ಹೈಕೋರ್ಟ್ ತಿರಸ್ಕರಿಸಿದ್ದ ಅಪೂರ್ಣ ತನಿಖಾ ವರದಿ ಪ್ರಕಟ | ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ₹10 ಲಕ್ಷ ದಂಡ!

Date:

ಜಿಲ್ಲಾ ನ್ಯಾಯಾಧೀಶರೋರ್ವರ ವಿರುದ್ಧ ನಡೆಸಲಾಗಿದ್ದ ತನಿಖೆಯ ಅಪೂರ್ಣ ತನಿಖಾ ವರದಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದರೂ, ಅದನ್ನು ಪತ್ರಿಕೆಯಲ್ಲಿ ಪ್ರಕಟಿಸಿದ್ದಕ್ಕೆ ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌’ನ ಮಾಲೀಕರಿಗೆ ಕರ್ನಾಟಕ ಹೈಕೋರ್ಟ್ ಬರೋಬ್ಬರಿ 10 ಲಕ್ಷ ದಂಡ ವಿಧಿಸಿರುವುದಾಗಿ ‘ಲೈವ್ ಲಾ’ ವರದಿ ಮಾಡಿದೆ.

ನ್ಯಾಯಮೂರ್ತಿ ಎನ್‌ಎಸ್ ಸಂಜಯ್ ಗೌಡ ಅವರಿದ್ದ ಏಕಸದಸ್ಯ ಪೀಠವು, ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆ’ಯನ್ನು ಪ್ರಕಟಿಸುವ ಎಕ್ಸ್‌ಪ್ರೆಸ್ ಪಬ್ಲಿಕೇಷನ್ಸ್‌ (ಮಧುರೈ) ಲಿಮಿಟೆಡ್‌ ಮಾಲೀಕರಿಗೆ ಈ ದಂಡ ವಿಧಿಸಿದ್ದು, ಇದನ್ನು ಮುಂದಿನ ಎರಡು ತಿಂಗಳೊಳಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಿದೆ.

30.05.2013ರಂದು ಪ್ರಕಟವಾದ ತನಿಖಾ ವರದಿಯು ಪತ್ರಿಕೆಗೆ ಹೇಗೆ ಲಭ್ಯವಾಯಿತು ಎಂಬುದರ ಕುರಿತು ಹೈಕೋರ್ಟ್‌ನಿಂದ ತನಿಖೆ ನಡೆಸುವಂತೆಯೂ ನ್ಯಾಯಾಲಯವು ಇದೇ ವೇಳೆ ಆದೇಶದಲ್ಲಿ ಉಲ್ಲೇಖ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ಪತ್ರಿಕೆಯು ಜವಾಬ್ದಾರಿಯುತ ಪತ್ರಿಕೆ. ಆದರೆ ಈ ಪ್ರಕರಣದಲ್ಲಿ ಅದಕ್ಕೆ ಹೊಂದಿಕೆಯಾಗದ ರೀತಿಯಲ್ಲಿ ವರ್ತಿಸಿದೆ ಮತ್ತು ಅದರ ವರದಿಗಾರರು ಮತ್ತು ಸಂಪಾದಕರು ಸಹ ಸ್ವೀಕಾರಾರ್ಹವಲ್ಲದ ರೀತಿಯಲ್ಲಿ ವರ್ತಿಸಿದ್ದಾರೆ” ಎಂದು ನ್ಯಾಯಾಲಯವು ಹೇಳಿದೆ.

ದೇಶದ ಪ್ರಮುಖ ಪತ್ರಿಕೆಯೊಂದು ತಾನು ರಿಜಿಸ್ಟ್ರಾರ್ ಜನರಲ್ ಅವರನ್ನು ಸಂಪರ್ಕಿಸಿರುವುದಾಗಿ ಒಪ್ಪಿಕೊಂಡಿದ್ದು, ವಿವಾದಿತ ಲೇಖನವನ್ನು ಪ್ರಕಟಿಸುವ ಮೊದಲು ಅರ್ಜಿದಾರರಿಗೆ ವಿಚಾರಣೆಗೆ ಸಂಬಂಧಿಸಿದ ಸಂಪೂರ್ಣ ಕಾರ್ಯವಿಧಾನದ ಬಗ್ಗೆ ತನಗೆ ತಿಳಿದಿಲ್ಲ ಎಂದು ಹೇಳಲು ಅನುಮತಿಸಲಾಗುವುದಿಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯ ಪಟ್ಟಿದೆ.

ಏನಿದು ಪ್ರಕರಣ?

30.04.2014 ರಂದು ನಿವೃತ್ತಿ ಹೊಂದಿದ ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರೋರ್ವರಿಗೆ ಹಣಕಾಸಿನ ಅವ್ಯವಹಾರಗಳನ್ನು ಹೊರತುಪಡಿಸಿ ಇಬ್ಬರು ಸ್ಟೆನೋಗ್ರಾಫರ್ ಮಹಿಳೆಯರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂಬ ಕೆಲವು ಆರೋಪಗಳು ಕೇಳಿಬಂದಿದ್ದವು.

ಈ ಬಗ್ಗೆ ನ್ಯಾಯಾಲಯದ ಆಂತರಿಕ ವಿಚಾರಣಾ ಸಮಿತಿಯು ತನಿಖೆ ನಡೆಸಿತ್ತು. 30.05.2013ರಂದು ವಿಚಾರಣಾ ಪ್ರಾಧಿಕಾರದ ವರದಿಯನ್ನು ಸ್ವೀಕರಿಸದಿರಲು ಹೈಕೋರ್ಟ್‌ ಆಡಳಿತ ಸಮಿತಿಯು ತೀರ್ಮಾನಿಸಿತ್ತು. ಅಪೂರ್ಣಗೊಂಡಿದ್ದ ಹಿನ್ನೆಲೆಯಲ್ಲಿ ತನಿಖಾ ವರದಿಯನ್ನು ಗೌಪ್ಯವಾಗಿಡಲಾಗಿತ್ತು. ಈ ನಡುವೆ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯು 20.12.2013ರಂದು ಪತ್ರಿಕೆಯ ಮುಖಪುಟದಲ್ಲಿ, “ಸ್ಟೆನೋಗ್ರಾಫರ್ ಜೊತೆ ಅನಿರೀಕ್ಷಿತ ಅನ್ಯೋನ್ಯತೆಯಲ್ಲಿ ನ್ಯಾಯಾಧೀಶ ತಪ್ಪಿತಸ್ಥ’: ಹೈಕೋರ್ಟ್‌ ವರದಿ(Judge Guilty in ‘Unexpected Intimacy with Steno’: HC Report)” ಎಂಬ ಶೀರ್ಷಿಕೆಯಡಿಯಲ್ಲಿ ವರದಿ ಪ್ರಕಟಿಸಿತ್ತು. ಇದರ ವಿರುದ್ಧ ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...