ರೈತರ ಸಂಕೇತವಾದ ʼಹಸಿರು ಶಾಲುʼ ದೇಶಕ್ಕೆ ಕರ್ನಾಟಕದ ಕೊಡುಗೆ: ರಾಕೇಶ್‌ ಟಿಕಾಯತ್‌

Date:

“ರೈತರ ಸಂಕೇತವಾದ ಹಸಿರು ಶಾಲು ಈಗ ಇಡೀ ದೇಶದ ರೈತರ ಸಂಕೇತವಾಗಿದೆ.ಇದು ಕರ್ನಾಟಕದ ಬಹುದೊಡ್ಡ ಕೊಡುಗೆ. ಕರ್ನಾಟಕ ಮತ್ತು ತಮಿಳುನಾಡಿನ ರೈತರು ಹಾಕುತ್ತಿದ್ದ ಪ್ರತಿಭಟನೆಯ ಸಮಯದಲ್ಲಿ ಬಳಸುತ್ತಿದ್ದ ಹಸಿರು ಶಾಲು ಈಗ ದೇಶದ ಎಲ್ಲ ರೈತರ ಹೆಗಲೇರಿದೆ. ರೈತರ ದೊಡ್ಡ ಸಂಕೇತವಾಗಿದೆ, ರೈತರ ಹೆಸರಿನಲ್ಲಿ ನಡೆಯುವ ಎಲ್ಲ ಕಾರ್ಯಕ್ರಮಗಳಲ್ಲಿ ರಾಜಕೀಯ ಪಕ್ಷಗಳೂ ಹಸಿರು ಶಾಲು ಬಳಸುತ್ತಿವೆ” ಎಂದು ಸಂಯುಕ್ತ ಕಿಸಾನ್‌ ಮೋರ್ಚಾದ ಮುಖಂಡ ರಾಕೇಶ್‌ ಟಿಕಾಯತ್‌ ಶ್ಲಾಘಿಸಿದರು.

ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಬೆಂಗಳೂರಿನಲ್ಲಿ ಆಯೋಜಿಸಿದ್ದ”ನಮ್ಮ ಎಂಡಿಎಂ, ನಿದ್ರೆಗೆ ಜಾರದ ಸಮಾಜವಾದಿ ಪ್ರಜ್ಞೆ” ಪ್ರೊ ನಂಜುಂಡಸ್ವಾಮಿ ಅವರ 88ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಪ್ರೊ ನಂಜುಂಡಸ್ವಾಮಿ ಅವರು ದಕ್ಷಿಣ ಮತ್ತು ಉತ್ತರ ಭಾರತ ರೈತ ಚಳವಳಿಯನ್ನು ಭಾವನಾತ್ಮಕವಾಗಿ ಬೆಸೆದವರು. ಅವರಿಗೆ ಹಿಂದಿ ಬರುತ್ತಿರಲಿಲ್ಲ, ಟಿಕಾಯತ್‌ ಅವರಿಗೆ ಕನ್ನಡ -ಇಂಗ್ಲಿಷ್‌ ಬರುತ್ತಿರಲಿಲ್ಲ. ಆದರೆ ಅಂತರರಾಷ್ಟ್ರೀಯ ಮಟ್ಟದ ಕೃಷಿ ನೀತಿಗಳ ಬಗ್ಗೆ ಜ್ಞಾನ ಇದ್ದವರಾಗಿದ್ದರು. 1993ರಲ್ಲಿ ದೆಹಲಿಯಲ್ಲಿ WTO ಒಪ್ಪಂದದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಆನಂತರ ಟಿಕಾಯತ್‌ ಮತ್ತು ಪ್ರೊಫೆಸರ್‌ ಹಲವು ಪ್ರತಿಭಟನೆಗಳನ್ನು ಜೊತೆಯಾಗಿ ಹಮ್ಮಿಕೊಂಡಿದ್ದರು” ಎಂದು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗಲೂ ಚುಕ್ಕಿ ನಂಜುಂಡಸ್ವಾಮಿಯಂತವರು ಅದೇ ರೀತಿಯ ಆಶಯ ಹೊತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಘಟನೆ ಮಾಡುತ್ತಿದ್ದಾರೆ. ಭಾರತದಲ್ಲಿ ನೂರಾರು ಸಂಘಟನೆಗಳಿವೆ. ಪ್ರೊಫೆಸರ್‌ ಅವರು ಪಂಜಾಬ್‌, ಹರಿಯಾಣ, ಉತ್ತರಪ್ರದೇಶದ ರೈತ ಸಂಘಟನೆಗಳನ್ನು ಒಂದು ಗೂಡಿಸಿ ಸಮನ್ವಯ ಸಮಿತಿಯ ಅರ್ಥದಲ್ಲಿ ಕೆಲಸ ಮಾಡಿದ್ದಾರೆ. ಈಗಲೂ ನಂಜುಂಡಸ್ವಾಮಿಯವರ ಆಶಯದಂತೆ ಎಲ್ಲ ಕಡೆ ಸಂಘಟನೆ ನಡೆಯುತ್ತಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸಂಯುಕ್ತ ಕಿಸಾನ್‌ ಮೋರ್ಚಾದ ಬೃಹತ್‌ ಪ್ರತಿಭಟನೆ ನಂಜುಂಡಸ್ವಾಮಿ ಅವರ ಆಶಯದಂತೆ, ಮಾರ್ಗದರ್ಶನದಂತೆಯೇ ನಡೆದಿದೆ.

