಗಳು, ಕನ್ವೆಷನ್ ಹಾಲ್, ವಾಣಿಜ್ಯ ಸಂಸ್ಥೆಗಳು, ಬೀದಿ ಬದಿ ತೆಂಗಿನಕಾಯಿ ಮಾರಾಟ, ಮೊದಲಾದವು ಕಡೆಗಳಲ್ಲಿ ನಿಯಮವನ್ನು ಉಲ್ಲಂಘಿಸಿದರೆ ಒಂದು ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ. ಗ್ರಾಮಾಂತರ ಭಾಗದಲ್ಲಿ 500 ರೂಪಾಯಿ ದಂಡ ವಿಧಿಸಲಾಗುತ್ತದೆ.

ಇದನ್ನು ಓದಿದ್ದೀರಾ? ಮಂಡ್ಯ | ಡೆಂಘೀ ಬಗ್ಗೆ ಶಾಲೆ-ಕಾಲೇಜುಗಳಲ್ಲಿ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಕುಮಾರ್

ತೆರೆದ ಸ್ಥಳಗಳಲ್ಲಿ ಡೆಂಘೀ ನಿಯಂತ್ರಣ ನಿಯಮಗಳನ್ನು ಉಲ್ಲಂಘಿಸಿದರೆ- ನಗರದ ಪ್ರದೇಶದಲ್ಲಿ 2 ಸಾವಿರ ರೂಪಾಯಿ ದಂಡ, ಗ್ರಾಮಾಂತರದಲ್ಲಿ 1 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ.

ಡೆಂಘೀ ನಿಯಂತ್ರಣ: ನಿಯಮಗಳನ್ನು ತಿಳಿಯಿರಿ

ಆಯಾ ಜಾಗದಲ್ಲಿ ಸೊಳ್ಳೆ ಬಾರದಂತೆ ಆ ಜಾಗದ ಮಾಲೀಕರು ಕ್ರಮ ವಹಿಸಬೇಕಾಗುತ್ತದೆ. ಹಾಗೆಯೇ ಸೊಳ್ಳೆಗಳ ಸಂತಾನೋತ್ಪತ್ತಿ ಹರಡಲು ಅವಕಾಶ ನೀಡಬಾರದು. ಖಾಲಿ ಜಾಗದಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು.

ಸ್ವತ್ತಿನ ಮಾಲೀಕರು ನಿಗಾ ವಹಿಸದಿದ್ದರೆ, ಸಂಬಂಧ ಪಟ್ಟ ಅಧಿಕಾರಿ ಸೊಳ್ಳೆ ಉತ್ಪತ್ತಿಯಾಗದಂತೆ ಕ್ರಮ ವಹಿಸಬೇಕು. ರಾಸಾಯನಿಕವನ್ನು ಸಿಂಪಡಿಸಿ, ಇದಕ್ಕೆ ಖರ್ಚಾದ ವೆಚ್ಚವನ್ನು ಸಂಬಂಧ ಪಟ್ಟ ಸ್ವತ್ತಿನ ಮಾಲೀಕರು ನೀಡುವಂತೆ ಕ್ರಮ ವಹಿಸಬೇಕು.

ಬಿಬಿಎಂಪಿ ಮತ್ತು ಮಂಗಳೂರಿನಲ್ಲಿ ತೆರೆದ ಸ್ಥಳದಲಿ ನಿಂತಿರುವ ನೀರು ತೆರವು ಮಾಡುವ ಜವಾಬ್ದಾರಿಯನ್ನು ಆಯಾ ಮಾಲೀಕರೇ ಹೊರಬೇಕು. ಸರಿಯಾಗಿ ಡೆಂಘೀ ನಿಯಂತ್ರಣ ಕ್ರಮಕೈಗೊಳ್ಳಲಾಗುತ್ತಿದೆಯೇ ಎಂದು ಅಧಿಕಾರಿಗಳು ಪರಿಶೀಲನೆ ನಡೆಸಬೇಕು.

ನಿಯಮವನ್ನು ಉಲ್ಲಂಘಿಸಿದವರಿಗೆ ಈ ಮೇಲೆ ತಿಳಿಸಿದಂತೆ ದಂಡ ವಿಧಿಸಲಾಗುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...