ರಾಷ್ಟ್ರೀಯ ಹೆದ್ದಾರಿಯ ಅಪಘಾತ ಸ್ಪಾಟ್‌ಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ

Date:

ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಬಹುದಾದ 5,803 ಸ್ಥಳಗಳನ್ನು ಗುರುತಿಸಲಾಗಿದೆ. ಅವುಗಳನ್ನು ಬ್ಲ್ಯಾಕ್‌ ಸ್ಪಾಟ್‌ ಎಂದು ಕರೆಯಲಾಗುತ್ತದೆ. ಈ ಬ್ಲ್ಯಾಕ್‌ ಸ್ಪಾಟ್‌ಗಳಲ್ಲಿ ಅತಿ ಹೆಚ್ಚು ತಮಿಳುನಾಡಿನಲ್ಲಿ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಲೋಕಸಭೆಯಲ್ಲಿ ಗುರವಾರ ನಡೆದ ಚರ್ಚೆಯಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. 2018ರಿಂದ 2020ರವೆಗೆ ಸಂಗ್ರಹಿಸಲಾದ ಮಾಹಿತಿ ಪ್ರಕಾರ ಅವರು ಅಂಕಿ-ಅಂಶಗಳನ್ನು ನೀಡಿದ್ದಾರೆ. ಆದರೆ, 2020ರ ನಂತರದಲ್ಲಿ ಗುರುತಿಸಲಾಗಿರುವ ಬ್ಲ್ಯಾಕ್‌ಸ್ಪಾಟ್‌ಗಳ ಬಗ್ಗೆ ಗಡ್ಕರಿ ಅವರು ಮಾಹಿತಿ ನೀಡಿಲ್ಲ.

2020ರ ಹಿಂದಿನ ಅಂಕಿಅಂಶಗಳನ್ನು ಒದಗಿಸಿರುವ ಸಚಿವರು, “ದೇಶದ ರಾಷ್ಟ್ರೀಯ ಹೆದ್ದಾರಿಗಳಲ್ಲಿ 5,803 ಬ್ಲ್ಯಾಕ್‌ಸ್ಪಾಟ್‌ಗಳಿವೆ. ಅತಿ ಹೆಚ್ಚು ಬ್ಲ್ಯಾಕ್‌ಸ್ಪಾಟ್‌ಗಳನ್ನು ತಮಿಳುನಾಡು ಹೊಂದಿದೆ. ಎರಡನೇ ಸ್ಥಾನದಲ್ಲಿ ಪಶ್ಚಿಮ ಬಂಗಾಳ, ಮೂರನೇ ಸ್ಥಾನದಲ್ಲಿ ಕರ್ನಾಟಕ ಹಾಗೂ ನಾಲ್ಕನೇ ಸ್ಥಾನದಲ್ಲಿ ತೆಲಂಗಾಣ ಇದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಾವಳಿಗಳಂತೆ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನಿರ್ದಿಷ್ಟ 500 ಮೀ. ಉದ್ದದ ರಸ್ತೆಯಲ್ಲಿ ಮೂರು ವರ್ಷಗಳಲ್ಲಿ ಕನಿಷ್ಟ 5 ರಸ್ತೆ ಅಪಘಾತಗಳು ಸಂಭವಿಸಿದ್ದರೆ ಹಾಗೂ 10 ಮಂದಿ ಗಾಯಗೊಂಡಿದ್ದರೆ ಅಥವಾ ಸಾವನ್ನಪ್ಪಿದ್ದರೆ, ಆ ಸ್ಥಳವನ್ನು ಬ್ಲ್ಯಾಕ್‌ಸ್ಪಾಟ್‌ ಎಂದು ಗುರುತಿಸಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಅಂತಹ ಬ್ಲ್ಯಾಕ್‌ಸ್ಪಾಟ್‌ಗಳು ಕರ್ನಾಟಕದಲ್ಲಿ 551 ಇವೆ. ಅವುಗಳ ಪೈಕಿ ಬೆಂಗಳೂರು-ಮೈಸೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲೇ ನಾಲ್ಕು ಪ್ರಮುಖ ಬ್ಲ್ಯಾಕ್‌ಸ್ಪಾಟ್‌ಗಳಿವೆ. ರಾಮನಗರ ಬಳಿಯ ಅಗರ ಕ್ರಾಸ್, ಮಾಯಗಾನಹಳ್ಳಿ, ಲಕ್ಷ್ಮೀಪುರ ಮಂದಿರ ಹಾಗೂ ಮಂಡ್ಯದ ಪಿಎಸ್‌ ಕ್ರಾಸ್‌ಅನ್ನು ಬ್ಲ್ಯಾಕ್‌ಸ್ಪಾಟ್‌ ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿಗಳ ದುರಸ್ತಿ ಮತ್ತು ನಿರ್ವಹಣೆಗಾಗಿ 2018-19ರಿಂದ 2022-23ರ ನಡುವೆ 15,702.80 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಹಲವು ಬ್ಲ್ಯಾಕ್‌ಸ್ಪಾಟ್‌ಗಳನ್ನೂ ದುರಸ್ತಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕುಟುಂಬ ರಾಜಕಾರಣ ವಿರೋಧಿಸಿ ಮಾತನಾಡುವ ಮೋದಿ ಬೂಟಾಟಿಕೆ ಮನುಷ್ಯ : ಕಾಂಗ್ರೆಸ್‌ ಟೀಕೆ

‘2018-19ರಿಂದ 2022-23ರ ವರ್ಷದವರೆಗಿನ ಐದು ವರ್ಷದ ಅವಧಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎನ್​ಎಚ್​ಎಐ ರಸ್ತೆಗಳ ದುರಸ್ತಿ ಮತ್ತು ಪಾಲನೆಗೆ 15,702.80 ಕೋಟಿ ರೂ ವೆಚ್ಚ ಮಾಡಿದೆ. ಇದರಲ್ಲಿ ಬ್ಲ್ಯಾಕ್ ಸ್ಪಾಟ್​ಗಳ ದುರಸ್ತಿಯ ವೆಚ್ಚವೂ ಸೇರಿದೆ’ ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಗಡ್ಕರಿ ಅವರು ನೀಡಿರುವ ಮಾಹಿತಿಯಂತೆ, ತಮಿಳುನಾಡಿನ ರಾಷ್ಟ್ರೀಯ ಹೆದ್ದಾರಿಗಳಲ್ಲಿ 748 ಬ್ಲ್ಯಾಕ್‌ಸ್ಪಾಟ್‌ಗಳಿವೆ. ಪಶ್ಚಿಮ ಬಂಗಾಳದಲ್ಲಿ 701, ಕರ್ನಾಟಕದಲ್ಲಿ 551 ಹಾಗೂ ತೆಲಂಗಾಣದಲ್ಲಿ 485 ಬ್ಲ್ಯಾಕ್‌ಸ್ಪಾಟ್‌ಗಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...