ಸಾಮಾಜಿಕ, ಆರ್ಥಿಕ ಶೈಕ್ಷಣಿಕ ಸಮೀಕ್ಷೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಕಾರ: ಷರತ್ತು ವಿಧಿಸಿ ಸಮೀಕ್ಷೆಗೆ ಅನುಮತಿ

Date:

ರಾಜ್ಯದಲ್ಲಿ ಸೆಪ್ಟೆಂಬರ್ 21 ರಿಂದ ಆರಂಭವಾಗಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ಮಧ್ಯಂತರ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಆದರೇ, ಸಮೀಕ್ಷೆ ನಡೆಸುವ ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಕೆಲವೊಂದು ಷರತ್ತು ವಿಧಿಸಿ ಸಮೀಕ್ಷೆ ಮುಂದುವರಿಸಲು ಅವಕಾಶ ನೀಡಿದೆ. ಈ ಬಗ್ಗೆ ಮಧ್ಯಂತರ ಆದೇಶ ನೀಡಿದೆ.

ಇದು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಹಾಗೂ ರಾಜ್ಯ ಸರ್ಕಾರಕ್ಕೆ ಸಿಕ್ಕ ರೀಲೀಫ್ ಆಗಿದೆ. ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಹಾಗೂ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಪರವಾಗಿ ಹಿರಿಯ ವಕೀಲ ಪ್ರೊಫೆಸರ್ ರವಿವರ್ಮ ಕುಮಾರ್ ವಾದಮಂಡಿಸಿದ್ದರು. ಹೈಕೋರ್ಟ್ ಸಿಜೆ ವಿಭು ಭಕ್ರು ಅವರ ಪೀಠದಲ್ಲಿ ಕಳೆದ ಮೂರು ದಿನದಿಂದ ವಾದ-ಪ್ರತಿವಾದ ನಡೆದಿತ್ತು.

ಅಂತಿಮವಾಗಿ ಈಗ ಹೈಕೋರ್ಟ್ ಸಮೀಕ್ಷೆಯನ್ನು ಮುಂದುವರಿಸಲು ಗ್ರೀನ್ ಸಿಗ್ನಲ್ ನೀಡಿದೆ. ಮಧ್ಯಂತರ ತಡೆಯಾಜ್ಞೆ ನೀಡಬೇಕೆಂದು ರಾಜ್ಯ ಒಕ್ಕಲಿಗರ ಸಂಘ, ಬ್ರಾಹ್ಮಣ ಮಹಾಸಭಾ ಸೇರಿದಂತೆ ಕೆಲವು ಸಂಘಟನೆಗಳು ಹೈಕೋರ್ಟ್ ಗೆ ಮನವಿ ಮಾಡಿದ್ದವು. ಆದರೇ, ಹೈಕೋರ್ಟ್ ಈಗ ಮಧ್ಯಂತರ ತಡೆಯಾಜ್ಞೆ ನೀಡಲು ನಿರಾಕರಿಸಿದೆ. ಹೀಗಾಗಿ ಸಮೀಕ್ಷೆ ಮುಂದುವರಿಸಲು ಗ್ರೀನ್ ಸಿಗ್ನಲ್ ಸಿಕ್ಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿರೋಧದ ನಡುವೆಯೂ ಕಾವೇರಿಗೆ ಕಾಂಗ್ರೆಸ್ಸಿಗರ ಮೊಂಡಾರತಿ

ದೀರ್ಘಕಾಲ ವಾದ, ಪ್ರತಿವಾದ ಆಲಿಸಿದ ಕೋರ್ಟ್‌, ಪೀಠ – ಮೇಲಿನದನ್ನು ಗಮನದಲ್ಲಿಟ್ಟುಕೊಂಡು ನಡೆಯುತ್ತಿರುವ ಸಮೀಕ್ಷೆಯನ್ನು ನಾವು ನಿಷೇಧಿಸಲು ಸಾಧ್ಯವಿಲ್ಲ. ಆದಾಗ್ಯೂ ಸಂಗ್ರಹಿಸಿದ ದತ್ತಾಂಶವನ್ನು ಯಾವುದೇ ವ್ಯಕ್ತಿ ಬಹಿರಂಗಪಡಿಸಬಾರದು ಎಂದು ಸೂಚಿಸಿದೆ.

ದತ್ತಾಂಶವನ್ನು ಸಂಪೂರ್ಣವಾಗಿ ರಕ್ಷಿಸಲಾಗಿದೆ ಮತ್ತು ಗೌಪ್ಯವಾಗಿಡಲಾಗಿದೆ ಎಂದು ಆಯೋಗವು ಖಚಿತಪಡಿಸಿಕೊಳ್ಳಬೇಕು. ಈ ಪ್ರಕರಣ ಇತ್ಯರ್ಥವಾಗುವರೆಗೆ ಯಾವುದೇ ಕಾರಣಕ್ಕೂ ಸಂಗ್ರಹಿಸಿದ ಮಾಹಿತಿ ಸೋರಿಕೆ ಆಗುವುದಿಲ್ಲ ಎಂದು ಹಿಂದುಳಿದ ವರ್ಗಗಳ ಆಯೋಗ ಅಫಿಡವಿಟ್‌ ಸಲ್ಲಿಸಬೇಕು. ಜನರು ಸ್ವಯಂಪ್ರೇರಣೆಯಿಂದ ನೀಡಿದರಷ್ಟೇ ಮಾಹಿತಿ ಪಡೆಯಬೇಕು. ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಮಾಹಿತಿ ನೀಡುವಂತೆ ಯಾವುದೇ ಒತ್ತಡ ಹಾಕಬಾರದು ಎಂದು ಷರತ್ತು ವಿಧಿಸಿ ಡಿಸೆಂಬರ್ ಎರಡನೇ ವಾರಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...