ಕೊಡಗು | ಆಯಾ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನೂ ನೇರಪಾವತಿಗೆ ಒಳಪಡಿಸುವಂತೆ ಆಗ್ರಹ

Date:

ಕಾಂಗ್ರೆಸ್ ಪ್ರಣಾಳಿಕೆಯ ಘೋಷಣೆಯಂತೆ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೊಳಪಡಿಸಲು ಆಗ್ರಹಿಸಿ ನುಡಿದಂತೆ ನಡೆಯಿರಿ ಎಂಬ ಘೋಷಣೆಯಡಿ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪಟ್ಟಣ ಪಂಚಾಯಿತಿ, ಹೊರಗುತ್ತಿಗೆ ನೌಕರರ ಸಂಘದ ಕಾರ್ಯಕರ್ತರು ನವೆಂಬರ್‌ 15ರಂದು ಆಯಾ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಧರಣಿ ನಡೆಸಿದರು.

ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಹೊರಗುತ್ತಿಗೆ ನೌಕರರು ಮಾತನಾಡಿ, “ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುವ ಪೌರಕಾರ್ಮಿಕರನ್ನು ಖಾಯಂ ಮಾಡಲು ಮುಂದಾಗಿರುವ ಸರ್ಕಾರ ಪೌರಕಾರ್ಮಿಕರೊಟ್ಟಿಗೆ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುವ ವಾಹನ ಚಾಲಕರು. ನೀರುಸರಬರಾಜು ಸಹಾಯಕರು ಲೋಡರ್ಸ್, ಕ್ಲೀನರ್ಸ್ ಯೂಜಿಡಿ ಕಾರ್ಮಿಕರು ಸೇರಿದಂತೆ 15 ಸಾವಿರಕ್ಕು ಅಧಿಕ ನೌಕರರನ್ನು ಗುತ್ತಿಗೆಯಲ್ಲಿ ಉಳಿಸಲಾಗಿದೆ. ನಗರಗಳ ಸ್ವಚ್ಛತೆ ಹಾಗೂ ಕುಡಿಯುವ ನೀರು ನಿರ್ವಹಣೆಯಲ್ಲಿ ಹೊರಗುತ್ತಿಗೆ ನೌಕರರ ಪಾತ್ರ ಮಹತ್ವದ್ದಾಗಿದೆ” ಎಂದರು.

“2017ರಲ್ಲಿ ಪೌರಕಾರ್ಮಿಕರ ನೇಮಕಾತಿಗೊಳಿಸಿದಾಗಲೂ ಹೊರಗುತ್ತಿಗೆ ನೌಕರರನ್ನು ಗುತ್ತಿಗೆಯಲ್ಲಿ ಉಳಿಸಲಾಯಿತು. 1964ರ ಪೌರಾಡಳಿತ ಕಾಯ್ದೆ ಪ್ರಕಾರ ಕಸ ಸಾಗಿಸುವ ವಾಹನ ಚಾಲಕರು ಲೋಡರ್ಸ್, ಕ್ಲೀನರ್ಸ್, ಹೆಲ್ಪರ್ಸ್, ಯೂಜಿಡಿ ಕಾರ್ಮಿಕರನ್ನೂ ಪೌರಕಾರ್ಮಿಕರೆಂದು ಗುರುತಿಸಲಾಗಿದೆ. ಆದರೂ ನಗರಾಭಿವೃದ್ಧಿ ಅಧಿಕಾರಿಗಳು ತಾರತಮ್ಯ ಎಸಗಿ ನೇರನೇಮಕಾತಿ ಹಾಗೂ ನೇರಪಾವತಿಯಲ್ಲಿ ಹೊರಗುತ್ತಿಗೆ ನೌಕರರಿಗೆ ಅನ್ಯಾಯ ಎಸಗಲಾಯಿತು. ಈಗಲೂ ಕೂಡ ಹೊರಗುತ್ತಿಗೆ ನೌಕರರನ್ನು ಗುತ್ತಿಗೆಯಲ್ಲಿ ಮುಂದುವರಿಸುವ ಸರ್ಕಾರದ ನೀತಿ ಒಂದು‌ ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಎಂಬಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದೇ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವವರ ಮಧ್ಯೆ ಒಡೆದಾಳುವ ನೀತಿ ಅನುಸರಿಸುವುದು ಶೋಭೆಯಲ್ಲ. ಕಳೆದ ಸರ್ಕಾರದಲ್ಲಿ ತೀವ್ರ ಹೋರಾಟದ ಪರಿಣಾಮ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ನೇರಪಾವತಿ ಕಡತ ಹಣಕಾಸು ಇಲಾಖೆಯ ಪರೀಶೀಲನೆಯಲ್ಲಿರುವಾಗಲೆ ವಿಧಾನಸಭೆ ಸಾರ್ವತ್ರಿಕ ಚುನಾವಣೆಗಳು ಘೋಷಣೆಯಾದವು (ಕಡತ ಸಂಖ್ಯೆ :UDD/11/GEL/2023)(UDD/GEL/137-22) ಈ ಸಂಬಂದ ಕಡತವನ್ನು ಸಂಪುಟದಲ್ಲಿ ಅಂಗೀಕರಿಸಬೇಕು” ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ‘ವಧು ಭಾಗ್ಯʼಕ್ಕೆ ಒತ್ತಾಯ; ಆದಿಚುಂಚನಗಿರಿಗೆ ಯುವಕರ ಪಾದಯಾತ್ರೆ

“ಕಳೆದ ವಿಧಾನಸಭೆ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ನೇರಪಾವತಿಗೆ ತರಬೇಕು. ಘನ ತ್ಯಾಜ್ಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಕಸ ಸಾಗಿಸುವ ವಾಹನ ಚಾಲಕರು, ಲೋಡರ್ಸ್, ಕ್ಲೀನರ್ಸ್ ಹೆಲ್ಪರ್ಸ್, ಯೂಜಿಡಿ ಕಾರ್ಮಿಕರು, ಸ್ಯಾನಿಟರಿ ಸೂಪರ್ ವೈಸರ್‌ಗಳನ್ನು ಏಕಕಾಲಕ್ಕೆ ಗುತ್ತಿಗೆ ಪದ್ಧತಿ ಬದಲು ನೇರಪಾವತಿಗೆ ತರಬೇಕು. 1964ರ ಪೌರಾಡಳಿತ ಕಾಯ್ದೆ ಪ್ರಕಾರ ಇವರನ್ನು ಪೌರಕಾರ್ಮಿಕರೆಂದು ಒಪ್ಪಿರುವುದರಿಂದ ಹಾಲಿ ನೇಮಕಾತಿಯಲ್ಲಿ ಇವರಿಗೂ ಅವಕಾಶ ಕಲ್ಪಿಸಬೇಕು. ನೀರು ಸರಬರಾಜು ಸಹಾಯಕರು ಬೀದಿದೀಪ ನಿರ್ವಾಹಕರು ಸ್ಮಶಾನ ಕಾವಲುಗಾರರನ್ನು ಏಕಕಾಲಕ್ಕೆ ನೇರಪಾವತಿಗೆ ತಂದು ಖಾಯಂಗೊಳಿಸಬೇಕು” ಎಂದು ಆಗ್ರಹಿಸಿದರು.

ಸಂಘಟನೆಯ ರಾಜ್ಯಾಧ್ಯಕ್ಷ ಸೇರಿದಂತೆ ಬಹುತೇಕ ಕಾರ್ಮುಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...