ಈಗಲೂ ದೇಶದಲ್ಲಿ ಬಹಳ ಸಮಸ್ಯೆಗಳಿವೆ. ದಕ್ಷಿಣ ಭಾರತದಲ್ಲಿ ತೆಂಗು ಬೆಳೆಗಾರರ ಸಮಸ್ಯೆ, ಶ್ರೀನಗರದಲ್ಲಿ ಸೇಬು ಬೆಳೆಗಾರರ ಸಮಸ್ಯೆ ಇದೆ. ನಿರುದ್ಯೋಗ ಹೆಚ್ಚುತ್ತಿದೆ, ಆದಾಯ ಕಡಿಮೆಯಾಗುತ್ತಿದೆ. ದೇಹಲಿಯಲ್ಲಿ ನಡೆದ ಕಿಸಾನ್‌ ಆಂದೋಲನ ರೀತಿಯ ಆಂದೋಲನ ಮತ್ತೆ ಆಗಬೇಕಿದೆ. ಸ್ವಾಮಿನಾಥನ್‌ ಆಯೋಗದ ಶಿಫಾರಸಿನಂತೆ ರೈತರಿಗೆ ಪರಿಹಾರ ಸಿಕ್ಕಿಲ್ಲ. ಬೆಂಬಲ ಬೆಲೆ, ಫಸಲ್‌ಭಿಮಾ ಯೋಜನೆ ಸೇರಿದಂತೆ ಹಲವು ಸಮಸ್ಯೆಗಳಿವೆ” ಎಂದು ವಿವರಿಸಿದರು.

“ಇದೇ 21ರಂದು ದೆಹಲಿಯಲ್ಲಿ ಟ್ರ್ಯಾಕ್ಟರ್‌ ಪ್ರತಿಭಟನೆಗೆ ಕರೆ ಕೊಟ್ಟಿದ್ದೇವೆ. ಹಿಂದೆ ಬಸ್‌ ಮತ್ತು ರೈಲಿನಲ್ಲಿ ಜನ ಸೇರಿಸುತ್ತಿದ್ದೆವು. ಈಗ ನಮ್ಮ ಟ್ರ್ಯಾಕ್ಟರ್‌ನಲ್ಲೇ ಜನ ಸೇರಿಸುತ್ತೇವೆ. ಈಗ ವಿದೇಶದ ಜನರೂ ನಮ್ಮ ರೀತಿ ಟ್ರ್ಯಾಕ್ಟರ್‌ ಪ್ರತಿಭಟನೆ ಮಾಡುತ್ತಿದ್ದಾರೆ. ಒಂದು ಗ್ರಾಮದಿಂದ ಒಂದು ಟ್ರ್ಯಾಕ್ಟರ್‌ನಲ್ಲಿ ಹತ್ತು-ಹದಿನೈದು ಜನ ಕರೆತರುವುದು ನಮ್ಮ ಫಾರ್ಮುಲಾ. ಆಂದೋಲನದಲ್ಲಿ ರೈತರಿಗೆ ಭಾಗವಹಿಸಲು ಸಹಾಯವಾಗುವಂಥ ಫಾರ್ಮುಲಾ ಇದಾಗಿದೆ” ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...